AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲಿಗೆ ಬಿದ್ದರೂ ಸರಿಯೇ ನಾನು ಸಲ್ಮಾನ್​ ಸಿನಿಮಾ ವಿಮರ್ಶೆ ಮಾಡಿಯೇ ತೀರುತ್ತೇನೆ; ಜಿದ್ದಿಗೆ ಬಿದ್ದ ಕಮಾಲ್​ ಖಾನ್​

ಮಾನನಷ್ಟ ಮೊಕದ್ದಮೆ ಹಾಕಿರುರುವ ವಿಚಾರವನ್ನು ಕಮಾಲ್​ ತಮ್ಮ ಜಾಹೀರಾತಿಗೂ ಬಳಕೆ ಮಾಡಿಕೊಂಡಿದ್ದಾರೆ! ಈ ವಿಚಾರ ಅಭಿಮಾನಿಗಳಿಗೆ ಸಾಕಷ್ಟು ಅಚ್ಚರಿ ಮೂಡಿಸಿದೆ.

ಕಾಲಿಗೆ ಬಿದ್ದರೂ ಸರಿಯೇ ನಾನು ಸಲ್ಮಾನ್​ ಸಿನಿಮಾ ವಿಮರ್ಶೆ ಮಾಡಿಯೇ ತೀರುತ್ತೇನೆ; ಜಿದ್ದಿಗೆ ಬಿದ್ದ ಕಮಾಲ್​ ಖಾನ್​
ಸಲ್ಮಾನ್​ ಖಾನ್​-ಕಮಾಲ್​ ಖಾನ್
ರಾಜೇಶ್ ದುಗ್ಗುಮನೆ
| Edited By: |

Updated on: May 28, 2021 | 4:09 PM

Share

ನಟ ಸಲ್ಮಾನ್​ ಖಾನ್​ ಮತ್ತು ಕಮಾಲ್​ ಆರ್​. ಖಾನ್​ ನಡುವೆ ಕಿತ್ತಾಟ​ ಆರಂಭವಾಗಿದೆ. ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್​’ ಚಿತ್ರದ ಬಗ್ಗೆ ಉತ್ತಮ ವಿಮರ್ಶೆ ನೀಡಿಲ್ಲ ಎನ್ನುವ ಕಾರಣಕ್ಕೆ ಸಲ್ಮಾನ್​ ಖಾನ್​ ಅವರು ಕಮಾಲ್​ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ ಎನ್ನಲಾಗಿದೆ. ಇದರಿಂದ ಬೇಸರಗೊಂಡಿದ್ದ ಕಮಾಲ್​, ನಾನು ಮುಂದೆಂದೂ ಸಲ್ಲು ಚಿತ್ರಗಳನ್ನು ವಿಮರ್ಶೆ ಮಾಡುವುದಿಲ್ಲ ಎಂದಿದ್ದರು. ಆದರೆ, ಈಗ ಅವರು ತಮ್ಮ ವರಸೆ ಬದಲಿಸಿದ್ದಾರೆ. ಸಲ್ಮಾನ್​ ಖಾನ್ ನನ್ನ ಕಾಲಿಗೆ ಬಿದ್ದರೂ ಸರಿಯೇ ನಾನು ಅವರ ಸಿನಿಮಾ ವಿಮರ್ಶೆ ಮಾಡಿಯೇ ತೀರುತ್ತೇನೆ ಎಂದಿದ್ದಾರೆ.

‘ಒಂದೊಮ್ಮೆ ನಿರ್ಮಾಪಕರು ಹಾಗೂ ನಟರು ತಮ್ಮ ಸಿನಿಮಾಗಳ ವಿಮರ್ಶೆ ಮಾಡಬೇಡಿ ಎಂದು ಹೇಳಿದರೆ ಅಂಥ ಸಿನಿಮಾವನ್ನು ನಾನೆಂದೂ ವಿಮರ್ಶೆ ಮಾಡಿಲ್ಲ. ಈಗ ಸಲ್ಮಾನ್​ ಖಾನ್​ ನನ್ನ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ. ನಾನು ಅವರ ಸಿನಿಮಾಗಳನ್ನು ಇನ್ಮುಂದೆ ವಿಮರ್ಶೆ ಮಾಡುವುದಿಲ್ಲ’ ಎಂದು ಕಮಾಲ್​ ಹೇಳಿದ್ದರು. ಆದರೆ, ಇಂದು ಮಾಡಿರುವ ಹೊಸ ಟ್ವೀಟ್​ ಅವರ ಮೊದಲ ಹೇಳಿಕೆಗೆ ಸಂಪೂರ್ಣ ವಿರುದ್ಧವಾಗಿದೆ.

‘ಒಂದೊಮ್ಮೆ ನಿರ್ಮಾಪಕರು ಹಾಗೂ ನಟರು ತಮ್ಮ ಸಿನಿಮಾಗಳ ವಿಮರ್ಶೆ ಮಾಡಬೇಡಿ ಎಂದು ಹೇಳಿದರೆ ಅಂಥ ಸಿನಿಮಾವನ್ನು ನಾನೆಂದೂ ವಿಮರ್ಶೆ ಮಾಡಿಲ್ಲ. ಆದರೆ, ಇಂದಿನಿಂದ ಈ ವ್ಯಕ್ತಿ ನನ್ನನ್ನು ಕೇಳಿ ಕೊಳ್ಳಲಿ ಅಥವಾ ಕಾಲಿಗೇ ಬೀಳಲಿ. ನಾನು ಅವರ ಸಿನಿಮಾ ವಿಮರ್ಶೆ ಮಾಡಿಯೇ ಮಾಡುತ್ತೇನೆ’ ಎಂದಿದ್ದಾರೆ. ಈ ಮೂಲಕ ಸಲ್ಲು ವಿರುದ್ಧ ಕಮಾಲ್​ ಜಿದ್ದಿಗೆ ಬಿದ್ದಿದ್ದಾರೆ.

ಇನ್ನು, ಮಾನನಷ್ಟ ಮೊಕದ್ದಮೆ ಹಾಕಿರುರುವ ವಿಚಾರವನ್ನು ಕಮಾಲ್​ ತಮ್ಮ ಜಾಹೀರಾತಿಗೂ ಬಳಕೆ ಮಾಡಿಕೊಂಡಿದ್ದಾರೆ! ’ಯೂಟ್ಯೂಬ್​ನಲ್ಲಿ ರಾಧೆ ಬಗ್ಗೆ ಸಾಕಷ್ಟು ಕೆಟ್ಟ ವಿಮರ್ಶೆಗಳು ಸಿಗುತ್ತವೆ. ಆದರೆ, #TheBrandKRK ಹೊರತು ಪಡಿಸಿ ಇನ್ನಾರ ಬಗ್ಗೆಯೂ ಸಲ್ಲುಗೆ ಯಾವುದೇ ತೊಂದರೆ ಇಲ್ಲ. ಇದರಿಂದ ನಾನು ನಂಬರ್​ 1 ವಿಮರ್ಶಕ ಎಂಬುದು ಸಾಬೀತಾಗಿದೆ’ ಎಂದಿದ್ದಾರೆ ಕಮಾಲ್​.

ಕಮಾಲ್​ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸಿನಿಮಾ ವಿಮರ್ಶೆ ಮಾತ್ರ ಕಾರಣ ಅಲ್ಲ ಎನ್ನಲಾಗಿದೆ. ಸಲ್ಮಾನ್ ಖಾನ್ ಹಾಗೂ ಬೀಯಿಂಗ್​ ಹ್ಯೂಮನ್​ ಬ್ಡ್ಯಾಂಡ್​ ವಿರುದ್ಧ ಕಮಾಲ್​ ಇಲ್ಲಸಲ್ಲದ ಆರೋಪ ಮಾಡಿದ್ದರು ಎನ್ನಲಾಗಿದೆ.  ಹೀಗಾಗಿ, ಕಮಾಲ್​ ವಿರುದ್ಧ ಕೇಸ್​ ದಾಖಲು ಮಾಡಲಾಗಿದೆ ಎಂದು ಸಲ್ಲು ಪರ ವಕೀಲರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ಕಮಾಲ್​ ಖಾನ್​ ಮೇಲೆ ಸಲ್ಲು ಮಾನನಷ್ಟ ಮೊಕದ್ದಮೆ ಹಾಕಲು ರಾಧೆ ವಿಮರ್ಶೆ ಕಾರಣವಲ್ಲ; ಮತ್ತೇನು?

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!