AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದುಡ್ಡುಕೊಟ್ರೆ ನಿಮಗಿಂತ ಚೆನ್ನಾಗಿ ಕನ್ನಡ ಮಾತಾಡ್ತೀನಿ’ ಎಂದು ಟೀಕೆ; ಖಡಕ್ ಉತ್ತರ ಕೊಟ್ಟ ಬಾದ್​ಶಾ

ಬಾದ್​ಶಾ ಅವರು ಬಾಲಿವುಡ್ ಸಿಂಗರ್. ಅವರು ಜನಿಸಿದ್ದು ದೆಹಲಿಯಲ್ಲಿ. ಸೆಪ್ಟೆಂಬರ್ 8ರಂದು ಯುವ ದಸರಾ ಕಾರ್ಯಕ್ರಮದಲ್ಲಿ ಬಾದ್​ಶಾ ಭಾಗಿ ಆಗಿದ್ದರು. ಈ ವೇಳೆ ಕನ್ನಡದಲ್ಲಿ ಮಾತನಾಡಿದ ಅವರು, ಕನ್ನಡದ ಒಂದು ಹಾಡು ಕೇಳಿ ಸಖತ್ ಎಮೋಷನಲ್ ಆದರು. ಇದನ್ನು ಅನೇಕರು ಟೀಕಿಸಿದ್ದರು.

‘ದುಡ್ಡುಕೊಟ್ರೆ ನಿಮಗಿಂತ ಚೆನ್ನಾಗಿ ಕನ್ನಡ ಮಾತಾಡ್ತೀನಿ’ ಎಂದು ಟೀಕೆ; ಖಡಕ್ ಉತ್ತರ ಕೊಟ್ಟ ಬಾದ್​ಶಾ
ಬಾದ್​ಶಾ
ರಾಜೇಶ್ ದುಗ್ಗುಮನೆ
|

Updated on: Oct 10, 2024 | 2:15 PM

Share

ಬಾದ್​ಶಾ ಅವರು ಇತ್ತೀಚೆಗೆ ಮೈಸೂರು ಯುವ ದಸರಾದಲ್ಲಿ ಭಾಗಿ ಆಗಿದ್ದರು. ಅವರು ಶೋ ಕೊಟ್ಟಿದ್ದರು. ಈ ವೇಳೆ ಬಾದ್​ಶಾ ಕನ್ನಡದಲ್ಲಿ ಮಾತನಾಡಿ ಗಮನ ಸೆಳೆದಿದ್ದರು. ಅವರ ಮಾತುಗಳನ್ನು ಕೆಲವರು ಟೀಕೆ ಮಾಡಿದ್ದರು. ‘ಹಣ ಪಡೆದು ಬಾದ್​ಶಾ ಕನ್ನಡ ಮಾತನಾಡಿದ್ದಾರೆ ಅಷ್ಟೇ’ ಎಂದೆಲ್ಲ ಟೀಕೆ ವ್ಯಕ್ತವಾಗಿತ್ತು. ಈ ಟ್ವೀಟ್ ಬಾದ್​ಶಾಗೂ ಕಾಣಿಸಿದೆ. ಅವರು ಖಡಕ್ ಆಗಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬಾದ್​ಶಾ ಮಾತನಾಡಿದ್ದು ಏನು?

ಯುವ ದಸರಾ ವೇದಿಕೆ ಏರಿದ ಬಳಿಕ ಬಾದ್​ಶಾ ಕನ್ನಡದಲ್ಲಿ ಮಾತನಾಡಿದ್ದರು. ‘ಇಲ್ಲಿ ಯಾರೂ ಸ್ಟಾರ್ ಅಲ್ಲ, ಯಾರೂ ಸೂಪರ್​ಸ್ಟಾರ್ ಕೂಡ ಅಲ್ಲ. ನಾನು ಗಾಯಕ ಅಲ್ಲ, ನಾನು ಒಬ್ಬ ಬರಹಗಾರ. ನನಗೆ ಹೇಗೆ ಬರೆಯಬೇಕು ಎಂಬುದಷ್ಟೇ ಗೊತ್ತು. ನಾನು ಭಾವನೆಗಳನ್ನು ಬರೆಯುತ್ತೇನೆ. ನಾನು ನಿಮ್ಮಲ್ಲಿ ಒಬ್ಬ. ನಿಮ್ಮ ಆಶೀರ್ವಾದಿಂದ ಇಲ್ಲಿದ್ದೇನೆ. ನಾನು ನಿಮಗೆ ಸದಾ ಚಿರರುಣಿ’ ಎಂದು ಬಾದ್​ಶಾ ಕನ್ನಡದಲ್ಲಿ ಮಾತನಾಡಿದ್ದರು.

ಟೀಕೆ

ಪರಭಾಷಿಗರು ಬಾದ್​ಶಾನ ಟೀಕೆ ಮಾಡಿದ್ದರು. ‘ಕನ್ನಡಿಗರು ಹಣ ಕೊಟ್ಟರೆ ನಾನು ಅವರಿಗಿಂತ ಚೆನ್ನಾಗಿ ಕನ್ನಡ ಮಾತನಾಡುತ್ತೇನೆ’ ಎಂದು ಅಭಿಷೇಕ್ ಜವ್ಲಾ ಎಂಬಾತ ಹೇಳಿದ್ದ. ಈ ಕಮೆಂಟ್ ಸಾಕಷ್ಟು ವೈರಲ್ ಆಗಿತ್ತು. ಇದು ಬಾದ್​ಶಾ ಕಣ್ಣಿಗೂ ಬಿದ್ದಿದೆ.

ಏನ್​ ಅಂದ್ರು?

ಬಾದ್ ಶಾ ಅವರು ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಶೋ ನಡೆಸಿಕೊಡಲು ಹಣ ಪಡೆದಿದ್ದೇನೆ. ಕನ್ನಡ ಮಾತನಾಡಿದ್ದು ಪ್ರೀತಿಯಿಂದ. ಪ್ರೀತಿಯನ್ನು ಹಂಚಿ’ ಎಂದು ಬಾದ್​ಶಾ ಟ್ವೀಟ್ ಮಾಡಿದ್ದಾರೆ. ‘ನಿಮ್ಮ ಮೇಲಿನ ಗೌರವ ಹೆಚ್ಚಿತು’ ಎಂದು ಕೆಲವರು ಕಮೆಂಟ್ ಹಾಕಿದ್ದಾರೆ.

ಇದನ್ನೂ ಓದಿ: ಯುವ ದಸರಾ ವೇದಿಕೆ ಮೇಲೆ ಕನ್ನಡದ ಈ ನಟನ ಹಾಡು ಕೇಳುತ್ತಿದ್ದಂತೆ ಎಮೋಷನಲ್ ಆದ ಬಾದ್​ಶಾ

ಪುನೀತ್ ಹಾಡು

ಪುನೀತ್ ರಾಜ್​ಕುಮಾರ್ ನಟನೆಯ ‘ರಾಜಕುಮಾರ’ ಚಿತ್ರದ ‘ಗೊಂಬೆ ಹೇಳುತೈತೆ..’ ಹಾಡನ್ನು ಪ್ಲೇ ಮಾಡಿದಾಗ ಬಾದ್​ಶಾ ಭಾವುಕರಾಗಿ ಕೈ ಮುಗಿದಿದ್ದರು. ಈ ವಿಡಿಯೋ ಕೂಡ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?