AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರಕ್ಕಾಗಿ ಇನ್ನೂ ಆರು ತಿಂಗಳು ಶೂಟ್ ಮಾಡೋಕೆ ರೆಡಿ ಇದ್ದಾರೆ ಅಲ್ಲು ಅರ್ಜುನ್

ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ್ದ ಬನ್ನಿ ವಾಸು ಅವರು, ‘ನಾವು ಈ ರೀತಿಯ ವದಂತಿಗಳನ್ನು ಕೇಳಿ ನಕ್ಕಿದ್ದೇವೆ. ಎಲ್ಲರೂ ತಮಗೆ ಬೇಕಾದ ರೀತಿಯಲ್ಲಿ ಬರೆದುಕೊಳ್ಳುತ್ತಿದ್ದಾರೆ. ನಡೆದ ಘಟನೆಯನ್ನು ಸಂಪೂರ್ಣವಾಗಿ ನೆಗೆಟಿವ್ ರೀತಿಯಲ್ಲಿ ಬಿಂಬಿಸಲಾಗಿದೆ’ ಎಂದು ಬನ್ನಿ ವಾಸು ಹೇಳಿದ್ದಾರೆ. ಈ ಮೂಲಕ ವಿವಾದಗಳಿಗೆ ತೆರೆ ಎಳೆದಿದ್ದಾರೆ.

‘ಪುಷ್ಪ 2’ ಚಿತ್ರಕ್ಕಾಗಿ ಇನ್ನೂ ಆರು ತಿಂಗಳು ಶೂಟ್ ಮಾಡೋಕೆ ರೆಡಿ ಇದ್ದಾರೆ ಅಲ್ಲು ಅರ್ಜುನ್
ಅಲ್ಲು ಅರ್ಜುನ್-ಸುಕುಮಾರ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jul 20, 2024 | 8:46 AM

Share

ಅಲ್ಲು ಅರ್ಜುನ್ ಹಾಗೂ ನಿರ್ದೇಶಕ ಸುಕುಮಾರ್ ಮಧ್ಯೆ ಕಿರಿಕ್ ಆಗಿದೆ ಎನ್ನುವ ಮಾತು ಎಲ್ಲ ಕಡೆಗಳಲ್ಲಿ ಹರಿದಾಡಿದೆ. ಈ ಕಾರಣಕ್ಕೆ ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರದ ಲುಕ್​ಗೆ ಬ್ರೇಕ್ ಹಾಕಿ ವಿದೇಶಕ್ಕೆ ಹಾರಿದ್ದಾರೆ ಎಂದು ವರದಿ ಆಗಿತ್ತು. ಆದರೆ, ಇದರಲ್ಲಿ ನಿಜವಿಲ್ಲ ಎಂದು ತಂಡದ ಮೂಲಗಳು ಹೇಳಿದ್ದವು. ಈಗ ಅಲ್ಲು ಅರ್ಜುನ್ ಅವರ ಆಪ್ತ ಗೆಳೆಯ ಹಾಗೂ ಗೀತಾ ಆರ್ಟ್ಸ್​ನ ನಿರ್ಮಾಪಕರಲ್ಲಿ ಒಬ್ಬರಾದ ಬನ್ನಿ ವಾಸು ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ಪುಷ್ಪ 2’ ಸಿನಿಮಾದ ಕೆಲಸಗಳು ವಿಳಂಬ ಆಗುತ್ತಿರುವುದಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

‘ಪುಷ್ಪ 2’ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಗಬೇಕಿತ್ತು. ಆದರೆ, ತಂಡದವರು ಸಿನಿಮಾದ ಬಿಡುಗಡೆ ದಿನಾಂಕವನ್ನು ಡಿಸೆಂಬರ್​ಗೆ ಮುಂದೂಡಿದರು. ಹೀಗೆಕೆ ಎನ್ನುವ ಪ್ರಶ್ನೆ ಮೂಡಿತ್ತು. ಈ ಮಧ್ಯೆ ಅಲ್ಲು ಅರ್ಜುನ್ ಅವರು ಯುರೋಪ್ ಪ್ರವಾಸ ತೆರಳಿದರೆ, ಸುಕುಮಾರ್ ಅಮೆರಿಕಕ್ಕೆ ಹಾರಿದರು. ಈ ಎಲ್ಲಾ ಕಾರಣದಿಂದ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಆದರೆ, ಇದರಲ್ಲಿ ಸತ್ಯ ಇಲ್ಲ ಎನ್ನುವ ಸ್ಪಷ್ಟನೆ ಸಿಕ್ಕಿದೆ.

ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ್ದ ಬನ್ನಿ ವಾಸು ಅವರು, ‘ನಾವು ಈ ರೀತಿಯ ವದಂತಿಗಳನ್ನು ಕೇಳಿ ನಕ್ಕಿದ್ದೇವೆ. ಎಲ್ಲರೂ ತಮಗೆ ಬೇಕಾದ ರೀತಿಯಲ್ಲಿ ಬರೆದುಕೊಳ್ಳುತ್ತಿದ್ದಾರೆ. ನಡೆದ ಘಟನೆಯನ್ನು ಸಂಪೂರ್ಣವಾಗಿ ನೆಗೆಟಿವ್ ರೀತಿಯಲ್ಲಿ ಬಿಂಬಿಸಲಾಗಿದೆ’ ಎಂದು ಬನ್ನಿ ವಾಸು ಹೇಳಿದ್ದಾರೆ. ಈ ಮೂಲಕ ವಿವಾದಗಳಿಗೆ ತೆರೆ ಎಳೆದಿದ್ದಾರೆ.

‘ಪುಷ್ಪ 2 ಸಿನಿಮಾದ 15 ದಿನಗಳ ಕೆಲಸ ಮಾತ್ರ ಬಾಕಿ ಇದೆ. ಅದರಲ್ಲಿ ಕ್ಲೈಮ್ಯಾಕ್ಸ್ ಹಾಗೂ ಸಾಂಗ್ ಇದೆ. ಸಿನಿಮಾ ಶೂಟಿಂಗ್ ಪೂರ್ಣಗೊಳಿಸಲು ಫಹಾದ್ ಫಾಸಿಲ್ ಡೇಟ್ಸ್​ನ ಅಗತ್ಯ ಇದೆ’ ಎಂದು ಅವರು ಹೇಳಿದ್ದಾರೆ. ಈ ಮೂಲಕ ಸಿನಿಮಾ ವಿಳಂಬಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಬಿಡುಗಡೆ ಸಂದರ್ಭದಲ್ಲೇ ಬರಲಿದೆ ‘ಗೇಮ್ ಚೇಂಜರ್’; ರಾಮ್​-ಅಲ್ಲು ಮುಖಾಮುಖಿ?

‘ಸುಕುಮಾರ್ ಅವರು ಈ ಚಿತ್ರದ ಶೂಟಿಂಗ್ ಇನ್ನೂ ಆರು ತಿಂಗಳು ಶೂಟ್ ಮಾಡಬೇಕು ಎಂದರೆ ಅಲ್ಲು ಅರ್ಜುನ್ ಇದಕ್ಕೆ ಒಪ್ಪಿಕೊಳ್ಳುತ್ತಾರೆ. ಇಬ್ಬರ ಮಧ್ಯೆ ಅಷ್ಟು ಒಳ್ಳೆಯ ಬಾಂಡಿಗೆ ಇದೆ. ಅದನ್ನು ಈಗ ಪ್ರಶ್ನೆ ಮಾಡಬೇಡಿ’ ಎಂದಿದ್ದಾರೆ ವಾಸು. ಈ ಮೂಲಕ ಎಲ್ಲಾ ವಿವಾದಗಳಿಗೆ ತೆರೆ ಎಳೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:46 am, Sat, 20 July 24

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ