AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಎಂದೆಂದಿಗೂ ಚಿತ್ರರಂಗ ತೊರೆಯುವುದಿಲ್ಲ’; ಅಭಿಮಾನಿಗಳೆದುರು ಚಿರಂಜೀವಿ ಶಪಥ

‘ವಿಶ್ವಾದ್ಯಂತ ಇರುವ ತೆಲುಗು ಚಿತ್ರರಂಗದ ಅಭಿಮಾನಿಗಳ ಪ್ರೀತಿಗೆ ನಾನು ಗುಲಾಮ. ಆ ಪ್ರೀತಿಯಿಂದಾಗಿ ನಾನು ಇಂದು ಇಲ್ಲಿದ್ದೇನೆ. ನಿಮ್ಮ ಪ್ರೀತಿಗೆ ನಾನು ಕೃತಜ್ಞನಾಗಿರುತ್ತೇನೆ’ ಎಂದು ಚಿರಂಜೀವಿ ಹೇಳಿದ್ದಾರೆ.  

‘ನಾನು ಎಂದೆಂದಿಗೂ ಚಿತ್ರರಂಗ ತೊರೆಯುವುದಿಲ್ಲ’; ಅಭಿಮಾನಿಗಳೆದುರು ಚಿರಂಜೀವಿ ಶಪಥ
ಚಿರಂಜೀವಿ
TV9 Web
| Edited By: |

Updated on:Nov 29, 2022 | 8:42 AM

Share

ನಟ ಚಿರಂಜೀವಿ (Chiranjeevi) ಅವರು ಚಿತ್ರರಂಗದಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಶ್ರಮಿಸಿದ್ದಾರೆ. ಅವರು ಮಾಡಿದ ಸಾಧನೆ ಹಾಗೂ ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಗೋವಾದಲ್ಲಿ ನಡೆದ 53ನೇ ಅಂತಾರಾಷ್ಟ್ರೀಯ ಭಾರತೀಯ ಸಿನಿಮೋತ್ಸದಲ್ಲಿ (IFFI 2022) ಅವರಿಗೆ 2022ನೇ ಸಾಲಿನ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ’ ಪ್ರಶಸ್ತಿ ಘೋಷಿಸಲಾಗಿತ್ತು. ಸೋಮವಾರ (ನವೆಂಬರ್ 29) ಈ ಗೌರವವನ್ನು ಅವರು ಸ್ವೀಕರಿಸಿ ಮಾತನಾಡಿದ್ದಾರೆ. ಇನ್ನೆಂದೂ ಚಿತ್ರರಂಗ ತೊರೆಯುವುದಿಲ್ಲ ಎಂದು ಚಿರಂಜೀವಿ ಹೇಳಿದ್ದಾರೆ.

‘ನನಗೆ ಈ ಪ್ರಶಸ್ತಿ ನೀಡಿದ್ದಕ್ಕಾಗಿ ನಾನು ಫಿಲ್ಮ್​​ ಫೆಸ್ಟಿವಲ್​ ಮತ್ತು ಭಾರತ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ. ಕೆಲವು ಮನ್ನಣೆಗಳು ವಿಶೇಷವಾದವು. ಆ ಪೈಕಿ ಈ ಪ್ರಶಸ್ತಿ ಕೂಡ ಒಂದು. ನಾನು ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ವ್ಯಕ್ತಿ. ನನಗೆ ಸಿಕ್ಕ ಖ್ಯಾತಿ, ಹೆಸರು, ವರ್ಚಸ್ಸು, ಎಲ್ಲಾ ಸವಲತ್ತುಗಳು, ನನ್ನ ಅಭಿಮಾನಿಗಳ ಅಮೂಲ್ಯವಾದ ಪ್ರೀತಿ ಮತ್ತು ವಾತ್ಸಲ್ಯಕ್ಕೆ ಚಿತ್ರರಂಗ ಕಾರಣ. ನಾನು ಸಿನಿಮಾ ಇಂಡಸ್ಟ್ರಿಗೆ ಋಣಿಯಾಗಿದ್ದೇನೆ. ನಾನು ನನ್ನ ತಂದೆ-ತಾಯಿಗೆ ಕೊನಿಡೇಲ ಶಿವಶಂಕರ ವರ ಪ್ರಸಾದ್ ಆಗಿ ಜನಿಸಿದೆ. ಚಿತ್ರರಂಗದಲ್ಲಿ ಚಿರಂಜೀವಿಯಾಗಿ ಮರುಜನ್ಮ ಪಡೆದಿದ್ದೇನೆ’ ಎಂದಿದ್ದಾರೆ ಅವರು.

ರಾಜಕೀಯದಲ್ಲಿ ನೆಲೆ ಕಂಡುಕೊಳ್ಳಲು ಚಿರಂಜೀವಿ ಅವರು ನಟನೆ ತೊರೆದಿದ್ದರು. ಮುಂದೆಂದೂ ಮತ್ತೆ ಆ ತಪ್ಪು ಮಾಡುವುದಿಲ್ಲ ಎಂದಿದ್ದಾರೆ ಚಿರಂಜೀವಿ. ‘ನಾನು ಕಳೆದ 45 ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಒಂದು ದಶಕ ರಾಜಕೀಯದಲ್ಲಿ ಕಳೆದಿದ್ದೇನೆ. ಕಾರಣಾಂತರಗಳಿಂದ ನಾನು ಚಿತ್ರರಂಗಕ್ಕೆ ಮರಳಬೇಕಾಯಿತು. ಜನರು ನನ್ನನ್ನು ಹೇಗೆ ಸ್ವೀಕರಿಸಬಹುದು ಎನ್ನುವ ಕುತೂಹಲ ಇತ್ತು. ಅವರು ಮತ್ತೆ ಅದೇ ರೀತಿಯ ಪ್ರೀತಿ ತೋರಿದರು. ಅವರು ನನ್ನ ಆಶ್ಚರ್ಯವನ್ನು ದ್ವಿಗುಣಗೊಳಿಸಿದ್ದಾರೆ. ಇದು ನನ್ನ ಅಭಿಮಾನಿಗಳೊಂದಿಗೆ ನನಗಿರುವ ಬಾಂಧವ್ಯ. ಇನ್ನು ನಾನು ಎಂದಿಗೂ ಚಿತ್ರರಂಗವನ್ನು ತೊರೆಯುವುದಿಲ್ಲ ಎಂದು ನನ್ನ ಅಭಿಮಾನಿಗಳಿಗೆ ಭರವಸೆ ನೀಡುತ್ತೇನೆ’ ಎಂದಿದ್ದಾರೆ ಚಿರಂಜೀವಿ.

ಇದನ್ನೂ ಓದಿ
Image
Vijayashanthi: ಚಿರಂಜೀವಿ, ನಾಗಾರ್ಜುನಗೆ ಮಾತಲ್ಲಿ ತಿವಿದ ವಿಜಯಶಾಂತಿ; ಆಮಿರ್​ ಖಾನ್​ಗೆ ಬೆಂಬಲ ನೀಡಿದ್ದೇ ತಪ್ಪಾಯ್ತು
Image
Chiranjeevi: ಸಂಖ್ಯಾಶಾಸ್ತ್ರದ ಪ್ರಕಾರ ಹೆಸರು ಬದಲಾಯಿಸಿಕೊಂಡ ‘ಮೆಗಾ ಸ್ಟಾರ್​’ ಚಿರಂಜೀವಿ; ಇದೆಲ್ಲಾ ವರ್ಕ್​ ಆಗತ್ತಾ?
Image
36 ವರ್ಷದ ಬಳಿಕ ಮರುಕಳಿಸಿತು ಇತಿಹಾಸ; ಕಮಲ್​ ಹಾಸನ್​-ಚಿರಂಜೀವಿ ಸ್ನೇಹದ ರೆಟ್ರೋ ಫೋಟೋ ವೈರಲ್
Image
‘ವಿಕ್ರಮ್​’ ಸಿನಿಮಾ ಸಕ್ಸಸ್​ ಪಾರ್ಟಿ ಆಯೋಜಿಸಿದ ಚಿರಂಜೀವಿ; ಗಮನ ಸೆಳೆದ ಸಲ್ಮಾನ್ ಖಾನ್

ಇದನ್ನೂ ಓದಿ: Megastar Chiranjeevi: ಮೆಗಾ ಸ್ಟಾರ್​ ಚಿರಂಜೀವಿಗೆ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ-2022’ ಪ್ರಶಸ್ತಿ

‘ವಿಶ್ವಾದ್ಯಂತ ಇರುವ ತೆಲುಗು ಚಿತ್ರರಂಗದ ಅಭಿಮಾನಿಗಳ ಪ್ರೀತಿಗೆ ನಾನು ಗುಲಾಮ. ಆ ಪ್ರೀತಿಯಿಂದಾಗಿ ನಾನು ಇಂದು ಇಲ್ಲಿದ್ದೇನೆ. ಇಂತಹ ಪ್ರಶಸ್ತಿಗಳಿಂದ ಗೌರವಿಸಲ್ಪಟ್ಟಿದ್ದೇನೆ. ನಿಮ್ಮ ಪ್ರೀತಿಗೆ ನಾನು ಕೃತಜ್ಞನಾಗಿರುತ್ತೇನೆ’ ಎಂದು ಚಿರಂಜೀವಿ ಹೇಳಿದ್ದಾರೆ.

ಇದನ್ನೂ ಓದಿ:  ‘ನಾವು ಮಾತ್ರ’: ಚಿರಂಜೀವಿ ಜತೆಗಿನ ಹಳೆ ನೆನಪು ತೆರೆದಿಟ್ಟ ನಟಿ ಮೇಘನಾ ರಾಜ್​

ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾ ಹೀನಾಯವಾಗಿ ಸೋತಿತು. ‘ಗಾಡ್​ಫಾದರ್’ ಚಿತ್ರ ಕೂಡ ಮಿಶ್ರಪ್ರತಿಕ್ರಿಯೆ ಪಡೆಯಿತು. ಅವರು ಸದ್ಯ ಹೊಸ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:14 am, Tue, 29 November 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?