AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಬ್ಯಾನರ್​ನಲ್ಲಿ ಸಿನಿಮಾ ಮಾಡಿ​’; ಅಲ್ಲು ಅರ್ಜುನ್ ತಂದೆ ಕೋರಿಕೆಗೆ ತಕ್ಷಣ ಒಪ್ಪಿದ ರಿಷಬ್ ಶೆಟ್ಟಿ

ಚಿತ್ರ ಒಳ್ಳೆಯ ಬಿಸ್ನೆಸ್ ಮಾಡುತ್ತಿದೆ. ಹೀಗಾಗಿ, ಅಲ್ಲು ಅರವಿಂದ್ ಅವರ ಗೀತಾ ಆರ್ಟ್ಸ್​ಗೆ ಒಳ್ಳೆಯ ಲಾಭ ಆಗಿದೆ. ಇದೇ ಖುಷಿಯಲ್ಲಿ ಅವರು ರಿಷಬ್ ಜತೆ ಸಿನಿಮಾ ಮಾಡು ಇಂಗಿತ ವ್ಯಕ್ತಪಡಿಸಿದ್ದರು. ಇದಕ್ಕೆ ರಿಷಬ್ ಓಕೆ ಎಂದಿದ್ದಾರೆ.  

‘ನಮ್ಮ ಬ್ಯಾನರ್​ನಲ್ಲಿ ಸಿನಿಮಾ ಮಾಡಿ​’; ಅಲ್ಲು ಅರ್ಜುನ್ ತಂದೆ ಕೋರಿಕೆಗೆ ತಕ್ಷಣ ಒಪ್ಪಿದ ರಿಷಬ್ ಶೆಟ್ಟಿ
ರಿಷಬ್, ಅಲ್ಲು ಅರ್ಜುನ್, ಅಲ್ಲು ಅರವಿಂದ್
TV9 Web
| Edited By: |

Updated on:Oct 20, 2022 | 2:03 PM

Share

ರಿಷಬ್ ಶೆಟ್ಟಿ (Rishab Shetty) ಅವರ ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿದೆ. ‘ಕಿರಿಕ್ ಪಾರ್ಟಿ’, ‘ಸ.ಹಿ.ಪ್ರಾ. ಶಾಲೆ ಕಾಸರಗೋಡು’ ಅಂತಹ ಸೂಪರ್ ಹಿಟ್ ಚಿತ್ರ ನೀಡಿರುವ ಅವರಿಗೆ ‘ಕಾಂತಾರ’ದಿಂದ ಮತ್ತೊಂದು ದೊಡ್ಡ ಯಶಸ್ಸು ಸಿಕ್ಕಿದೆ. ಈ ಚಿತ್ರವನ್ನು ಪರಭಾಷಿಗರು ಕೂಡ ಒಪ್ಪಿದ್ದಾರೆ. ಈಗ ರಿಷಬ್ ಶೆಟ್ಟಿ ಖ್ಯಾತಿ ಹೆಚ್ಚಿದೆ. ಅವರು ಅಲ್ಲು ಅರ್ಜುನ್ (Allu Arjun) ತಂದೆ ಅಲ್ಲು ಅರವಿಂದ್ ಅವರ ‘ಗೀತಾ ಆರ್ಟ್ಸ್​’ ಬ್ಯಾನರ್ ಅಡಿಯಲ್ಲಿ ಸಿನಿಮಾ ಮಾಡಲು ಒಪ್ಪಿದ್ದಾರೆ. ಈ ಮಾತನ್ನು ಸ್ವತಃ ಅಲ್ಲು ಅರವಿಂದ್ ಅವರು ಖಚಿತಪಡಿಸಿದ್ದಾರೆ.

‘ಕಾಂತಾರ’ ಸಿನಿಮಾ ಸೆಪ್ಟೆಂಬರ್ 30ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಸ್ಯಾಂಡಲ್​ವುಡ್​ ಮಂದಿ ಒಳ್ಳೆಯ ರೇಟಿಂಗ್ ನೀಡಿದರು. ಇದನ್ನು ನೋಡಿ ಪರಭಾಷಿಗರಿಗೂ ಕುತೂಹಲ ಹೆಚ್ಚಿತು. ಅವರು ಕೂಡ ಸಿನಿಮಾ ನೋಡಲು ಆಸಕ್ತಿ ತೋರಿದರು. ಈ ಸಿನಿಮಾ ಹಿಂದಿ, ತೆಲುಗು ಹಾಗೂ ತಮಿಳಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿತು. ಇಂದು (ಅಕ್ಟೋಬರ್ 20) ಚಿತ್ರ ಮಲಯಾಳಂನಲ್ಲಿ ರಿಲೀಸ್ ಆಗಿದೆ. ಈ ಬೆನ್ನಲ್ಲೇ ಹೊಸ ಸುದ್ದಿ ಹೊರಬಿದ್ದಿದೆ.

‘ಕಾಂತಾರ’ ಚಿತ್ರವನ್ನು ತೆಲುಗಿನಲ್ಲಿ ಅಲ್ಲು ಅರವಿಂದ್ ಹಂಚಿಕೆ ಮಾಡಿದ್ದಾರೆ. ಈ ಸಿನಿಮಾವನ್ನು ಅವರು 3 ಕೋಟಿ ರೂಪಾಯಿಗೆ ಖರೀದಿ ಮಾಡಿದ್ದರು ಎನ್ನಲಾಗಿದೆ. ಈಗ ಚಿತ್ರ ಒಳ್ಳೆಯ ಬಿಸ್ನೆಸ್ ಮಾಡುತ್ತಿದೆ. ಹೀಗಾಗಿ, ಅಲ್ಲು ಅರವಿಂದ್ ಅವರ ಗೀತಾ ಆರ್ಟ್ಸ್​ಗೆ ಒಳ್ಳೆಯ ಲಾಭ ಆಗಿದೆ. ಇದೇ ಖುಷಿಯಲ್ಲಿ ಅವರು ರಿಷಬ್ ಜತೆ ಸಿನಿಮಾ ಮಾಡುವ ಇಂಗಿತ ವ್ಯಕ್ತಪಡಿಸಿದ್ದರು. ಇದಕ್ಕೆ ರಿಷಬ್ ಓಕೆ ಎಂದಿದ್ದಾರೆ.

ಇದನ್ನೂ ಓದಿ
Image
Kantara Movie: ‘ಕಾಂತಾರ ಚಿತ್ರದ ಕ್ಲೈಮ್ಯಾಕ್ಸ್ ಅದ್ಭುತ’; ರಿಷಬ್ ಸಿನಿಮಾಗೆ ಪ್ರಭಾಸ್​ ಹೊಗಳಿಕೆ
Image
Sapthami Gowda: ಜನರ ಮಧ್ಯೆ ‘ಕಾಂತಾರ’ ನಾಯಕಿ ಸಪ್ತಮಿ ಗೌಡ ಬಿಂದಾಸ್​ ಡ್ಯಾನ್ಸ್​; ಇಲ್ಲಿದೆ ವಿಡಿಯೋ
Image
Kantara Review: ಹಲವು ಸಂಘರ್ಷಗಳ ‘ಕಾಂತಾರ’; ರಿಷಬ್​ ಶೆಟ್ಟಿಯ ಹೊಸ ಅವತಾರ
Image
Kantara Review: ‘ಕಾಂತಾರ’ ವಿಮರ್ಶೆ ಮಾಡಿದ ರಮ್ಯಾ; ರಿಷಬ್​ ಶೆಟ್ಟಿ ಚಿತ್ರದ ಬಗ್ಗೆ ‘ಮೋಹಕ ತಾರೆ’ ಹೇಳಿದ್ದೇನು?

ಇತ್ತೀಚೆಗೆ ಅಲ್ಲು ಅರವಿಂದ್ ಅವರು ಮಾಧ್ಯಮದ ಜತೆ ಈ ವಿಚಾರ ಹಂಚಿಕೊಂಡಿದ್ದಾರೆ. ‘ಗೀತಾ ಆರ್ಟ್ಸ್‌ ಬ್ಯಾನರ್ ಅಡಿಯಲ್ಲಿ ತುರ್ತಾಗಿ ಒಂದು ಸಿನಿಮಾ ಮಾಡುವಂತೆ ರಿಷಬ್‌ಗೆ ಕೇಳಿದೆ. ಅವರು ತಕ್ಷಣ ಒಪ್ಪಿಕೊಂಡರು. ನಾವು ಶೀಘ್ರದಲ್ಲೇ ಒಟ್ಟಾಗಿ ಕೆಲಸ ಮಾಡುತ್ತೇವೆ’ ಎಂದು ಅಲ್ಲು ಅರವಿಂದ್ ಹೇಳಿದ್ದಾರೆ. ಈ ವಿಚಾರ ಕೇಳಿ ರಿಷಬ್ ಫ್ಯಾನ್ಸ್ ಖುಷಿಯಾಗಿದ್ದಾರೆ.

ಇದನ್ನೂ ಓದಿ: ‘ಕಾಂತಾರ’ ಮಸ್ತ್ ಕಲೆಕ್ಷನ್; ‘ವಿಕ್ರಾಂತ್ ರೋಣ’ ಕಲೆಕ್ಷನ್ ಹಿಂದಿಕ್ಕಲು ಕೆಲವೇ ಕೋಟಿ ಬಾಕಿ

ಅಲ್ಲು ಅರವಿಂದ್ ಬ್ಯಾನರ್ ಅಡಿಯಲ್ಲಿ ಸಿದ್ಧವಾಗುವ ಸಿನಿಮಾಗೆ ರಿಷಬ್ ಅವರು ನಿರ್ದೇಶನ ಮಾಡುತ್ತಾರಾ ಅಥವಾ ನಟಿಸುತ್ತಾರಾ ಎಂಬ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ. ರಿಷಬ್​ಗೆ ತೆಲುಗು ಮಾತ್ರವಲ್ಲದೆ ಬೇರೆ ಭಾಷೆಗಳಿಂದಲೂ ಸಾಕಷ್ಟು ಆಫರ್ ಬರುತ್ತಿದೆ.

Published On - 11:53 am, Thu, 20 October 22

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ