AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎ ಹಾಗೂ ಓಂ ಚಿತ್ರವನ್ನು ನಾನು ಮಾಡಿದ್ದರೆ ಈಗಾಗಲೇ ನಿವೃತ್ತಿ ಪಡೆದಿರುತ್ತಿದ್ದೆ’; ‘ಪುಷ್ಪ’ ನಿರ್ದೇಶಕ ಸುಕುಮಾರ್

ಸುಕುಮಾರ್ ಅವರು ಉಪೇಂದ್ರ ನಿರ್ದೇಶನದ 'ಎ', 'ಓಂ', ಮತ್ತು 'ಉಪೇಂದ್ರ' ಚಿತ್ರಗಳನ್ನು ಹೊಗಳಿದ್ದಾರೆ. ಈ ಚಿತ್ರಗಳು ಅವರನ್ನು ಬೆರಗುಗೊಳಿಸಿವೆ ಎಂದು ಹೇಳಿದ್ದಾರೆ. ಅವರು ಈ ಚಿತ್ರಗಳಿಂದ ಸ್ಫೂರ್ತಿ ಪಡೆದು ತಮ್ಮ ಚಿತ್ರಗಳಲ್ಲಿ ಅಳವಡಿಸಿಕೊಂಡಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಎ ಹಾಗೂ ಓಂ ಚಿತ್ರವನ್ನು ನಾನು ಮಾಡಿದ್ದರೆ ಈಗಾಗಲೇ ನಿವೃತ್ತಿ ಪಡೆದಿರುತ್ತಿದ್ದೆ’; ‘ಪುಷ್ಪ’ ನಿರ್ದೇಶಕ ಸುಕುಮಾರ್
ಸುಕುಮಾರ್-ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on:May 29, 2025 | 7:28 AM

Share

ಉಪೇಂದ್ರ (Upendra) ನಿರ್ದೇಶನ ಮಾಡಿದ್ದ ‘ಎ’, ‘ತರ್ಲೆ ನನ್ಮಗ’, ‘ಓಂ’, ‘ಉಪೇಂದ್ರ ಮೊದಲಾದ ಚಿತ್ರಗಳು ಸೂಪರ್ ಹಿಟ್ ಎನಿಸಿಕೊಂಡಿವೆ. ಈ ಸಿನಿಮಾಗಳು ಪರಭಾಷಾ ನಿರ್ದೇಶಕರಿಗೂ ಸ್ಫೂರ್ತಿ. ಈ ಸಿನಿಮಾನ ನೋಡಿ ಹಾಡಿಹೊಗಳಿದವರು ಅದೆಷ್ಟು ಮಂದಿಯೋ. ಈಗ ಈ ಚಿತ್ರದ ಬಗ್ಗೆ ‘ಪುಷ್ಪ’ ಚಿತ್ರದ ನಿರ್ದೇಶಕ ಸುಕುಮಾರ್ ಮಾತನಾಡಿದ್ದಾರೆ. ಪಕ್ಕದಲ್ಲೇ ಇದ್ದ ಉಪೇಂದ್ರ ಅವರನ್ನು ಹಾಡಿ ಹೊಗಳಿದ್ದಾರೆ.

ಅರ್ಜುನ್ ಸರ್ಜಾ ಅವರು ‘ಸೀತಾ ಪಯಣಂ’ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಐಶ್ವರ್ಯಾ ಅರ್ಜುನ್ ನಟಿಸುತ್ತಿದ್ದಾರೆ. ಈ ಸಿನಿಮಾದ ಟೀಸರ್ ರಿಲೀಸ್ ಆಗಿ ಗಮನ ಸೆಳೆಯಿತು. ಈ ಚಿತ್ರದ ಟೀಸರ್ ಲಾಂಚ್ ವೇಳೆ ಸುಕುಮಾರ್ ಹಾಗೂ ಕನ್ನಡದ ನಟ ಉಪೇಂದ್ರ ಅತಿಥಿಯಾಗಿ ಆಗಮಿಸಿದ್ದರು. ವೇದಿಕೆ ಮೇಲೆ ಉಪೇಂದ್ರ ಬಗ್ಗೆ ಸುಕುಮಾರ್ ಮೆಚ್ಚುಗೆಯ ಮಾತನ್ನು ಆಡಿದರು.

ಇದನ್ನೂ ಓದಿ
Image
ಪವನ್ ಕಲ್ಯಾಣ್ ನಟನೆಯ ‘ಒಜಿ’ ಚಿತ್ರಕ್ಕೆ ಸೊಳ್ಳೆ ಕಾಟ; ಶೂಟಿಂಗ್ ಸ್ಥಗಿತ
Image
ಕಮಲ್ ಹೇಳಿಕೆ ವಿರುದ್ಧ ಧ್ವನಿ ಎತ್ತಿದ ಅಹಿಂಸಾ ಚೇತನ್; ಸೆಲೆಬ್ರಿಟಿಗಳ ಮೌನ
Image
ನಟಿ ದೀಪಿಕಾಗೆ ಕ್ಯಾನ್ಸರ್; ಹೊಟ್ಟೆಯಲ್ಲಿದೆ ಟೆನಿಸ್ ಬಾಲ್ ಆಕಾರದ ಗಡ್ಡೆ
Image
RCB ಗೆಲುವಿನ ಖುಷಿಯಲ್ಲಿ ವಿರಾಟ್​ಗೆ ಮುತ್ತಿನ ಸುರಿಮಳೆ ಸುರಿಸಿದ ಅನುಷ್ಕಾ

‘ಉಪೇಂದ್ರ ತಮ್ಮ ಚಿತ್ರಗಳಿಗೆ ತರುವ ಹುಚ್ಚುತನ ಮತ್ತು ಉನ್ಮಾದವನ್ನು ನಾನು ಯಾವುದೇ ನಿರ್ದೇಶಕರಲ್ಲಿಯೂ ನೋಡಿಲ್ಲ. ಓಂ, ಎ, ಮತ್ತು ಉಪೇಂದ್ರ ಸಿನಿಮಾ ನನ್ನನ್ನು ಬೆರಗುಗೊಳಿಸಿದವು. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾನು ಅವುಗಳನ್ನು ನಿರ್ದೇಶಿಸಿದ್ದರೆ ನಾನು ಸಂತೋಷದಿಂದ ನಿವೃತ್ತಿ ಹೊಂದುತ್ತಿದ್ದೆ. ಅವು ಅಷ್ಟೊಂದು ಅದ್ಭುತವಾಗಿ ಮೂಡಿ ಬಂದಿದ್ದವು’ ಎಂದಿದ್ದಾರೆ ಸುಕುಮಾರ್. ಅಂದರೆ ಈ ಮೂರು ಚಿತ್ರಗಳಿಂದ ಅವರಿಗೆ ತೃಪ್ತಿಯುತ ಭಾವನೆ ಕಾಡುತ್ತಿತ್ತು ಎಂಬುದು ಅವರ ಮಾತಿನ ಅರ್ಥ.

‘ಎಲ್ಲಾ ನಿರ್ದೇಶಕರು ಅವರಿಂದ ಸ್ಫೂರ್ತಿ ಪಡೆಯುತ್ತಾರೆ. ನನ್ನ ಸಿನಿಮಾಗಳಲ್ಲಿ ಸ್ಕ್ರೀನ್​ಪ್ಲೇ ಅಷ್ಟು ಉತ್ತಮವಾಗಿ ಮೂಡಿ ಬರುತ್ತಿದೆ ಎಂದರೆ ಅದಕ್ಕೆ ಈ ಮೂರು ಚಿತ್ರಗಳು (ಎ,ಉಪೇಂದ್ರ ಹಾಗೂ ಓಂ) ಕಾರಣ. ನಾನು ಯಾವುದೇ ನಾಚಿಕೆ ಇಲ್ಲದೆ ಅವರಿಂದ ಸ್ಫೂರ್ತಿ ಪಡೆದು ಅಳವಡಿಸಿಕೊಂಡಿದ್ದೇನೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪುಷ್ಪ ರಾಜ್ ಪಾತ್ರಕ್ಕೆ ನಿಜವಾದ ಸ್ಮಗ್ಲರ್ ಸ್ಫೂರ್ತಿ; ಇಂಟರೆಸ್ಟಿಂಗ್ ವಿಷಯ ಹೇಳಿದ ಸುಕುಮಾರ್

ಸುಕುಮಾರ್ ಹಾಗೂ ರಾಮ್ ಚರಣ್ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳಲ್ಲಿ ಸುಕುಮಾರ್ ಬ್ಯುಸಿ ಇದ್ದಾರೆ. ರಾಮ್ ಚರಣ್ ಅವರು ಸದ್ಯ ‘ಪೆದ್ದಿ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇದಾದ ಬಳಿಕ ಅವರು ಈ ಚಿತ್ರವನ್ನು ಕೈಗೆತ್ತಿಕೊಳ್ಳಲಿದ್ದಾರೆ. ಉಪೇಂದ್ರ ಅವರು ‘ಎ’ ಚಿತ್ರದ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:27 am, Thu, 29 May 25

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ