AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ ಸ್ಟಾರ್​ ನಟರ ವಿರುದ್ಧ ತಿರುಗಿ ಬಿದ್ದ ನಾನಿ; ಫ್ಯಾನ್ಸ್​ ವಾರ್​​ಗೆ ಮುನ್ನುಡಿ?

ಟಾಲಿವುಡ್​ನಲ್ಲಿ ಸ್ಟಾರ್​ ನಟರು ಕಟೌಟ್​​ಗೆ ಹಾಲು ಹಾಕುತ್ತಾರೆ. ಕೆಲವೊಮ್ಮೆ ಫ್ಯಾನ್ಸ್​ ವಾರ್ ಕೂಡ ಮಾಡುತ್ತಾರೆ. ಇದನ್ನು ಉಲ್ಲೇಖಿಸಿ ನಾನಿ ತಮ್ಮ ಭಾಷಣದ ವೇಳೆ ಟಾಲಿವುಡ್​ನ ಸ್ಟಾರ್​​ಗಳಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ ಎನ್ನಲಾಗುತ್ತಿದೆ.

ಟಾಲಿವುಡ್​ ಸ್ಟಾರ್​ ನಟರ ವಿರುದ್ಧ ತಿರುಗಿ ಬಿದ್ದ ನಾನಿ; ಫ್ಯಾನ್ಸ್​ ವಾರ್​​ಗೆ ಮುನ್ನುಡಿ?
ನಾನಿ
ರಾಜೇಶ್ ದುಗ್ಗುಮನೆ
|

Updated on:Mar 28, 2021 | 6:52 PM

Share

ಟಾಲಿವುಡ್​ ನಟ ನಾನಿ ಸದಾ ವಿವಾದಗಳಿಂದ ದೂರವೇ ಇರುತ್ತಾರೆ. ಯಾರ ಜತೆಯೂ ಅವರು ಕಾಲು ಕೆರೆದುಕೊಂಡು ಜಗಳಕ್ಕೆ ಹೋದವರಲ್ಲ. ಮತ್ತೊಂದು ಅಚ್ಚರಿಯ ವಿಚಾರ ಎಂದರೆ ಅವರು ಎಲ್ಲಿಯೂ ಅಭಿಮಾನಿಗಳನ್ನು ಭೇಟಿ ಮಾಡುವುದಿಲ್ಲ. ಈ ಬಗ್ಗೆ ಫ್ಯಾನ್ಸ್​ಗೆ ಬೇಸರವಿದೆ. ಈ ಬಗ್ಗೆ ಮಾತನಾಡುವಾಗ ನಾನಿ ಟಾಲಿವುಡ್​ ಸ್ಟಾರ್​ ನಟರ ಬಗ್ಗೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಈ ವಿಚಾರದಲ್ಲಿ ಫ್ಯಾನ್ಸ್​ ವಾರ್​ ಸ್ಟಾರ್ಟ್​ ಆದರೂ ಅಚ್ಚರಿ ಇಲ್ಲ ಎನ್ನುತ್ತಿದ್ದಾರೆ ಟಾಲಿವುಡ್​ ಮಂದಿ. ನನ್ನ ಅಭಿಮಾನಿಗಳು ನನ್ನ ಕಚೇರಿಗೆ, ಶೂಟಿಂಗ್ ಸ್ಪಾಟ್​ಗೆ ಭೇಟಿ ನೀಡಿದಾಗ ಅಥವಾ ನನ್ನ ಕಾರ್ಯಕ್ರಮಕ್ಕೆ ತೆರಳಿದಾಗ ನನ್ನನ್ನು ಭೇಟಿಯಾಗಲು ಅಥವಾ ನನ್ನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅವರಿಗೆ ಅವಕಾಶ ಸಿಗುವುದಿಲ್ಲ. ಈ ಬಗ್ಗೆ ಟ್ವಿಟರ್‌ನಲ್ಲಿ ಅವರ ಕಾಮೆಂಟ್‌ಗಳನ್ನು ನೋಡುತ್ತೇನೆ. ನಾನಿಗೆ ಅಭಿಮಾನಿಗಳ ಬಗ್ಗೆ ಕಾಳಜಿ ಇಲ್ಲ ಎಂಬುದು ಅವರ ಆಲೋಚನೆ. ನಾನು ಈ ವಿಚಾರವನ್ನು ನೇರವಾಗಿ ಹೇಳುತ್ತೇನೆ. ನನ್ನ ಅಭಿಮಾನಿಗಳನ್ನು ನಾನು ಎಂದಿಗೂ ಪ್ರೋತ್ಸಾಹಿಸುವುದಿಲ್ಲ, ಎಂದು ನಾನಿ ಹೇಳಿದ್ದಾರೆ.

ಬೇರೆ ಹೀರೋಗಳ ಅಭಿಮಾನಿಗಳಂತೆ ನನ್ನ ಅಭಿಮಾನಿಗಳು ಇರಬಾರದು. ನನ್ನ ಅಭಿಮಾನಿಗಳು ಕಿಡಿಗೇಡಿತನ ತೋರಬಾರದು. ನನ್ನ ಕಟೌಟ್‌ಗಳಿಗೆ ಹಾಲಿನ ಅಭಿಷೇಕ ಮಾಡಬಾರದು. ನನ್ನ ಪಾಲಕರು ನನ್ನ ಬಗ್ಗೆ ಹೇಗೆ ಹೆಮ್ಮೆ ಪಡುತ್ತಾರೋ ಅದೇ ರೀತಿ ನನ್ನ ಅಭಿಮಾನಿಗಳು ನನ್ನ ಬಗ್ಗೆ ಹೆಮ್ಮೆ ಪಡುವಂತೆ ಮಾಡಲು ನಾನು ಬಯಸುತ್ತೇನೆ. ನನ್ನನ್ನು ನೋಡುವವರಿಗೆ ನನ್ನ ಕೈಯಲ್ಲಿರುವ ಇಟ್ಟಿಗೆ ಮಾತ್ರ ಕಾಣಬಹುದು. ಆದರೆ, ಒಂದು ದಿನ ಅವರು ಗಟ್ಟಿಯಾದ ಗೋಡೆಯನ್ನು ನೋಡುತ್ತಾರೆ. ಈ ಗೋಡೆ ಬುಲ್ಡೋಜರ್​ನಿಂದಲೂ ಮುಟ್ಟಲು ಸಾಧ್ಯವಿಲ್ಲ ಎಂದು ಭಾವುಕರಾಗಿದ್ದಾರೆ.

ಟಾಲಿವುಡ್​ ಸ್ಟಾರ್​ ನಟರಿಗೆ ಸಾಕಷ್ಟು ಫ್ಯಾನ್ಸ್​ಗಳಿದ್ದಾರೆ. ಅವರನ್ನು ದೇವರಂತೆ ಆರಾಧನೆ ಕೂಡ ಮಾಡುತ್ತಾರೆ. ಕಟೌಟ್​​ಗೆ ಹಾಲು ಹಾಕುತ್ತಾರೆ. ಕೆಲವೊಮ್ಮೆ ಫ್ಯಾನ್ಸ್​ ವಾರ್ ಕೂಡ ಮಾಡುತ್ತಾರೆ. ಇದನ್ನು ಉಲ್ಲೇಖಿಸಿ ನಾನಿ ತಮ್ಮ ಭಾಷಣದ ವೇಳೆ ಟಾಲಿವುಡ್​ನ ಸ್ಟಾರ್​​ಗಳಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ಫ್ಯಾನ್ಸ್​ ವಾರ ಆರಂಭವಾಗಬಹುದು ಎನ್ನುವ ಮಾತು ಕೇಳಿ ಬಂದಿದೆ.

ಇದನ್ನೂ ಓದಿ: ಟಾಲಿವುಡ್​ನಲ್ಲಿ ಕನ್ನಡದ ನಟಿಯರಿಗೆ ಟಫ್ ಕಾಂಪಿಟೇಷನ್ ಕೊಡುತ್ತಿರುವ ಮತ್ತೊಬ್ಬ ಕನ್ನಡದ ನಟಿ!

Published On - 6:28 pm, Sun, 28 March 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!