AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲಿಗೆ ಬಿದ್ದರೂ ಸರಿಯೇ ನಾನು ಸಲ್ಮಾನ್​ ಸಿನಿಮಾ ವಿಮರ್ಶೆ ಮಾಡಿಯೇ ತೀರುತ್ತೇನೆ; ಜಿದ್ದಿಗೆ ಬಿದ್ದ ಕಮಾಲ್​ ಖಾನ್​

ಮಾನನಷ್ಟ ಮೊಕದ್ದಮೆ ಹಾಕಿರುರುವ ವಿಚಾರವನ್ನು ಕಮಾಲ್​ ತಮ್ಮ ಜಾಹೀರಾತಿಗೂ ಬಳಕೆ ಮಾಡಿಕೊಂಡಿದ್ದಾರೆ! ಈ ವಿಚಾರ ಅಭಿಮಾನಿಗಳಿಗೆ ಸಾಕಷ್ಟು ಅಚ್ಚರಿ ಮೂಡಿಸಿದೆ.

ಕಾಲಿಗೆ ಬಿದ್ದರೂ ಸರಿಯೇ ನಾನು ಸಲ್ಮಾನ್​ ಸಿನಿಮಾ ವಿಮರ್ಶೆ ಮಾಡಿಯೇ ತೀರುತ್ತೇನೆ; ಜಿದ್ದಿಗೆ ಬಿದ್ದ ಕಮಾಲ್​ ಖಾನ್​
ಸಲ್ಮಾನ್​ ಖಾನ್​-ಕಮಾಲ್​ ಖಾನ್
ರಾಜೇಶ್ ದುಗ್ಗುಮನೆ
| Edited By: |

Updated on: May 28, 2021 | 4:09 PM

Share

ನಟ ಸಲ್ಮಾನ್​ ಖಾನ್​ ಮತ್ತು ಕಮಾಲ್​ ಆರ್​. ಖಾನ್​ ನಡುವೆ ಕಿತ್ತಾಟ​ ಆರಂಭವಾಗಿದೆ. ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್​’ ಚಿತ್ರದ ಬಗ್ಗೆ ಉತ್ತಮ ವಿಮರ್ಶೆ ನೀಡಿಲ್ಲ ಎನ್ನುವ ಕಾರಣಕ್ಕೆ ಸಲ್ಮಾನ್​ ಖಾನ್​ ಅವರು ಕಮಾಲ್​ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ ಎನ್ನಲಾಗಿದೆ. ಇದರಿಂದ ಬೇಸರಗೊಂಡಿದ್ದ ಕಮಾಲ್​, ನಾನು ಮುಂದೆಂದೂ ಸಲ್ಲು ಚಿತ್ರಗಳನ್ನು ವಿಮರ್ಶೆ ಮಾಡುವುದಿಲ್ಲ ಎಂದಿದ್ದರು. ಆದರೆ, ಈಗ ಅವರು ತಮ್ಮ ವರಸೆ ಬದಲಿಸಿದ್ದಾರೆ. ಸಲ್ಮಾನ್​ ಖಾನ್ ನನ್ನ ಕಾಲಿಗೆ ಬಿದ್ದರೂ ಸರಿಯೇ ನಾನು ಅವರ ಸಿನಿಮಾ ವಿಮರ್ಶೆ ಮಾಡಿಯೇ ತೀರುತ್ತೇನೆ ಎಂದಿದ್ದಾರೆ.

‘ಒಂದೊಮ್ಮೆ ನಿರ್ಮಾಪಕರು ಹಾಗೂ ನಟರು ತಮ್ಮ ಸಿನಿಮಾಗಳ ವಿಮರ್ಶೆ ಮಾಡಬೇಡಿ ಎಂದು ಹೇಳಿದರೆ ಅಂಥ ಸಿನಿಮಾವನ್ನು ನಾನೆಂದೂ ವಿಮರ್ಶೆ ಮಾಡಿಲ್ಲ. ಈಗ ಸಲ್ಮಾನ್​ ಖಾನ್​ ನನ್ನ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ. ನಾನು ಅವರ ಸಿನಿಮಾಗಳನ್ನು ಇನ್ಮುಂದೆ ವಿಮರ್ಶೆ ಮಾಡುವುದಿಲ್ಲ’ ಎಂದು ಕಮಾಲ್​ ಹೇಳಿದ್ದರು. ಆದರೆ, ಇಂದು ಮಾಡಿರುವ ಹೊಸ ಟ್ವೀಟ್​ ಅವರ ಮೊದಲ ಹೇಳಿಕೆಗೆ ಸಂಪೂರ್ಣ ವಿರುದ್ಧವಾಗಿದೆ.

‘ಒಂದೊಮ್ಮೆ ನಿರ್ಮಾಪಕರು ಹಾಗೂ ನಟರು ತಮ್ಮ ಸಿನಿಮಾಗಳ ವಿಮರ್ಶೆ ಮಾಡಬೇಡಿ ಎಂದು ಹೇಳಿದರೆ ಅಂಥ ಸಿನಿಮಾವನ್ನು ನಾನೆಂದೂ ವಿಮರ್ಶೆ ಮಾಡಿಲ್ಲ. ಆದರೆ, ಇಂದಿನಿಂದ ಈ ವ್ಯಕ್ತಿ ನನ್ನನ್ನು ಕೇಳಿ ಕೊಳ್ಳಲಿ ಅಥವಾ ಕಾಲಿಗೇ ಬೀಳಲಿ. ನಾನು ಅವರ ಸಿನಿಮಾ ವಿಮರ್ಶೆ ಮಾಡಿಯೇ ಮಾಡುತ್ತೇನೆ’ ಎಂದಿದ್ದಾರೆ. ಈ ಮೂಲಕ ಸಲ್ಲು ವಿರುದ್ಧ ಕಮಾಲ್​ ಜಿದ್ದಿಗೆ ಬಿದ್ದಿದ್ದಾರೆ.

ಇನ್ನು, ಮಾನನಷ್ಟ ಮೊಕದ್ದಮೆ ಹಾಕಿರುರುವ ವಿಚಾರವನ್ನು ಕಮಾಲ್​ ತಮ್ಮ ಜಾಹೀರಾತಿಗೂ ಬಳಕೆ ಮಾಡಿಕೊಂಡಿದ್ದಾರೆ! ’ಯೂಟ್ಯೂಬ್​ನಲ್ಲಿ ರಾಧೆ ಬಗ್ಗೆ ಸಾಕಷ್ಟು ಕೆಟ್ಟ ವಿಮರ್ಶೆಗಳು ಸಿಗುತ್ತವೆ. ಆದರೆ, #TheBrandKRK ಹೊರತು ಪಡಿಸಿ ಇನ್ನಾರ ಬಗ್ಗೆಯೂ ಸಲ್ಲುಗೆ ಯಾವುದೇ ತೊಂದರೆ ಇಲ್ಲ. ಇದರಿಂದ ನಾನು ನಂಬರ್​ 1 ವಿಮರ್ಶಕ ಎಂಬುದು ಸಾಬೀತಾಗಿದೆ’ ಎಂದಿದ್ದಾರೆ ಕಮಾಲ್​.

ಕಮಾಲ್​ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸಿನಿಮಾ ವಿಮರ್ಶೆ ಮಾತ್ರ ಕಾರಣ ಅಲ್ಲ ಎನ್ನಲಾಗಿದೆ. ಸಲ್ಮಾನ್ ಖಾನ್ ಹಾಗೂ ಬೀಯಿಂಗ್​ ಹ್ಯೂಮನ್​ ಬ್ಡ್ಯಾಂಡ್​ ವಿರುದ್ಧ ಕಮಾಲ್​ ಇಲ್ಲಸಲ್ಲದ ಆರೋಪ ಮಾಡಿದ್ದರು ಎನ್ನಲಾಗಿದೆ.  ಹೀಗಾಗಿ, ಕಮಾಲ್​ ವಿರುದ್ಧ ಕೇಸ್​ ದಾಖಲು ಮಾಡಲಾಗಿದೆ ಎಂದು ಸಲ್ಲು ಪರ ವಕೀಲರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ಕಮಾಲ್​ ಖಾನ್​ ಮೇಲೆ ಸಲ್ಲು ಮಾನನಷ್ಟ ಮೊಕದ್ದಮೆ ಹಾಕಲು ರಾಧೆ ವಿಮರ್ಶೆ ಕಾರಣವಲ್ಲ; ಮತ್ತೇನು?

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ