AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಪ್ರಶ್ನೆ ಪದೇಪದೇ ಕೇಳಿದ್ರೆ ಸಿನಿಮಾ ಮಾಡೋದನ್ನೇ ನಿಲ್ಲಿಸ್ತೀನಿ’; ಫ್ಯಾನ್ಸ್​ಗೆ ಜೂನಿಯರ್ ಎನ್​ಟಿಆರ್ ಎಚ್ಚರಿಕೆ

ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರಶ್ನೆ ಎದುರಾಗುತ್ತಿದೆ. ಕೆಲ ಮಾಧ್ಯಮದವರು ಕೂಡ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕೆ ಜೂನಿಯರ್ ಎನ್​ಟಿಆರ್​ ಸಿಟ್ಟಾಗಿದ್ದಾರೆ.

‘ಆ ಪ್ರಶ್ನೆ ಪದೇಪದೇ ಕೇಳಿದ್ರೆ ಸಿನಿಮಾ ಮಾಡೋದನ್ನೇ ನಿಲ್ಲಿಸ್ತೀನಿ’; ಫ್ಯಾನ್ಸ್​ಗೆ ಜೂನಿಯರ್ ಎನ್​ಟಿಆರ್ ಎಚ್ಚರಿಕೆ
ಜೂನಿಯರ್ ಎನ್​ಟಿಆರ್​
ರಾಜೇಶ್ ದುಗ್ಗುಮನೆ
|

Updated on:Mar 18, 2023 | 10:01 AM

Share

ಜೂನಿಯರ್ ಎನ್​ಟಿಆರ್ (JR NTR) ಅವರು ಸದ್ಯ ಸಖತ್ ಖುಷಿಯಲ್ಲಿದ್ದಾರೆ. ಇದಕ್ಕೆ ಕಾರಣ ಆಗಿದ್ದು ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದ್ದು. ಈ ಚಿತ್ರದಿಂದ ನಟರಾದ ರಾಮ್ ಚರಣ್, ಜೂನಿಯರ್ ಎನ್​ಟಿಆರ್, ನಿರ್ದೇಶಕ ರಾಜಮೌಳಿ, ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ (MM Kiravani) ಹಾಗೂ ಮೊದಲಾದವರ ಜನಪ್ರಿಯತೆ ಹೆಚ್ಚಿದೆ. ಈ ಮಧ್ಯೆ ಜೂನಿಯರ್ ಎನ್​ಟಿಆರ್​ ಮುಂದಿನ ಚಿತ್ರ ಯಾವುದು ಎನ್ನುವ ಪ್ರಶ್ನೆ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಇದಕ್ಕೆ ಅವರು​ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ ಫ್ಯಾನ್ಸ್​ಗೆ ಈ ವಿಚಾರದಲ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮರಳಿ ಈ ಬಗ್ಗೆ ಪ್ರಶ್ನೆ ಮಾಡದಂತೆ ಅವರು ಖಡಕ್ ಸೂಚನೆ ನೀಡಿದ್ದಾರೆ.

ಜೂನಿಯರ್ ಎನ್​ಟಿಆರ್ ಸಿಟ್ಟಾಗಿದ್ದೇಕೆ?

ಜೂನಿಯರ್ ಎನ್​ಟಿಆರ್ ಅವರು ‘ಆರ್​ಆರ್​ಆರ್​’ ಚಿತ್ರದ ಬಳಿಕ ತಮ್ಮ 30ನೇ ಸಿನಿಮಾ ಘೋಷಿಸಿದರು. ಖ್ಯಾತ ನಿರ್ದೇಶಕ ಕೊರಟಾಲ ಶಿವ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರ ಘೋಷಣೆ ಆಗಿದ್ದಷ್ಟೇ, ಈವರೆಗೆ ಚಿತ್ರದ ಶೂಟಿಂಗ್ ಆರಂಭ ಆಗಿಲ್ಲ ಎನ್ನಲಾಗಿದೆ. ಒಂದು ವರ್ಷ ಕಾದರೂ ಸಿನಿಮಾ ಚಿತ್ರೀಕರಣದ ಬಗ್ಗೆ ಯಾವುದೇ ಅಪ್​ಡೇಟ್ ಸಿಗದಿದ್ದಕ್ಕೆ ಸಹಜವಾಗಿಯೇ ಅವರ ಫ್ಯಾನ್ಸ್ ಚಿಂತೆಗೆ ಒಳಗಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರಶ್ನೆ ಎದುರಾಗುತ್ತಿದೆ. ಕೆಲ ಮಾಧ್ಯಮದವರು ಕೂಡ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕೆ ಜೂನಿಯರ್ ಎನ್​ಟಿಆರ್​ ಸಿಟ್ಟಾಗಿದ್ದಾರೆ.

ಇದನ್ನೂ ಓದಿ: NTR 30: ಜೂನಿಯರ್​ ಎನ್​ಟಿಆರ್​ 30ನೇ ಚಿತ್ರಕ್ಕೆ ಜಾನ್ವಿ ಕಪೂರ್​ ನಾಯಕಿ; ಇಲ್ಲಿದೆ ಫಸ್ಟ್​ ಲುಕ್​

ವೇದಿಕೆಯಿಂದಲೇ ಎಚ್ಚರಿಕೆ ನೀಡಿದ ನಟ

ವಿಶ್ವಕ್ ಸೇನ್ ಅವರ ನಟನೆಯ ‘ಧಮ್ಕಿ’ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಡೆದಿದೆ. ಇದರಲ್ಲಿ ಜೂ.ಎನ್​ಟಿಆರ್​ ಭಾಗಿ ಆಗಿದ್ದರು. ಈ ವೇಳೆ ಅವರಿಗೆ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ನೀಡುವಂತೆ ಫ್ಯಾನ್ಸ್ ಕಡೆಯಿಂದ ಒತ್ತಾಯ ಬಂದಿದೆ. ಇದು ಅವರಿಗೆ ಸಿಟ್ಟು ತರಿಸಿದೆ. ‘ನೀವು ನನ್ನನ್ನು ಮತ್ತೊಮ್ಮೆ ಅಪ್‌ಡೇಟ್‌ಗಾಗಿ ಕೇಳಿದರೆ ನಾನು ಆ ಸಿನಿಮಾನ ಮಾಡುತ್ತಿಲ್ಲ ಎಂದು ಹೇಳುತ್ತೇನೆ. ನೀವು ಮತ್ತೆ ಮತ್ತೆ ಅದನ್ನೇ ಪ್ರಶ್ನಿಸಿದರೆ ನಾನು ಸಿನಿಮಾ ಮಾಡುವುದನ್ನೇ ನಿಲ್ಲಿಸುತ್ತೇನೆ’ ಎಂದು ಏರು ಧ್ವನಿಯಲ್ಲೇ ಹೇಳಿದ್ದಾರೆ.

ಇದನ್ನೂ ಓದಿ: ಜೂನಿಯರ್ ಎನ್​ಟಿಆರ್ ಧರಿಸಿದ ಈ ವಾಚ್​ನ ಬೆಲೆ ಎಷ್ಟು ಕೋಟಿ ರೂಪಾಯಿ?

‘ನಾನು ಸಿನಿಮಾ ಮಾಡುವುದನ್ನು ನಿಲ್ಲಿಸುವುದಿಲ್ಲ ಅನ್ನೋದು ನನಗೂ ಗೊತ್ತು. ಹಾಗೆ ಆಗುವುದಕ್ಕೆ ನೀವು ಬಿಡುವುದೂ ಇಲ್ಲ. ಪದೇಪದೇ ಅಪ್​ಡೇಟ್ ಕೇಳಬೇಡಿ. ಶೀಘ್ರದಲ್ಲೇ ಶೂಟಿಂಗ್ ಶುರುವಾಗುತ್ತದೆ’ ಎಂದು ಅವರು ಹೇಳಿದ್ದಾರೆ.  ಜೂನಿಯರ್ ಎನ್​ಟಿಆರ್ ಅವರು ಕಳೆದ ಒಂದು ವರ್ಷದಿಂದ ‘ಆರ್​ಆರ್​ಆರ್​’ ಯಶಸ್ಸನ್ನು ಎಂಜಾಯ್ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಆಸ್ಕರ್ ಅವಾರ್ಡ್ ಸೇರಿ ಅನೇಕ ಪ್ರತಿಷ್ಠಿತ ಅವಾರ್ಡ್ ಫಂಕ್ಷನ್​ನಲ್ಲಿ ಅವರು ಭಾಗಿ ಆಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:57 am, Sat, 18 March 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ