AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದುಡ್ಡುಕೊಟ್ರೆ ನಿಮಗಿಂತ ಚೆನ್ನಾಗಿ ಕನ್ನಡ ಮಾತಾಡ್ತೀನಿ’ ಎಂದು ಟೀಕೆ; ಖಡಕ್ ಉತ್ತರ ಕೊಟ್ಟ ಬಾದ್​ಶಾ

ಬಾದ್​ಶಾ ಅವರು ಬಾಲಿವುಡ್ ಸಿಂಗರ್. ಅವರು ಜನಿಸಿದ್ದು ದೆಹಲಿಯಲ್ಲಿ. ಸೆಪ್ಟೆಂಬರ್ 8ರಂದು ಯುವ ದಸರಾ ಕಾರ್ಯಕ್ರಮದಲ್ಲಿ ಬಾದ್​ಶಾ ಭಾಗಿ ಆಗಿದ್ದರು. ಈ ವೇಳೆ ಕನ್ನಡದಲ್ಲಿ ಮಾತನಾಡಿದ ಅವರು, ಕನ್ನಡದ ಒಂದು ಹಾಡು ಕೇಳಿ ಸಖತ್ ಎಮೋಷನಲ್ ಆದರು. ಇದನ್ನು ಅನೇಕರು ಟೀಕಿಸಿದ್ದರು.

‘ದುಡ್ಡುಕೊಟ್ರೆ ನಿಮಗಿಂತ ಚೆನ್ನಾಗಿ ಕನ್ನಡ ಮಾತಾಡ್ತೀನಿ’ ಎಂದು ಟೀಕೆ; ಖಡಕ್ ಉತ್ತರ ಕೊಟ್ಟ ಬಾದ್​ಶಾ
ಬಾದ್​ಶಾ
ರಾಜೇಶ್ ದುಗ್ಗುಮನೆ
|

Updated on: Oct 10, 2024 | 2:15 PM

Share

ಬಾದ್​ಶಾ ಅವರು ಇತ್ತೀಚೆಗೆ ಮೈಸೂರು ಯುವ ದಸರಾದಲ್ಲಿ ಭಾಗಿ ಆಗಿದ್ದರು. ಅವರು ಶೋ ಕೊಟ್ಟಿದ್ದರು. ಈ ವೇಳೆ ಬಾದ್​ಶಾ ಕನ್ನಡದಲ್ಲಿ ಮಾತನಾಡಿ ಗಮನ ಸೆಳೆದಿದ್ದರು. ಅವರ ಮಾತುಗಳನ್ನು ಕೆಲವರು ಟೀಕೆ ಮಾಡಿದ್ದರು. ‘ಹಣ ಪಡೆದು ಬಾದ್​ಶಾ ಕನ್ನಡ ಮಾತನಾಡಿದ್ದಾರೆ ಅಷ್ಟೇ’ ಎಂದೆಲ್ಲ ಟೀಕೆ ವ್ಯಕ್ತವಾಗಿತ್ತು. ಈ ಟ್ವೀಟ್ ಬಾದ್​ಶಾಗೂ ಕಾಣಿಸಿದೆ. ಅವರು ಖಡಕ್ ಆಗಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬಾದ್​ಶಾ ಮಾತನಾಡಿದ್ದು ಏನು?

ಯುವ ದಸರಾ ವೇದಿಕೆ ಏರಿದ ಬಳಿಕ ಬಾದ್​ಶಾ ಕನ್ನಡದಲ್ಲಿ ಮಾತನಾಡಿದ್ದರು. ‘ಇಲ್ಲಿ ಯಾರೂ ಸ್ಟಾರ್ ಅಲ್ಲ, ಯಾರೂ ಸೂಪರ್​ಸ್ಟಾರ್ ಕೂಡ ಅಲ್ಲ. ನಾನು ಗಾಯಕ ಅಲ್ಲ, ನಾನು ಒಬ್ಬ ಬರಹಗಾರ. ನನಗೆ ಹೇಗೆ ಬರೆಯಬೇಕು ಎಂಬುದಷ್ಟೇ ಗೊತ್ತು. ನಾನು ಭಾವನೆಗಳನ್ನು ಬರೆಯುತ್ತೇನೆ. ನಾನು ನಿಮ್ಮಲ್ಲಿ ಒಬ್ಬ. ನಿಮ್ಮ ಆಶೀರ್ವಾದಿಂದ ಇಲ್ಲಿದ್ದೇನೆ. ನಾನು ನಿಮಗೆ ಸದಾ ಚಿರರುಣಿ’ ಎಂದು ಬಾದ್​ಶಾ ಕನ್ನಡದಲ್ಲಿ ಮಾತನಾಡಿದ್ದರು.

ಟೀಕೆ

ಪರಭಾಷಿಗರು ಬಾದ್​ಶಾನ ಟೀಕೆ ಮಾಡಿದ್ದರು. ‘ಕನ್ನಡಿಗರು ಹಣ ಕೊಟ್ಟರೆ ನಾನು ಅವರಿಗಿಂತ ಚೆನ್ನಾಗಿ ಕನ್ನಡ ಮಾತನಾಡುತ್ತೇನೆ’ ಎಂದು ಅಭಿಷೇಕ್ ಜವ್ಲಾ ಎಂಬಾತ ಹೇಳಿದ್ದ. ಈ ಕಮೆಂಟ್ ಸಾಕಷ್ಟು ವೈರಲ್ ಆಗಿತ್ತು. ಇದು ಬಾದ್​ಶಾ ಕಣ್ಣಿಗೂ ಬಿದ್ದಿದೆ.

ಏನ್​ ಅಂದ್ರು?

ಬಾದ್ ಶಾ ಅವರು ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಶೋ ನಡೆಸಿಕೊಡಲು ಹಣ ಪಡೆದಿದ್ದೇನೆ. ಕನ್ನಡ ಮಾತನಾಡಿದ್ದು ಪ್ರೀತಿಯಿಂದ. ಪ್ರೀತಿಯನ್ನು ಹಂಚಿ’ ಎಂದು ಬಾದ್​ಶಾ ಟ್ವೀಟ್ ಮಾಡಿದ್ದಾರೆ. ‘ನಿಮ್ಮ ಮೇಲಿನ ಗೌರವ ಹೆಚ್ಚಿತು’ ಎಂದು ಕೆಲವರು ಕಮೆಂಟ್ ಹಾಕಿದ್ದಾರೆ.

ಇದನ್ನೂ ಓದಿ: ಯುವ ದಸರಾ ವೇದಿಕೆ ಮೇಲೆ ಕನ್ನಡದ ಈ ನಟನ ಹಾಡು ಕೇಳುತ್ತಿದ್ದಂತೆ ಎಮೋಷನಲ್ ಆದ ಬಾದ್​ಶಾ

ಪುನೀತ್ ಹಾಡು

ಪುನೀತ್ ರಾಜ್​ಕುಮಾರ್ ನಟನೆಯ ‘ರಾಜಕುಮಾರ’ ಚಿತ್ರದ ‘ಗೊಂಬೆ ಹೇಳುತೈತೆ..’ ಹಾಡನ್ನು ಪ್ಲೇ ಮಾಡಿದಾಗ ಬಾದ್​ಶಾ ಭಾವುಕರಾಗಿ ಕೈ ಮುಗಿದಿದ್ದರು. ಈ ವಿಡಿಯೋ ಕೂಡ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್