‘ಪುಷ್ಪ 2’ ಚಿತ್ರಕ್ಕಾಗಿ ಇನ್ನೂ ಆರು ತಿಂಗಳು ಶೂಟ್ ಮಾಡೋಕೆ ರೆಡಿ ಇದ್ದಾರೆ ಅಲ್ಲು ಅರ್ಜುನ್

| Updated By: ರಾಜೇಶ್ ದುಗ್ಗುಮನೆ

Updated on: Jul 20, 2024 | 8:46 AM

ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ್ದ ಬನ್ನಿ ವಾಸು ಅವರು, ‘ನಾವು ಈ ರೀತಿಯ ವದಂತಿಗಳನ್ನು ಕೇಳಿ ನಕ್ಕಿದ್ದೇವೆ. ಎಲ್ಲರೂ ತಮಗೆ ಬೇಕಾದ ರೀತಿಯಲ್ಲಿ ಬರೆದುಕೊಳ್ಳುತ್ತಿದ್ದಾರೆ. ನಡೆದ ಘಟನೆಯನ್ನು ಸಂಪೂರ್ಣವಾಗಿ ನೆಗೆಟಿವ್ ರೀತಿಯಲ್ಲಿ ಬಿಂಬಿಸಲಾಗಿದೆ’ ಎಂದು ಬನ್ನಿ ವಾಸು ಹೇಳಿದ್ದಾರೆ. ಈ ಮೂಲಕ ವಿವಾದಗಳಿಗೆ ತೆರೆ ಎಳೆದಿದ್ದಾರೆ.

‘ಪುಷ್ಪ 2’ ಚಿತ್ರಕ್ಕಾಗಿ ಇನ್ನೂ ಆರು ತಿಂಗಳು ಶೂಟ್ ಮಾಡೋಕೆ ರೆಡಿ ಇದ್ದಾರೆ ಅಲ್ಲು ಅರ್ಜುನ್
ಅಲ್ಲು ಅರ್ಜುನ್-ಸುಕುಮಾರ್
Follow us on

ಅಲ್ಲು ಅರ್ಜುನ್ ಹಾಗೂ ನಿರ್ದೇಶಕ ಸುಕುಮಾರ್ ಮಧ್ಯೆ ಕಿರಿಕ್ ಆಗಿದೆ ಎನ್ನುವ ಮಾತು ಎಲ್ಲ ಕಡೆಗಳಲ್ಲಿ ಹರಿದಾಡಿದೆ. ಈ ಕಾರಣಕ್ಕೆ ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರದ ಲುಕ್​ಗೆ ಬ್ರೇಕ್ ಹಾಕಿ ವಿದೇಶಕ್ಕೆ ಹಾರಿದ್ದಾರೆ ಎಂದು ವರದಿ ಆಗಿತ್ತು. ಆದರೆ, ಇದರಲ್ಲಿ ನಿಜವಿಲ್ಲ ಎಂದು ತಂಡದ ಮೂಲಗಳು ಹೇಳಿದ್ದವು. ಈಗ ಅಲ್ಲು ಅರ್ಜುನ್ ಅವರ ಆಪ್ತ ಗೆಳೆಯ ಹಾಗೂ ಗೀತಾ ಆರ್ಟ್ಸ್​ನ ನಿರ್ಮಾಪಕರಲ್ಲಿ ಒಬ್ಬರಾದ ಬನ್ನಿ ವಾಸು ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ಪುಷ್ಪ 2’ ಸಿನಿಮಾದ ಕೆಲಸಗಳು ವಿಳಂಬ ಆಗುತ್ತಿರುವುದಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

‘ಪುಷ್ಪ 2’ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಗಬೇಕಿತ್ತು. ಆದರೆ, ತಂಡದವರು ಸಿನಿಮಾದ ಬಿಡುಗಡೆ ದಿನಾಂಕವನ್ನು ಡಿಸೆಂಬರ್​ಗೆ ಮುಂದೂಡಿದರು. ಹೀಗೆಕೆ ಎನ್ನುವ ಪ್ರಶ್ನೆ ಮೂಡಿತ್ತು. ಈ ಮಧ್ಯೆ ಅಲ್ಲು ಅರ್ಜುನ್ ಅವರು ಯುರೋಪ್ ಪ್ರವಾಸ ತೆರಳಿದರೆ, ಸುಕುಮಾರ್ ಅಮೆರಿಕಕ್ಕೆ ಹಾರಿದರು. ಈ ಎಲ್ಲಾ ಕಾರಣದಿಂದ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಆದರೆ, ಇದರಲ್ಲಿ ಸತ್ಯ ಇಲ್ಲ ಎನ್ನುವ ಸ್ಪಷ್ಟನೆ ಸಿಕ್ಕಿದೆ.

ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ್ದ ಬನ್ನಿ ವಾಸು ಅವರು, ‘ನಾವು ಈ ರೀತಿಯ ವದಂತಿಗಳನ್ನು ಕೇಳಿ ನಕ್ಕಿದ್ದೇವೆ. ಎಲ್ಲರೂ ತಮಗೆ ಬೇಕಾದ ರೀತಿಯಲ್ಲಿ ಬರೆದುಕೊಳ್ಳುತ್ತಿದ್ದಾರೆ. ನಡೆದ ಘಟನೆಯನ್ನು ಸಂಪೂರ್ಣವಾಗಿ ನೆಗೆಟಿವ್ ರೀತಿಯಲ್ಲಿ ಬಿಂಬಿಸಲಾಗಿದೆ’ ಎಂದು ಬನ್ನಿ ವಾಸು ಹೇಳಿದ್ದಾರೆ. ಈ ಮೂಲಕ ವಿವಾದಗಳಿಗೆ ತೆರೆ ಎಳೆದಿದ್ದಾರೆ.

‘ಪುಷ್ಪ 2 ಸಿನಿಮಾದ 15 ದಿನಗಳ ಕೆಲಸ ಮಾತ್ರ ಬಾಕಿ ಇದೆ. ಅದರಲ್ಲಿ ಕ್ಲೈಮ್ಯಾಕ್ಸ್ ಹಾಗೂ ಸಾಂಗ್ ಇದೆ. ಸಿನಿಮಾ ಶೂಟಿಂಗ್ ಪೂರ್ಣಗೊಳಿಸಲು ಫಹಾದ್ ಫಾಸಿಲ್ ಡೇಟ್ಸ್​ನ ಅಗತ್ಯ ಇದೆ’ ಎಂದು ಅವರು ಹೇಳಿದ್ದಾರೆ. ಈ ಮೂಲಕ ಸಿನಿಮಾ ವಿಳಂಬಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಬಿಡುಗಡೆ ಸಂದರ್ಭದಲ್ಲೇ ಬರಲಿದೆ ‘ಗೇಮ್ ಚೇಂಜರ್’; ರಾಮ್​-ಅಲ್ಲು ಮುಖಾಮುಖಿ?

‘ಸುಕುಮಾರ್ ಅವರು ಈ ಚಿತ್ರದ ಶೂಟಿಂಗ್ ಇನ್ನೂ ಆರು ತಿಂಗಳು ಶೂಟ್ ಮಾಡಬೇಕು ಎಂದರೆ ಅಲ್ಲು ಅರ್ಜುನ್ ಇದಕ್ಕೆ ಒಪ್ಪಿಕೊಳ್ಳುತ್ತಾರೆ. ಇಬ್ಬರ ಮಧ್ಯೆ ಅಷ್ಟು ಒಳ್ಳೆಯ ಬಾಂಡಿಗೆ ಇದೆ. ಅದನ್ನು ಈಗ ಪ್ರಶ್ನೆ ಮಾಡಬೇಡಿ’ ಎಂದಿದ್ದಾರೆ ವಾಸು. ಈ ಮೂಲಕ ಎಲ್ಲಾ ವಿವಾದಗಳಿಗೆ ತೆರೆ ಎಳೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:46 am, Sat, 20 July 24