AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಪ್ರಶ್ನೆ ಪದೇಪದೇ ಕೇಳಿದ್ರೆ ಸಿನಿಮಾ ಮಾಡೋದನ್ನೇ ನಿಲ್ಲಿಸ್ತೀನಿ’; ಫ್ಯಾನ್ಸ್​ಗೆ ಜೂನಿಯರ್ ಎನ್​ಟಿಆರ್ ಎಚ್ಚರಿಕೆ

ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರಶ್ನೆ ಎದುರಾಗುತ್ತಿದೆ. ಕೆಲ ಮಾಧ್ಯಮದವರು ಕೂಡ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕೆ ಜೂನಿಯರ್ ಎನ್​ಟಿಆರ್​ ಸಿಟ್ಟಾಗಿದ್ದಾರೆ.

‘ಆ ಪ್ರಶ್ನೆ ಪದೇಪದೇ ಕೇಳಿದ್ರೆ ಸಿನಿಮಾ ಮಾಡೋದನ್ನೇ ನಿಲ್ಲಿಸ್ತೀನಿ’; ಫ್ಯಾನ್ಸ್​ಗೆ ಜೂನಿಯರ್ ಎನ್​ಟಿಆರ್ ಎಚ್ಚರಿಕೆ
ಜೂನಿಯರ್ ಎನ್​ಟಿಆರ್​
ರಾಜೇಶ್ ದುಗ್ಗುಮನೆ
|

Updated on:Mar 18, 2023 | 10:01 AM

Share

ಜೂನಿಯರ್ ಎನ್​ಟಿಆರ್ (JR NTR) ಅವರು ಸದ್ಯ ಸಖತ್ ಖುಷಿಯಲ್ಲಿದ್ದಾರೆ. ಇದಕ್ಕೆ ಕಾರಣ ಆಗಿದ್ದು ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದ್ದು. ಈ ಚಿತ್ರದಿಂದ ನಟರಾದ ರಾಮ್ ಚರಣ್, ಜೂನಿಯರ್ ಎನ್​ಟಿಆರ್, ನಿರ್ದೇಶಕ ರಾಜಮೌಳಿ, ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ (MM Kiravani) ಹಾಗೂ ಮೊದಲಾದವರ ಜನಪ್ರಿಯತೆ ಹೆಚ್ಚಿದೆ. ಈ ಮಧ್ಯೆ ಜೂನಿಯರ್ ಎನ್​ಟಿಆರ್​ ಮುಂದಿನ ಚಿತ್ರ ಯಾವುದು ಎನ್ನುವ ಪ್ರಶ್ನೆ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಇದಕ್ಕೆ ಅವರು​ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ ಫ್ಯಾನ್ಸ್​ಗೆ ಈ ವಿಚಾರದಲ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮರಳಿ ಈ ಬಗ್ಗೆ ಪ್ರಶ್ನೆ ಮಾಡದಂತೆ ಅವರು ಖಡಕ್ ಸೂಚನೆ ನೀಡಿದ್ದಾರೆ.

ಜೂನಿಯರ್ ಎನ್​ಟಿಆರ್ ಸಿಟ್ಟಾಗಿದ್ದೇಕೆ?

ಜೂನಿಯರ್ ಎನ್​ಟಿಆರ್ ಅವರು ‘ಆರ್​ಆರ್​ಆರ್​’ ಚಿತ್ರದ ಬಳಿಕ ತಮ್ಮ 30ನೇ ಸಿನಿಮಾ ಘೋಷಿಸಿದರು. ಖ್ಯಾತ ನಿರ್ದೇಶಕ ಕೊರಟಾಲ ಶಿವ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರ ಘೋಷಣೆ ಆಗಿದ್ದಷ್ಟೇ, ಈವರೆಗೆ ಚಿತ್ರದ ಶೂಟಿಂಗ್ ಆರಂಭ ಆಗಿಲ್ಲ ಎನ್ನಲಾಗಿದೆ. ಒಂದು ವರ್ಷ ಕಾದರೂ ಸಿನಿಮಾ ಚಿತ್ರೀಕರಣದ ಬಗ್ಗೆ ಯಾವುದೇ ಅಪ್​ಡೇಟ್ ಸಿಗದಿದ್ದಕ್ಕೆ ಸಹಜವಾಗಿಯೇ ಅವರ ಫ್ಯಾನ್ಸ್ ಚಿಂತೆಗೆ ಒಳಗಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರಶ್ನೆ ಎದುರಾಗುತ್ತಿದೆ. ಕೆಲ ಮಾಧ್ಯಮದವರು ಕೂಡ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕೆ ಜೂನಿಯರ್ ಎನ್​ಟಿಆರ್​ ಸಿಟ್ಟಾಗಿದ್ದಾರೆ.

ಇದನ್ನೂ ಓದಿ: NTR 30: ಜೂನಿಯರ್​ ಎನ್​ಟಿಆರ್​ 30ನೇ ಚಿತ್ರಕ್ಕೆ ಜಾನ್ವಿ ಕಪೂರ್​ ನಾಯಕಿ; ಇಲ್ಲಿದೆ ಫಸ್ಟ್​ ಲುಕ್​

ವೇದಿಕೆಯಿಂದಲೇ ಎಚ್ಚರಿಕೆ ನೀಡಿದ ನಟ

ವಿಶ್ವಕ್ ಸೇನ್ ಅವರ ನಟನೆಯ ‘ಧಮ್ಕಿ’ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಡೆದಿದೆ. ಇದರಲ್ಲಿ ಜೂ.ಎನ್​ಟಿಆರ್​ ಭಾಗಿ ಆಗಿದ್ದರು. ಈ ವೇಳೆ ಅವರಿಗೆ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ನೀಡುವಂತೆ ಫ್ಯಾನ್ಸ್ ಕಡೆಯಿಂದ ಒತ್ತಾಯ ಬಂದಿದೆ. ಇದು ಅವರಿಗೆ ಸಿಟ್ಟು ತರಿಸಿದೆ. ‘ನೀವು ನನ್ನನ್ನು ಮತ್ತೊಮ್ಮೆ ಅಪ್‌ಡೇಟ್‌ಗಾಗಿ ಕೇಳಿದರೆ ನಾನು ಆ ಸಿನಿಮಾನ ಮಾಡುತ್ತಿಲ್ಲ ಎಂದು ಹೇಳುತ್ತೇನೆ. ನೀವು ಮತ್ತೆ ಮತ್ತೆ ಅದನ್ನೇ ಪ್ರಶ್ನಿಸಿದರೆ ನಾನು ಸಿನಿಮಾ ಮಾಡುವುದನ್ನೇ ನಿಲ್ಲಿಸುತ್ತೇನೆ’ ಎಂದು ಏರು ಧ್ವನಿಯಲ್ಲೇ ಹೇಳಿದ್ದಾರೆ.

ಇದನ್ನೂ ಓದಿ: ಜೂನಿಯರ್ ಎನ್​ಟಿಆರ್ ಧರಿಸಿದ ಈ ವಾಚ್​ನ ಬೆಲೆ ಎಷ್ಟು ಕೋಟಿ ರೂಪಾಯಿ?

‘ನಾನು ಸಿನಿಮಾ ಮಾಡುವುದನ್ನು ನಿಲ್ಲಿಸುವುದಿಲ್ಲ ಅನ್ನೋದು ನನಗೂ ಗೊತ್ತು. ಹಾಗೆ ಆಗುವುದಕ್ಕೆ ನೀವು ಬಿಡುವುದೂ ಇಲ್ಲ. ಪದೇಪದೇ ಅಪ್​ಡೇಟ್ ಕೇಳಬೇಡಿ. ಶೀಘ್ರದಲ್ಲೇ ಶೂಟಿಂಗ್ ಶುರುವಾಗುತ್ತದೆ’ ಎಂದು ಅವರು ಹೇಳಿದ್ದಾರೆ.  ಜೂನಿಯರ್ ಎನ್​ಟಿಆರ್ ಅವರು ಕಳೆದ ಒಂದು ವರ್ಷದಿಂದ ‘ಆರ್​ಆರ್​ಆರ್​’ ಯಶಸ್ಸನ್ನು ಎಂಜಾಯ್ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಆಸ್ಕರ್ ಅವಾರ್ಡ್ ಸೇರಿ ಅನೇಕ ಪ್ರತಿಷ್ಠಿತ ಅವಾರ್ಡ್ ಫಂಕ್ಷನ್​ನಲ್ಲಿ ಅವರು ಭಾಗಿ ಆಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:57 am, Sat, 18 March 23

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್