AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದುಡ್ಡುಕೊಟ್ರೆ ನಿಮಗಿಂತ ಚೆನ್ನಾಗಿ ಕನ್ನಡ ಮಾತಾಡ್ತೀನಿ’ ಎಂದು ಟೀಕೆ; ಖಡಕ್ ಉತ್ತರ ಕೊಟ್ಟ ಬಾದ್​ಶಾ

ಬಾದ್​ಶಾ ಅವರು ಬಾಲಿವುಡ್ ಸಿಂಗರ್. ಅವರು ಜನಿಸಿದ್ದು ದೆಹಲಿಯಲ್ಲಿ. ಸೆಪ್ಟೆಂಬರ್ 8ರಂದು ಯುವ ದಸರಾ ಕಾರ್ಯಕ್ರಮದಲ್ಲಿ ಬಾದ್​ಶಾ ಭಾಗಿ ಆಗಿದ್ದರು. ಈ ವೇಳೆ ಕನ್ನಡದಲ್ಲಿ ಮಾತನಾಡಿದ ಅವರು, ಕನ್ನಡದ ಒಂದು ಹಾಡು ಕೇಳಿ ಸಖತ್ ಎಮೋಷನಲ್ ಆದರು. ಇದನ್ನು ಅನೇಕರು ಟೀಕಿಸಿದ್ದರು.

‘ದುಡ್ಡುಕೊಟ್ರೆ ನಿಮಗಿಂತ ಚೆನ್ನಾಗಿ ಕನ್ನಡ ಮಾತಾಡ್ತೀನಿ’ ಎಂದು ಟೀಕೆ; ಖಡಕ್ ಉತ್ತರ ಕೊಟ್ಟ ಬಾದ್​ಶಾ
ಬಾದ್​ಶಾ
ರಾಜೇಶ್ ದುಗ್ಗುಮನೆ
|

Updated on: Oct 10, 2024 | 2:15 PM

Share

ಬಾದ್​ಶಾ ಅವರು ಇತ್ತೀಚೆಗೆ ಮೈಸೂರು ಯುವ ದಸರಾದಲ್ಲಿ ಭಾಗಿ ಆಗಿದ್ದರು. ಅವರು ಶೋ ಕೊಟ್ಟಿದ್ದರು. ಈ ವೇಳೆ ಬಾದ್​ಶಾ ಕನ್ನಡದಲ್ಲಿ ಮಾತನಾಡಿ ಗಮನ ಸೆಳೆದಿದ್ದರು. ಅವರ ಮಾತುಗಳನ್ನು ಕೆಲವರು ಟೀಕೆ ಮಾಡಿದ್ದರು. ‘ಹಣ ಪಡೆದು ಬಾದ್​ಶಾ ಕನ್ನಡ ಮಾತನಾಡಿದ್ದಾರೆ ಅಷ್ಟೇ’ ಎಂದೆಲ್ಲ ಟೀಕೆ ವ್ಯಕ್ತವಾಗಿತ್ತು. ಈ ಟ್ವೀಟ್ ಬಾದ್​ಶಾಗೂ ಕಾಣಿಸಿದೆ. ಅವರು ಖಡಕ್ ಆಗಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬಾದ್​ಶಾ ಮಾತನಾಡಿದ್ದು ಏನು?

ಯುವ ದಸರಾ ವೇದಿಕೆ ಏರಿದ ಬಳಿಕ ಬಾದ್​ಶಾ ಕನ್ನಡದಲ್ಲಿ ಮಾತನಾಡಿದ್ದರು. ‘ಇಲ್ಲಿ ಯಾರೂ ಸ್ಟಾರ್ ಅಲ್ಲ, ಯಾರೂ ಸೂಪರ್​ಸ್ಟಾರ್ ಕೂಡ ಅಲ್ಲ. ನಾನು ಗಾಯಕ ಅಲ್ಲ, ನಾನು ಒಬ್ಬ ಬರಹಗಾರ. ನನಗೆ ಹೇಗೆ ಬರೆಯಬೇಕು ಎಂಬುದಷ್ಟೇ ಗೊತ್ತು. ನಾನು ಭಾವನೆಗಳನ್ನು ಬರೆಯುತ್ತೇನೆ. ನಾನು ನಿಮ್ಮಲ್ಲಿ ಒಬ್ಬ. ನಿಮ್ಮ ಆಶೀರ್ವಾದಿಂದ ಇಲ್ಲಿದ್ದೇನೆ. ನಾನು ನಿಮಗೆ ಸದಾ ಚಿರರುಣಿ’ ಎಂದು ಬಾದ್​ಶಾ ಕನ್ನಡದಲ್ಲಿ ಮಾತನಾಡಿದ್ದರು.

ಟೀಕೆ

ಪರಭಾಷಿಗರು ಬಾದ್​ಶಾನ ಟೀಕೆ ಮಾಡಿದ್ದರು. ‘ಕನ್ನಡಿಗರು ಹಣ ಕೊಟ್ಟರೆ ನಾನು ಅವರಿಗಿಂತ ಚೆನ್ನಾಗಿ ಕನ್ನಡ ಮಾತನಾಡುತ್ತೇನೆ’ ಎಂದು ಅಭಿಷೇಕ್ ಜವ್ಲಾ ಎಂಬಾತ ಹೇಳಿದ್ದ. ಈ ಕಮೆಂಟ್ ಸಾಕಷ್ಟು ವೈರಲ್ ಆಗಿತ್ತು. ಇದು ಬಾದ್​ಶಾ ಕಣ್ಣಿಗೂ ಬಿದ್ದಿದೆ.

ಏನ್​ ಅಂದ್ರು?

ಬಾದ್ ಶಾ ಅವರು ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಶೋ ನಡೆಸಿಕೊಡಲು ಹಣ ಪಡೆದಿದ್ದೇನೆ. ಕನ್ನಡ ಮಾತನಾಡಿದ್ದು ಪ್ರೀತಿಯಿಂದ. ಪ್ರೀತಿಯನ್ನು ಹಂಚಿ’ ಎಂದು ಬಾದ್​ಶಾ ಟ್ವೀಟ್ ಮಾಡಿದ್ದಾರೆ. ‘ನಿಮ್ಮ ಮೇಲಿನ ಗೌರವ ಹೆಚ್ಚಿತು’ ಎಂದು ಕೆಲವರು ಕಮೆಂಟ್ ಹಾಕಿದ್ದಾರೆ.

ಇದನ್ನೂ ಓದಿ: ಯುವ ದಸರಾ ವೇದಿಕೆ ಮೇಲೆ ಕನ್ನಡದ ಈ ನಟನ ಹಾಡು ಕೇಳುತ್ತಿದ್ದಂತೆ ಎಮೋಷನಲ್ ಆದ ಬಾದ್​ಶಾ

ಪುನೀತ್ ಹಾಡು

ಪುನೀತ್ ರಾಜ್​ಕುಮಾರ್ ನಟನೆಯ ‘ರಾಜಕುಮಾರ’ ಚಿತ್ರದ ‘ಗೊಂಬೆ ಹೇಳುತೈತೆ..’ ಹಾಡನ್ನು ಪ್ಲೇ ಮಾಡಿದಾಗ ಬಾದ್​ಶಾ ಭಾವುಕರಾಗಿ ಕೈ ಮುಗಿದಿದ್ದರು. ಈ ವಿಡಿಯೋ ಕೂಡ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!