AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈಗ ನಾನು ಪುನೀತ್​ ಮನೆಗೆ ಹೋಗುತ್ತಿಲ್ಲ’; ಕಾರಣ ಸಮೇತ ವಿವರಿಸಿದ ಅಲ್ಲು ಅರ್ಜುನ್

‘ಪುಷ್ಪ’ ನೋಡೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಚಿತ್ರ ತೆಲುಗು ಮಾತ್ರವಲ್ಲದೆ, ಕನ್ನಡದಲ್ಲೂ ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಈಗಾಗಲೇ ಸಾಕಷ್ಟು ಪ್ರಚಾರ ನೀಡಲಾಗಿದೆ. ಹೈದರಾಬಾದ್​, ಚೆನ್ನೈ ಮೊದಲಾದ ಕಡೆಗಳಲ್ಲಿ ಚಿತ್ರದ ಪ್ರಚಾರ ಕಾರ್ಯ ನಡೆಯುತ್ತಿದೆ.

‘ಈಗ ನಾನು ಪುನೀತ್​ ಮನೆಗೆ ಹೋಗುತ್ತಿಲ್ಲ’; ಕಾರಣ ಸಮೇತ ವಿವರಿಸಿದ ಅಲ್ಲು ಅರ್ಜುನ್
ಅಲ್ಲು ಅರ್ಜುನ್​-ಪುನೀತ್​
TV9 Web
| Edited By: |

Updated on: Dec 15, 2021 | 4:51 PM

Share

ಪುನೀತ್​ ರಾಜ್​ಕುಮಾರ್ (Puneeth Rajkumar)​ ನಿಧನ ಹೊಂದಿರುವ ವಿಚಾರ ಕೋಟ್ಯಂತರ ಜನರಿಗೆ ಬೇಸರ ಮೂಡಿಸಿದೆ. ಪರಭಾಷೆಯ ಸ್ಟಾರ್​ಗಳು ಕೂಡ ಪುನೀತ್ ಅವರನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಅಪ್ಪು ಅವರ ನಿವಾಸಕ್ಕೆ ಭೇಟಿ ನೀಡಿ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅಲ್ಲು ಅರ್ಜುನ್ (Allu Arjun) ಅವರು ಮಾತ್ರ ಪುನೀತ್ ಮನೆಗೆ ತೆರಳಿಲ್ಲ. ಈ ಬಗ್ಗೆ ಅನೇಕರು ಪ್ರಶ್ನೆ ಮಾಡಿದ್ದರು. ಪುನೀತ್​ ನಿವಾಸಕ್ಕೆ ತೆರಳಿ ಎಂದು ಅಲ್ಲು ಅರ್ಜುನ್​ ಎದುರು ಬೇಡಿಕೆ ಇಟ್ಟಿದ್ದರು. ಈಗ ಅವರು ಈ ಬಗ್ಗೆ ಮಾತನಾಡಿದ್ದಾರೆ. ಎಲ್ಲ ವಿಚಾರಗಳಿಗೂ ಸ್ಪಷ್ಟನೆ ನೀಡಿದ್ದಾರೆ.

‘ಪುಷ್ಪ’ ನೋಡೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಚಿತ್ರ ತೆಲುಗು ಮಾತ್ರವಲ್ಲದೆ, ಕನ್ನಡದಲ್ಲೂ ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಈಗಾಗಲೇ ಸಾಕಷ್ಟು ಪ್ರಚಾರ ನೀಡಲಾಗಿದೆ. ಹೈದರಾಬಾದ್​, ಚೆನ್ನೈ ಮೊದಲಾದ ಕಡೆಗಳಲ್ಲಿ ಚಿತ್ರದ ಪ್ರಚಾರ ಕಾರ್ಯ ನಡೆಯುತ್ತಿದೆ. ಇಂದು (ಡಿಸೆಂಬರ್​ 15) ಬೆಂಗಳೂರಿಗೆ ಸಿನಿಮಾ ತಂಡ ಆಗಮಿಸಿತ್ತು. ಈ ವೇಳೆ ಸಿನಿಮಾ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದೆ. ಪುನೀತ್​ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ಕೂಡ ನಡೆದಿದೆ.

‘ಪುನೀತ್​ ರಾಜ್​ಕುಮಾರ್​ ಕುಟುಂಬಕ್ಕೆ ನನ್ನ ಸಂತಾಪ ಇದೆ. ‘ಪುಷ್ಪ’ ಸಿನಿಮಾ ಕೆಲಸಗಳಿಂದ ಬೆಂಗಳೂರಿಗೆ ಬರೋಕೆ ಆಗಿಲ್ಲ. ಈಗ ‘ಪುಷ್ಪ’ ಸಿನಿಮಾ ಪ್ರಮೋಷನ್​ಗೆ ಬೆಂಗಳೂರಿಗೆ ಬಂದಿದ್ದೇನೆ. ಈ ಸಂದರ್ಭದಲ್ಲಿ ನಾನು ಅಲ್ಲಿಗೆ ಹೋಗೋಕೆ ಇಷ್ಟಪಡುವುದಿಲ್ಲ. ‘ಪುಷ್ಪ’ ರಿಲೀಸ್​ ಆದ ನಂತರ ಮತ್ತೊಮ್ಮೆ ಬೆಂಗಳೂರಿಗೆ ಬರುತ್ತೇನೆ. ಬಂದು ಇಡೀ ಕುಟುಂಬವನ್ನು ಭೇಟಿ ಆಗುತ್ತೇನೆ. ಇದು ಸೂಪರ್​ ಎಂದು ಹೇಳುವಂತಹ ವಿಚಾರ ಅಲ್ಲ. ಅದು ನನ್ನ ಕರ್ತವ್ಯ’ ಎಂದರು ಅಲ್ಲು ಅರ್ಜುನ್​.

‘ಪುಷ್ಪ’ ಸಿನಿಮಾದ ಬುಕಿಂಗ್​ ಈಗಾಗಲೇ ಆರಂಭಗೊಂಡಿದೆ. ಸಿನಿಮಾಗೆ ಅದ್ದೂರಿಯಾಗಿ ಓಪನಿಂಗ್​ ಸಿಗುವ ಸಾಧ್ಯತೆ ಇದೆ. ಬಹುತೇಕ ಶೋಗಳು ಈಗಾಗಲೇ ಹೌಸ್​ಫುಲ್​ ಆಗುತ್ತಿದೆ. ‘ಪುಷ್ಪ’ ಚಿತ್ರಕ್ಕೆ ಸುಕುಮಾರ್​ ಅವರ ನಿರ್ದೇಶನವಿದೆ. ಡಾಲಿ ಧನಂಜಯ್​, ಫಹಾದ್​ ಫಾಸಿಲ್​, ಜಗಪತಿ ಬಾಬು ಪ್ರಕಾಶ್​ ರಾಜ್​ ಮುಂತಾದ ಸ್ಟಾರ್​ ಕಲಾವಿದರು ಕೂಡ ‘ಪುಷ್ಪ’ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಎರಡು ಪಾರ್ಟ್​ಗಳಲ್ಲಿ ಈ ಚಿತ್ರ ತಯಾರಾಗಿದ್ದು, ಡಿ.17ರಂದು ಮೊದಲ ಪಾರ್ಟ್​ ಮಾತ್ರ ಬಿಡುಗಡೆ ಆಗುತ್ತಿದೆ.

ಇದನ್ನೂ ಓದಿ: ಯಾರು ಹೇಳಿದ್ದು ರಶ್ಮಿಕಾ ಮಂದಣ್ಣಗೆ ಕನ್ನಡ ಮರೆತುಹೋಗಿದೆ ಅಂತ, ಅವರು ಕನ್ನಡದಲ್ಲಿ ಚೆನ್ನಾಗಿ ಮಾತಾಡುತ್ತಾರೆ!

ಪುನೀತ್​ ರಾಜ್​ಕುಮಾರ್ ಸಾಧನೆಗಳನ್ನು ಸದನದಲ್ಲಿ ಸಾರಿ ಸಾರಿ ಹೇಳಿದ ಸ್ಪೀಕರ್​ ಕಾಗೇರಿ

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್