Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಪ್ರಶ್ನೆ ಪದೇಪದೇ ಕೇಳಿದ್ರೆ ಸಿನಿಮಾ ಮಾಡೋದನ್ನೇ ನಿಲ್ಲಿಸ್ತೀನಿ’; ಫ್ಯಾನ್ಸ್​ಗೆ ಜೂನಿಯರ್ ಎನ್​ಟಿಆರ್ ಎಚ್ಚರಿಕೆ

ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರಶ್ನೆ ಎದುರಾಗುತ್ತಿದೆ. ಕೆಲ ಮಾಧ್ಯಮದವರು ಕೂಡ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕೆ ಜೂನಿಯರ್ ಎನ್​ಟಿಆರ್​ ಸಿಟ್ಟಾಗಿದ್ದಾರೆ.

‘ಆ ಪ್ರಶ್ನೆ ಪದೇಪದೇ ಕೇಳಿದ್ರೆ ಸಿನಿಮಾ ಮಾಡೋದನ್ನೇ ನಿಲ್ಲಿಸ್ತೀನಿ’; ಫ್ಯಾನ್ಸ್​ಗೆ ಜೂನಿಯರ್ ಎನ್​ಟಿಆರ್ ಎಚ್ಚರಿಕೆ
ಜೂನಿಯರ್ ಎನ್​ಟಿಆರ್​
Follow us
ರಾಜೇಶ್ ದುಗ್ಗುಮನೆ
|

Updated on:Mar 18, 2023 | 10:01 AM

ಜೂನಿಯರ್ ಎನ್​ಟಿಆರ್ (JR NTR) ಅವರು ಸದ್ಯ ಸಖತ್ ಖುಷಿಯಲ್ಲಿದ್ದಾರೆ. ಇದಕ್ಕೆ ಕಾರಣ ಆಗಿದ್ದು ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದ್ದು. ಈ ಚಿತ್ರದಿಂದ ನಟರಾದ ರಾಮ್ ಚರಣ್, ಜೂನಿಯರ್ ಎನ್​ಟಿಆರ್, ನಿರ್ದೇಶಕ ರಾಜಮೌಳಿ, ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ (MM Kiravani) ಹಾಗೂ ಮೊದಲಾದವರ ಜನಪ್ರಿಯತೆ ಹೆಚ್ಚಿದೆ. ಈ ಮಧ್ಯೆ ಜೂನಿಯರ್ ಎನ್​ಟಿಆರ್​ ಮುಂದಿನ ಚಿತ್ರ ಯಾವುದು ಎನ್ನುವ ಪ್ರಶ್ನೆ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಇದಕ್ಕೆ ಅವರು​ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ ಫ್ಯಾನ್ಸ್​ಗೆ ಈ ವಿಚಾರದಲ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮರಳಿ ಈ ಬಗ್ಗೆ ಪ್ರಶ್ನೆ ಮಾಡದಂತೆ ಅವರು ಖಡಕ್ ಸೂಚನೆ ನೀಡಿದ್ದಾರೆ.

ಜೂನಿಯರ್ ಎನ್​ಟಿಆರ್ ಸಿಟ್ಟಾಗಿದ್ದೇಕೆ?

ಜೂನಿಯರ್ ಎನ್​ಟಿಆರ್ ಅವರು ‘ಆರ್​ಆರ್​ಆರ್​’ ಚಿತ್ರದ ಬಳಿಕ ತಮ್ಮ 30ನೇ ಸಿನಿಮಾ ಘೋಷಿಸಿದರು. ಖ್ಯಾತ ನಿರ್ದೇಶಕ ಕೊರಟಾಲ ಶಿವ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರ ಘೋಷಣೆ ಆಗಿದ್ದಷ್ಟೇ, ಈವರೆಗೆ ಚಿತ್ರದ ಶೂಟಿಂಗ್ ಆರಂಭ ಆಗಿಲ್ಲ ಎನ್ನಲಾಗಿದೆ. ಒಂದು ವರ್ಷ ಕಾದರೂ ಸಿನಿಮಾ ಚಿತ್ರೀಕರಣದ ಬಗ್ಗೆ ಯಾವುದೇ ಅಪ್​ಡೇಟ್ ಸಿಗದಿದ್ದಕ್ಕೆ ಸಹಜವಾಗಿಯೇ ಅವರ ಫ್ಯಾನ್ಸ್ ಚಿಂತೆಗೆ ಒಳಗಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರಶ್ನೆ ಎದುರಾಗುತ್ತಿದೆ. ಕೆಲ ಮಾಧ್ಯಮದವರು ಕೂಡ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕೆ ಜೂನಿಯರ್ ಎನ್​ಟಿಆರ್​ ಸಿಟ್ಟಾಗಿದ್ದಾರೆ.

ಇದನ್ನೂ ಓದಿ: NTR 30: ಜೂನಿಯರ್​ ಎನ್​ಟಿಆರ್​ 30ನೇ ಚಿತ್ರಕ್ಕೆ ಜಾನ್ವಿ ಕಪೂರ್​ ನಾಯಕಿ; ಇಲ್ಲಿದೆ ಫಸ್ಟ್​ ಲುಕ್​

ವೇದಿಕೆಯಿಂದಲೇ ಎಚ್ಚರಿಕೆ ನೀಡಿದ ನಟ

ವಿಶ್ವಕ್ ಸೇನ್ ಅವರ ನಟನೆಯ ‘ಧಮ್ಕಿ’ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಡೆದಿದೆ. ಇದರಲ್ಲಿ ಜೂ.ಎನ್​ಟಿಆರ್​ ಭಾಗಿ ಆಗಿದ್ದರು. ಈ ವೇಳೆ ಅವರಿಗೆ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ನೀಡುವಂತೆ ಫ್ಯಾನ್ಸ್ ಕಡೆಯಿಂದ ಒತ್ತಾಯ ಬಂದಿದೆ. ಇದು ಅವರಿಗೆ ಸಿಟ್ಟು ತರಿಸಿದೆ. ‘ನೀವು ನನ್ನನ್ನು ಮತ್ತೊಮ್ಮೆ ಅಪ್‌ಡೇಟ್‌ಗಾಗಿ ಕೇಳಿದರೆ ನಾನು ಆ ಸಿನಿಮಾನ ಮಾಡುತ್ತಿಲ್ಲ ಎಂದು ಹೇಳುತ್ತೇನೆ. ನೀವು ಮತ್ತೆ ಮತ್ತೆ ಅದನ್ನೇ ಪ್ರಶ್ನಿಸಿದರೆ ನಾನು ಸಿನಿಮಾ ಮಾಡುವುದನ್ನೇ ನಿಲ್ಲಿಸುತ್ತೇನೆ’ ಎಂದು ಏರು ಧ್ವನಿಯಲ್ಲೇ ಹೇಳಿದ್ದಾರೆ.

ಇದನ್ನೂ ಓದಿ: ಜೂನಿಯರ್ ಎನ್​ಟಿಆರ್ ಧರಿಸಿದ ಈ ವಾಚ್​ನ ಬೆಲೆ ಎಷ್ಟು ಕೋಟಿ ರೂಪಾಯಿ?

‘ನಾನು ಸಿನಿಮಾ ಮಾಡುವುದನ್ನು ನಿಲ್ಲಿಸುವುದಿಲ್ಲ ಅನ್ನೋದು ನನಗೂ ಗೊತ್ತು. ಹಾಗೆ ಆಗುವುದಕ್ಕೆ ನೀವು ಬಿಡುವುದೂ ಇಲ್ಲ. ಪದೇಪದೇ ಅಪ್​ಡೇಟ್ ಕೇಳಬೇಡಿ. ಶೀಘ್ರದಲ್ಲೇ ಶೂಟಿಂಗ್ ಶುರುವಾಗುತ್ತದೆ’ ಎಂದು ಅವರು ಹೇಳಿದ್ದಾರೆ.  ಜೂನಿಯರ್ ಎನ್​ಟಿಆರ್ ಅವರು ಕಳೆದ ಒಂದು ವರ್ಷದಿಂದ ‘ಆರ್​ಆರ್​ಆರ್​’ ಯಶಸ್ಸನ್ನು ಎಂಜಾಯ್ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಆಸ್ಕರ್ ಅವಾರ್ಡ್ ಸೇರಿ ಅನೇಕ ಪ್ರತಿಷ್ಠಿತ ಅವಾರ್ಡ್ ಫಂಕ್ಷನ್​ನಲ್ಲಿ ಅವರು ಭಾಗಿ ಆಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:57 am, Sat, 18 March 23

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ