AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ವೇಶ್ಯೆ ಮನೆಯಲ್ಲಿ ಕೆಲಸಕ್ಕೆ ಬಿಟ್ಟಿದ್ದರು; ಭಯಾನಕ ಘಟನೆ ಬಗ್ಗೆ ಹೇಳಿಕೊಂಡ ಚಕ್ರವರ್ತಿ

ಓರ್ವ ಕಾನ್ಸ್​ಟೇಬಲ್​ ನನ್ನನ್ನು ಬದುಕಿಸಿದ. ಅಲ್ಲಿಂದ ಬಂದು ನಾನು ನೇರವಾಗಿ ಹಿಮಾಲಯಕ್ಕೆ ಹೋದೆ. ನಂತರ ಬೆಂಗಳೂರಿಗೆ ಬಂದೆ ಎಂದು ಚಕ್ರವರ್ತಿ ಚಂದ್ರಚೂಡ್​ ಹೇಳಿದ್ದಾರೆ.

ನನ್ನನ್ನು ವೇಶ್ಯೆ ಮನೆಯಲ್ಲಿ ಕೆಲಸಕ್ಕೆ ಬಿಟ್ಟಿದ್ದರು; ಭಯಾನಕ ಘಟನೆ ಬಗ್ಗೆ ಹೇಳಿಕೊಂಡ ಚಕ್ರವರ್ತಿ
ಚಕ್ರವರ್ತಿ ಚಂದ್ರಚೂಡ
ರಾಜೇಶ್ ದುಗ್ಗುಮನೆ
| Edited By: |

Updated on: Apr 29, 2021 | 7:31 AM

Share

ಚಕ್ರವರ್ತಿ ಚಂದ್ರಚೂಡ್​ ಸಾಕಷ್ಟು ಕಷ್ಟಗಳನ್ನು ಎದುರಿಸಿ ಬಂದವರು. ಈ ಬಗ್ಗೆ ಅವರು ಮನೆಯಲ್ಲಿ ಸಾಕಷ್ಟು ಬಾರಿ ಹೇಳಿಕೊಂಡಿದ್ದಾರೆ ಕೂಡ. ಈಗ ಅವರು ಭಯಾನಕ ಘಟನೆ ಬಗ್ಗೆ ಹೇಳಿಕೊಂಡಿದ್ದಾರೆ. ಅವರ ಜೀವನದಲ್ಲಿ ನಡೆದ ಈ ಘಟನೆ ಕೇಳಿ ಎಲ್ಲರೂ ಶಾಕ್​ ಆಗಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಸ್ಪರ್ಧಿಗಳು ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆ ಬಗ್ಗೆ ಹೇಳಬೇಕು. ಆಗ ಚಕ್ರವರ್ತಿ ಎದ್ದು ನಿಂತರು. ನಾನು ಚೆನ್ನೈ ರೈಲ್ವೆ ನಿಲ್ದಾಣದಲ್ಲಿದ್ದೆ. ಮೂರು ದಿನಗಳ ಕಾಲ ಹಸಿದುಕೊಂಡಿದ್ದೆ. ಮನೆಯ ಸಂಪರ್ಕ ಕಡಿತವಾಗಿತ್ತು. ಆಗ ನನಗೆ ಓರ್ವನ ಪರಿಚಯ ಆಯ್ತು. ಅವನು ನನ್ನನ್ನು ಕರೆದುಕೊಂಡು ಹೋಗಿ ವೇಶ್ಯರ ಮನೆಗೆ ಕೆಲಸಕ್ಕೆ ಬಿಟ್ಟಿದ್ದ. ಅಲ್ಲಿ 127 ಜನ ಇದ್ರು. ಇದೇ ವೇಳೆ 14 ವರ್ಷದ ಹುಡುಗಿಯನ್ನು ಅವಳದೇ ಚಿಕ್ಕಪ್ಪ ಮಾರಿ ಹೋಗಿದ್ದ. ನನಗೂ ಅವಳಿಗೂ ಪರಿಚಯ ಆಯಿತು ಎಂದು ಮಾತು ಆರಂಭಿಸಿದರು ಚಂದ್ರಚೂಡ್​.

ನನ್ನನ್ನು ಇಲ್ಲಿಂದ ಕರೆದುಕೊಂಡು ಹೋಗು ಎಂದು ಬಾಲಕಿ ನನ್ನ ಬಳಿ ಅಂಗಲಾಚಿದಳು. ವೇಸ್ಟ್​ ತುಂಬಿಸಿಕೊಂಡು ಹೋಗುವ ಗಾಡಿಯಲ್ಲಿ ಇಬ್ಬರೂ ಹೊರಟೆವು. ರೈಲ್ವೆ ನಿಲ್ದಾಣಕ್ಕೆ ಹೋದೆವು. ದುಡ್ಡು ಕೂಡ ಇರಲಿಲ್ಲ. ಬೆಂಗಳೂರಿಗೆ ಹೋಗುವ ರೈಲು ಏರಿದೆವು. ಬಂಗಾರ ಪೇಟೆ ಬಳಿ ನಮ್ಮನ್ನು ಹಿಡಿದರು. ಇಬ್ಬರಿಗೂ ಸರಿಯಾಗಿ ಹೊಡೆದರು. ಅವಳು ಸತ್ತಳು. ನಾನು ಬದುಕಿದೆ ಎಂದು ಚಕ್ರವರ್ತಿ ಭಯಾನಕ ಘಟನೆ ಬಿಚ್ಚಿಟ್ಟಿದ್ದಾರೆ.

ಓರ್ವ ಕಾನ್ಸ್​ಟೇಬಲ್​ ನನ್ನನ್ನು ಬದುಕಿಸಿದ. ಅಲ್ಲಿಂದ ಬಂದು ನಾನು ನೇರವಾಗಿ ಹಿಮಾಲಯಕ್ಕೆ ಹೋದೆ. ಎರಡು ವರ್ಷ ಅಲ್ಲಿದ್ದೆ. ನಂತರ ಬೆಂಗಳೂರಿಗೆ ಬಂದೆ. ಆಗ ಪತ್ರಕರ್ತ, ಹೋರಾಟಗಾರನಾಗಿ ರೂಪುಗೊಂಡೆ. ವೇಶ್ಯೆಯರಿಗಾಗಿ ಏನಾದರೂ ಮಾಡಬೇಕು ಎಂದುಕೊಂಡೆ. 25 ವೇಶ್ಯಯರನ್ನು ಸೇರಿಸಿ ರವೀಂದ್ರ ಕಲಾಕ್ಷೆತ್ರದಲ್ಲಿ ನಾಟಕವಾಡಿಸಿದೆ ಎಂದು ತಮ್ಮ ಜೀವನದಲ್ಲಿ ನಡೆದ ಘಟನೆ ಬಗ್ಗೆ ಚಕ್ರವರ್ತಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:  Bigg Boss Kannada: ಬಿಗ್​ ಬಾಸ್​ ಬೆಡ್​ರೂಂನಿಂದ ಬಂತು ಮುತ್ತಿನ ಶಬ್ದ! ಕೊಟ್ಟಿದ್ಯಾರು, ತೆಗೆದುಕೊಂಡಿದ್ಯಾರು?

ಬಿಗ್​ ಬಾಸ್​ ಎದುರು ಶುಭಾ ಪೂಂಜಾ ಇಟ್ಟ ಬೇಡಿಕೆ ನೋಡಿ ಮನೆಯವರಿಗೆ ಅಳಬೇಕೋ ನಗಬೇಕೋ ಗೊತ್ತಾಗ್ತಿಲ್ಲ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ