AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಬ್ಯಾನರ್​ನಲ್ಲಿ ಸಿನಿಮಾ ಮಾಡಿ​’; ಅಲ್ಲು ಅರ್ಜುನ್ ತಂದೆ ಕೋರಿಕೆಗೆ ತಕ್ಷಣ ಒಪ್ಪಿದ ರಿಷಬ್ ಶೆಟ್ಟಿ

ಚಿತ್ರ ಒಳ್ಳೆಯ ಬಿಸ್ನೆಸ್ ಮಾಡುತ್ತಿದೆ. ಹೀಗಾಗಿ, ಅಲ್ಲು ಅರವಿಂದ್ ಅವರ ಗೀತಾ ಆರ್ಟ್ಸ್​ಗೆ ಒಳ್ಳೆಯ ಲಾಭ ಆಗಿದೆ. ಇದೇ ಖುಷಿಯಲ್ಲಿ ಅವರು ರಿಷಬ್ ಜತೆ ಸಿನಿಮಾ ಮಾಡು ಇಂಗಿತ ವ್ಯಕ್ತಪಡಿಸಿದ್ದರು. ಇದಕ್ಕೆ ರಿಷಬ್ ಓಕೆ ಎಂದಿದ್ದಾರೆ.  

‘ನಮ್ಮ ಬ್ಯಾನರ್​ನಲ್ಲಿ ಸಿನಿಮಾ ಮಾಡಿ​’; ಅಲ್ಲು ಅರ್ಜುನ್ ತಂದೆ ಕೋರಿಕೆಗೆ ತಕ್ಷಣ ಒಪ್ಪಿದ ರಿಷಬ್ ಶೆಟ್ಟಿ
ರಿಷಬ್, ಅಲ್ಲು ಅರ್ಜುನ್, ಅಲ್ಲು ಅರವಿಂದ್
TV9 Web
| Edited By: |

Updated on:Oct 20, 2022 | 2:03 PM

Share

ರಿಷಬ್ ಶೆಟ್ಟಿ (Rishab Shetty) ಅವರ ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿದೆ. ‘ಕಿರಿಕ್ ಪಾರ್ಟಿ’, ‘ಸ.ಹಿ.ಪ್ರಾ. ಶಾಲೆ ಕಾಸರಗೋಡು’ ಅಂತಹ ಸೂಪರ್ ಹಿಟ್ ಚಿತ್ರ ನೀಡಿರುವ ಅವರಿಗೆ ‘ಕಾಂತಾರ’ದಿಂದ ಮತ್ತೊಂದು ದೊಡ್ಡ ಯಶಸ್ಸು ಸಿಕ್ಕಿದೆ. ಈ ಚಿತ್ರವನ್ನು ಪರಭಾಷಿಗರು ಕೂಡ ಒಪ್ಪಿದ್ದಾರೆ. ಈಗ ರಿಷಬ್ ಶೆಟ್ಟಿ ಖ್ಯಾತಿ ಹೆಚ್ಚಿದೆ. ಅವರು ಅಲ್ಲು ಅರ್ಜುನ್ (Allu Arjun) ತಂದೆ ಅಲ್ಲು ಅರವಿಂದ್ ಅವರ ‘ಗೀತಾ ಆರ್ಟ್ಸ್​’ ಬ್ಯಾನರ್ ಅಡಿಯಲ್ಲಿ ಸಿನಿಮಾ ಮಾಡಲು ಒಪ್ಪಿದ್ದಾರೆ. ಈ ಮಾತನ್ನು ಸ್ವತಃ ಅಲ್ಲು ಅರವಿಂದ್ ಅವರು ಖಚಿತಪಡಿಸಿದ್ದಾರೆ.

‘ಕಾಂತಾರ’ ಸಿನಿಮಾ ಸೆಪ್ಟೆಂಬರ್ 30ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಸ್ಯಾಂಡಲ್​ವುಡ್​ ಮಂದಿ ಒಳ್ಳೆಯ ರೇಟಿಂಗ್ ನೀಡಿದರು. ಇದನ್ನು ನೋಡಿ ಪರಭಾಷಿಗರಿಗೂ ಕುತೂಹಲ ಹೆಚ್ಚಿತು. ಅವರು ಕೂಡ ಸಿನಿಮಾ ನೋಡಲು ಆಸಕ್ತಿ ತೋರಿದರು. ಈ ಸಿನಿಮಾ ಹಿಂದಿ, ತೆಲುಗು ಹಾಗೂ ತಮಿಳಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿತು. ಇಂದು (ಅಕ್ಟೋಬರ್ 20) ಚಿತ್ರ ಮಲಯಾಳಂನಲ್ಲಿ ರಿಲೀಸ್ ಆಗಿದೆ. ಈ ಬೆನ್ನಲ್ಲೇ ಹೊಸ ಸುದ್ದಿ ಹೊರಬಿದ್ದಿದೆ.

‘ಕಾಂತಾರ’ ಚಿತ್ರವನ್ನು ತೆಲುಗಿನಲ್ಲಿ ಅಲ್ಲು ಅರವಿಂದ್ ಹಂಚಿಕೆ ಮಾಡಿದ್ದಾರೆ. ಈ ಸಿನಿಮಾವನ್ನು ಅವರು 3 ಕೋಟಿ ರೂಪಾಯಿಗೆ ಖರೀದಿ ಮಾಡಿದ್ದರು ಎನ್ನಲಾಗಿದೆ. ಈಗ ಚಿತ್ರ ಒಳ್ಳೆಯ ಬಿಸ್ನೆಸ್ ಮಾಡುತ್ತಿದೆ. ಹೀಗಾಗಿ, ಅಲ್ಲು ಅರವಿಂದ್ ಅವರ ಗೀತಾ ಆರ್ಟ್ಸ್​ಗೆ ಒಳ್ಳೆಯ ಲಾಭ ಆಗಿದೆ. ಇದೇ ಖುಷಿಯಲ್ಲಿ ಅವರು ರಿಷಬ್ ಜತೆ ಸಿನಿಮಾ ಮಾಡುವ ಇಂಗಿತ ವ್ಯಕ್ತಪಡಿಸಿದ್ದರು. ಇದಕ್ಕೆ ರಿಷಬ್ ಓಕೆ ಎಂದಿದ್ದಾರೆ.

ಇದನ್ನೂ ಓದಿ
Image
Kantara Movie: ‘ಕಾಂತಾರ ಚಿತ್ರದ ಕ್ಲೈಮ್ಯಾಕ್ಸ್ ಅದ್ಭುತ’; ರಿಷಬ್ ಸಿನಿಮಾಗೆ ಪ್ರಭಾಸ್​ ಹೊಗಳಿಕೆ
Image
Sapthami Gowda: ಜನರ ಮಧ್ಯೆ ‘ಕಾಂತಾರ’ ನಾಯಕಿ ಸಪ್ತಮಿ ಗೌಡ ಬಿಂದಾಸ್​ ಡ್ಯಾನ್ಸ್​; ಇಲ್ಲಿದೆ ವಿಡಿಯೋ
Image
Kantara Review: ಹಲವು ಸಂಘರ್ಷಗಳ ‘ಕಾಂತಾರ’; ರಿಷಬ್​ ಶೆಟ್ಟಿಯ ಹೊಸ ಅವತಾರ
Image
Kantara Review: ‘ಕಾಂತಾರ’ ವಿಮರ್ಶೆ ಮಾಡಿದ ರಮ್ಯಾ; ರಿಷಬ್​ ಶೆಟ್ಟಿ ಚಿತ್ರದ ಬಗ್ಗೆ ‘ಮೋಹಕ ತಾರೆ’ ಹೇಳಿದ್ದೇನು?

ಇತ್ತೀಚೆಗೆ ಅಲ್ಲು ಅರವಿಂದ್ ಅವರು ಮಾಧ್ಯಮದ ಜತೆ ಈ ವಿಚಾರ ಹಂಚಿಕೊಂಡಿದ್ದಾರೆ. ‘ಗೀತಾ ಆರ್ಟ್ಸ್‌ ಬ್ಯಾನರ್ ಅಡಿಯಲ್ಲಿ ತುರ್ತಾಗಿ ಒಂದು ಸಿನಿಮಾ ಮಾಡುವಂತೆ ರಿಷಬ್‌ಗೆ ಕೇಳಿದೆ. ಅವರು ತಕ್ಷಣ ಒಪ್ಪಿಕೊಂಡರು. ನಾವು ಶೀಘ್ರದಲ್ಲೇ ಒಟ್ಟಾಗಿ ಕೆಲಸ ಮಾಡುತ್ತೇವೆ’ ಎಂದು ಅಲ್ಲು ಅರವಿಂದ್ ಹೇಳಿದ್ದಾರೆ. ಈ ವಿಚಾರ ಕೇಳಿ ರಿಷಬ್ ಫ್ಯಾನ್ಸ್ ಖುಷಿಯಾಗಿದ್ದಾರೆ.

ಇದನ್ನೂ ಓದಿ: ‘ಕಾಂತಾರ’ ಮಸ್ತ್ ಕಲೆಕ್ಷನ್; ‘ವಿಕ್ರಾಂತ್ ರೋಣ’ ಕಲೆಕ್ಷನ್ ಹಿಂದಿಕ್ಕಲು ಕೆಲವೇ ಕೋಟಿ ಬಾಕಿ

ಅಲ್ಲು ಅರವಿಂದ್ ಬ್ಯಾನರ್ ಅಡಿಯಲ್ಲಿ ಸಿದ್ಧವಾಗುವ ಸಿನಿಮಾಗೆ ರಿಷಬ್ ಅವರು ನಿರ್ದೇಶನ ಮಾಡುತ್ತಾರಾ ಅಥವಾ ನಟಿಸುತ್ತಾರಾ ಎಂಬ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ. ರಿಷಬ್​ಗೆ ತೆಲುಗು ಮಾತ್ರವಲ್ಲದೆ ಬೇರೆ ಭಾಷೆಗಳಿಂದಲೂ ಸಾಕಷ್ಟು ಆಫರ್ ಬರುತ್ತಿದೆ.

Published On - 11:53 am, Thu, 20 October 22

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು