AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರಕ್ಕಾಗಿ ಇನ್ನೂ ಆರು ತಿಂಗಳು ಶೂಟ್ ಮಾಡೋಕೆ ರೆಡಿ ಇದ್ದಾರೆ ಅಲ್ಲು ಅರ್ಜುನ್

ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ್ದ ಬನ್ನಿ ವಾಸು ಅವರು, ‘ನಾವು ಈ ರೀತಿಯ ವದಂತಿಗಳನ್ನು ಕೇಳಿ ನಕ್ಕಿದ್ದೇವೆ. ಎಲ್ಲರೂ ತಮಗೆ ಬೇಕಾದ ರೀತಿಯಲ್ಲಿ ಬರೆದುಕೊಳ್ಳುತ್ತಿದ್ದಾರೆ. ನಡೆದ ಘಟನೆಯನ್ನು ಸಂಪೂರ್ಣವಾಗಿ ನೆಗೆಟಿವ್ ರೀತಿಯಲ್ಲಿ ಬಿಂಬಿಸಲಾಗಿದೆ’ ಎಂದು ಬನ್ನಿ ವಾಸು ಹೇಳಿದ್ದಾರೆ. ಈ ಮೂಲಕ ವಿವಾದಗಳಿಗೆ ತೆರೆ ಎಳೆದಿದ್ದಾರೆ.

‘ಪುಷ್ಪ 2’ ಚಿತ್ರಕ್ಕಾಗಿ ಇನ್ನೂ ಆರು ತಿಂಗಳು ಶೂಟ್ ಮಾಡೋಕೆ ರೆಡಿ ಇದ್ದಾರೆ ಅಲ್ಲು ಅರ್ಜುನ್
ಅಲ್ಲು ಅರ್ಜುನ್-ಸುಕುಮಾರ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jul 20, 2024 | 8:46 AM

Share

ಅಲ್ಲು ಅರ್ಜುನ್ ಹಾಗೂ ನಿರ್ದೇಶಕ ಸುಕುಮಾರ್ ಮಧ್ಯೆ ಕಿರಿಕ್ ಆಗಿದೆ ಎನ್ನುವ ಮಾತು ಎಲ್ಲ ಕಡೆಗಳಲ್ಲಿ ಹರಿದಾಡಿದೆ. ಈ ಕಾರಣಕ್ಕೆ ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರದ ಲುಕ್​ಗೆ ಬ್ರೇಕ್ ಹಾಕಿ ವಿದೇಶಕ್ಕೆ ಹಾರಿದ್ದಾರೆ ಎಂದು ವರದಿ ಆಗಿತ್ತು. ಆದರೆ, ಇದರಲ್ಲಿ ನಿಜವಿಲ್ಲ ಎಂದು ತಂಡದ ಮೂಲಗಳು ಹೇಳಿದ್ದವು. ಈಗ ಅಲ್ಲು ಅರ್ಜುನ್ ಅವರ ಆಪ್ತ ಗೆಳೆಯ ಹಾಗೂ ಗೀತಾ ಆರ್ಟ್ಸ್​ನ ನಿರ್ಮಾಪಕರಲ್ಲಿ ಒಬ್ಬರಾದ ಬನ್ನಿ ವಾಸು ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ಪುಷ್ಪ 2’ ಸಿನಿಮಾದ ಕೆಲಸಗಳು ವಿಳಂಬ ಆಗುತ್ತಿರುವುದಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

‘ಪುಷ್ಪ 2’ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಗಬೇಕಿತ್ತು. ಆದರೆ, ತಂಡದವರು ಸಿನಿಮಾದ ಬಿಡುಗಡೆ ದಿನಾಂಕವನ್ನು ಡಿಸೆಂಬರ್​ಗೆ ಮುಂದೂಡಿದರು. ಹೀಗೆಕೆ ಎನ್ನುವ ಪ್ರಶ್ನೆ ಮೂಡಿತ್ತು. ಈ ಮಧ್ಯೆ ಅಲ್ಲು ಅರ್ಜುನ್ ಅವರು ಯುರೋಪ್ ಪ್ರವಾಸ ತೆರಳಿದರೆ, ಸುಕುಮಾರ್ ಅಮೆರಿಕಕ್ಕೆ ಹಾರಿದರು. ಈ ಎಲ್ಲಾ ಕಾರಣದಿಂದ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಆದರೆ, ಇದರಲ್ಲಿ ಸತ್ಯ ಇಲ್ಲ ಎನ್ನುವ ಸ್ಪಷ್ಟನೆ ಸಿಕ್ಕಿದೆ.

ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ್ದ ಬನ್ನಿ ವಾಸು ಅವರು, ‘ನಾವು ಈ ರೀತಿಯ ವದಂತಿಗಳನ್ನು ಕೇಳಿ ನಕ್ಕಿದ್ದೇವೆ. ಎಲ್ಲರೂ ತಮಗೆ ಬೇಕಾದ ರೀತಿಯಲ್ಲಿ ಬರೆದುಕೊಳ್ಳುತ್ತಿದ್ದಾರೆ. ನಡೆದ ಘಟನೆಯನ್ನು ಸಂಪೂರ್ಣವಾಗಿ ನೆಗೆಟಿವ್ ರೀತಿಯಲ್ಲಿ ಬಿಂಬಿಸಲಾಗಿದೆ’ ಎಂದು ಬನ್ನಿ ವಾಸು ಹೇಳಿದ್ದಾರೆ. ಈ ಮೂಲಕ ವಿವಾದಗಳಿಗೆ ತೆರೆ ಎಳೆದಿದ್ದಾರೆ.

‘ಪುಷ್ಪ 2 ಸಿನಿಮಾದ 15 ದಿನಗಳ ಕೆಲಸ ಮಾತ್ರ ಬಾಕಿ ಇದೆ. ಅದರಲ್ಲಿ ಕ್ಲೈಮ್ಯಾಕ್ಸ್ ಹಾಗೂ ಸಾಂಗ್ ಇದೆ. ಸಿನಿಮಾ ಶೂಟಿಂಗ್ ಪೂರ್ಣಗೊಳಿಸಲು ಫಹಾದ್ ಫಾಸಿಲ್ ಡೇಟ್ಸ್​ನ ಅಗತ್ಯ ಇದೆ’ ಎಂದು ಅವರು ಹೇಳಿದ್ದಾರೆ. ಈ ಮೂಲಕ ಸಿನಿಮಾ ವಿಳಂಬಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಬಿಡುಗಡೆ ಸಂದರ್ಭದಲ್ಲೇ ಬರಲಿದೆ ‘ಗೇಮ್ ಚೇಂಜರ್’; ರಾಮ್​-ಅಲ್ಲು ಮುಖಾಮುಖಿ?

‘ಸುಕುಮಾರ್ ಅವರು ಈ ಚಿತ್ರದ ಶೂಟಿಂಗ್ ಇನ್ನೂ ಆರು ತಿಂಗಳು ಶೂಟ್ ಮಾಡಬೇಕು ಎಂದರೆ ಅಲ್ಲು ಅರ್ಜುನ್ ಇದಕ್ಕೆ ಒಪ್ಪಿಕೊಳ್ಳುತ್ತಾರೆ. ಇಬ್ಬರ ಮಧ್ಯೆ ಅಷ್ಟು ಒಳ್ಳೆಯ ಬಾಂಡಿಗೆ ಇದೆ. ಅದನ್ನು ಈಗ ಪ್ರಶ್ನೆ ಮಾಡಬೇಡಿ’ ಎಂದಿದ್ದಾರೆ ವಾಸು. ಈ ಮೂಲಕ ಎಲ್ಲಾ ವಿವಾದಗಳಿಗೆ ತೆರೆ ಎಳೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:46 am, Sat, 20 July 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ