AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲಿಗೆ ಬಿದ್ದರೂ ಸರಿಯೇ ನಾನು ಸಲ್ಮಾನ್​ ಸಿನಿಮಾ ವಿಮರ್ಶೆ ಮಾಡಿಯೇ ತೀರುತ್ತೇನೆ; ಜಿದ್ದಿಗೆ ಬಿದ್ದ ಕಮಾಲ್​ ಖಾನ್​

ಮಾನನಷ್ಟ ಮೊಕದ್ದಮೆ ಹಾಕಿರುರುವ ವಿಚಾರವನ್ನು ಕಮಾಲ್​ ತಮ್ಮ ಜಾಹೀರಾತಿಗೂ ಬಳಕೆ ಮಾಡಿಕೊಂಡಿದ್ದಾರೆ! ಈ ವಿಚಾರ ಅಭಿಮಾನಿಗಳಿಗೆ ಸಾಕಷ್ಟು ಅಚ್ಚರಿ ಮೂಡಿಸಿದೆ.

ಕಾಲಿಗೆ ಬಿದ್ದರೂ ಸರಿಯೇ ನಾನು ಸಲ್ಮಾನ್​ ಸಿನಿಮಾ ವಿಮರ್ಶೆ ಮಾಡಿಯೇ ತೀರುತ್ತೇನೆ; ಜಿದ್ದಿಗೆ ಬಿದ್ದ ಕಮಾಲ್​ ಖಾನ್​
ಸಲ್ಮಾನ್​ ಖಾನ್​-ಕಮಾಲ್​ ಖಾನ್
ರಾಜೇಶ್ ದುಗ್ಗುಮನೆ
| Edited By: |

Updated on: May 28, 2021 | 4:09 PM

Share

ನಟ ಸಲ್ಮಾನ್​ ಖಾನ್​ ಮತ್ತು ಕಮಾಲ್​ ಆರ್​. ಖಾನ್​ ನಡುವೆ ಕಿತ್ತಾಟ​ ಆರಂಭವಾಗಿದೆ. ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್​’ ಚಿತ್ರದ ಬಗ್ಗೆ ಉತ್ತಮ ವಿಮರ್ಶೆ ನೀಡಿಲ್ಲ ಎನ್ನುವ ಕಾರಣಕ್ಕೆ ಸಲ್ಮಾನ್​ ಖಾನ್​ ಅವರು ಕಮಾಲ್​ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ ಎನ್ನಲಾಗಿದೆ. ಇದರಿಂದ ಬೇಸರಗೊಂಡಿದ್ದ ಕಮಾಲ್​, ನಾನು ಮುಂದೆಂದೂ ಸಲ್ಲು ಚಿತ್ರಗಳನ್ನು ವಿಮರ್ಶೆ ಮಾಡುವುದಿಲ್ಲ ಎಂದಿದ್ದರು. ಆದರೆ, ಈಗ ಅವರು ತಮ್ಮ ವರಸೆ ಬದಲಿಸಿದ್ದಾರೆ. ಸಲ್ಮಾನ್​ ಖಾನ್ ನನ್ನ ಕಾಲಿಗೆ ಬಿದ್ದರೂ ಸರಿಯೇ ನಾನು ಅವರ ಸಿನಿಮಾ ವಿಮರ್ಶೆ ಮಾಡಿಯೇ ತೀರುತ್ತೇನೆ ಎಂದಿದ್ದಾರೆ.

‘ಒಂದೊಮ್ಮೆ ನಿರ್ಮಾಪಕರು ಹಾಗೂ ನಟರು ತಮ್ಮ ಸಿನಿಮಾಗಳ ವಿಮರ್ಶೆ ಮಾಡಬೇಡಿ ಎಂದು ಹೇಳಿದರೆ ಅಂಥ ಸಿನಿಮಾವನ್ನು ನಾನೆಂದೂ ವಿಮರ್ಶೆ ಮಾಡಿಲ್ಲ. ಈಗ ಸಲ್ಮಾನ್​ ಖಾನ್​ ನನ್ನ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ. ನಾನು ಅವರ ಸಿನಿಮಾಗಳನ್ನು ಇನ್ಮುಂದೆ ವಿಮರ್ಶೆ ಮಾಡುವುದಿಲ್ಲ’ ಎಂದು ಕಮಾಲ್​ ಹೇಳಿದ್ದರು. ಆದರೆ, ಇಂದು ಮಾಡಿರುವ ಹೊಸ ಟ್ವೀಟ್​ ಅವರ ಮೊದಲ ಹೇಳಿಕೆಗೆ ಸಂಪೂರ್ಣ ವಿರುದ್ಧವಾಗಿದೆ.

‘ಒಂದೊಮ್ಮೆ ನಿರ್ಮಾಪಕರು ಹಾಗೂ ನಟರು ತಮ್ಮ ಸಿನಿಮಾಗಳ ವಿಮರ್ಶೆ ಮಾಡಬೇಡಿ ಎಂದು ಹೇಳಿದರೆ ಅಂಥ ಸಿನಿಮಾವನ್ನು ನಾನೆಂದೂ ವಿಮರ್ಶೆ ಮಾಡಿಲ್ಲ. ಆದರೆ, ಇಂದಿನಿಂದ ಈ ವ್ಯಕ್ತಿ ನನ್ನನ್ನು ಕೇಳಿ ಕೊಳ್ಳಲಿ ಅಥವಾ ಕಾಲಿಗೇ ಬೀಳಲಿ. ನಾನು ಅವರ ಸಿನಿಮಾ ವಿಮರ್ಶೆ ಮಾಡಿಯೇ ಮಾಡುತ್ತೇನೆ’ ಎಂದಿದ್ದಾರೆ. ಈ ಮೂಲಕ ಸಲ್ಲು ವಿರುದ್ಧ ಕಮಾಲ್​ ಜಿದ್ದಿಗೆ ಬಿದ್ದಿದ್ದಾರೆ.

ಇನ್ನು, ಮಾನನಷ್ಟ ಮೊಕದ್ದಮೆ ಹಾಕಿರುರುವ ವಿಚಾರವನ್ನು ಕಮಾಲ್​ ತಮ್ಮ ಜಾಹೀರಾತಿಗೂ ಬಳಕೆ ಮಾಡಿಕೊಂಡಿದ್ದಾರೆ! ’ಯೂಟ್ಯೂಬ್​ನಲ್ಲಿ ರಾಧೆ ಬಗ್ಗೆ ಸಾಕಷ್ಟು ಕೆಟ್ಟ ವಿಮರ್ಶೆಗಳು ಸಿಗುತ್ತವೆ. ಆದರೆ, #TheBrandKRK ಹೊರತು ಪಡಿಸಿ ಇನ್ನಾರ ಬಗ್ಗೆಯೂ ಸಲ್ಲುಗೆ ಯಾವುದೇ ತೊಂದರೆ ಇಲ್ಲ. ಇದರಿಂದ ನಾನು ನಂಬರ್​ 1 ವಿಮರ್ಶಕ ಎಂಬುದು ಸಾಬೀತಾಗಿದೆ’ ಎಂದಿದ್ದಾರೆ ಕಮಾಲ್​.

ಕಮಾಲ್​ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸಿನಿಮಾ ವಿಮರ್ಶೆ ಮಾತ್ರ ಕಾರಣ ಅಲ್ಲ ಎನ್ನಲಾಗಿದೆ. ಸಲ್ಮಾನ್ ಖಾನ್ ಹಾಗೂ ಬೀಯಿಂಗ್​ ಹ್ಯೂಮನ್​ ಬ್ಡ್ಯಾಂಡ್​ ವಿರುದ್ಧ ಕಮಾಲ್​ ಇಲ್ಲಸಲ್ಲದ ಆರೋಪ ಮಾಡಿದ್ದರು ಎನ್ನಲಾಗಿದೆ.  ಹೀಗಾಗಿ, ಕಮಾಲ್​ ವಿರುದ್ಧ ಕೇಸ್​ ದಾಖಲು ಮಾಡಲಾಗಿದೆ ಎಂದು ಸಲ್ಲು ಪರ ವಕೀಲರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ಕಮಾಲ್​ ಖಾನ್​ ಮೇಲೆ ಸಲ್ಲು ಮಾನನಷ್ಟ ಮೊಕದ್ದಮೆ ಹಾಕಲು ರಾಧೆ ವಿಮರ್ಶೆ ಕಾರಣವಲ್ಲ; ಮತ್ತೇನು?

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್