AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ilaiyaraaja Biopic: ಇಳೆಯರಾಜ ಬಯೋಪಿಕ್​ನಲ್ಲಿ ಧನುಷ್​ ನಟನೆ; ಭಾರಿ ನಿರೀಕ್ಷೆ ಮೂಡಿಸಿದ ಸಿನಿಮಾ

Dhanush: 2024ರ ಅಕ್ಟೋಬರ್​ನಲ್ಲಿ ಇಳೆಯರಾಜ ಅವರ ಬಯೋಪಿಕ್​ಗೆ ಶೂಟಿಂಗ್​ ಆರಂಭ ಆಗಲಿದೆ. 2025ರ ಮಧ್ಯಭಾಗದಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಇಳೆಯರಾಜ ಅವರ ವೃತ್ತಿಜೀವನ ಮತ್ತು ಖಾಸಗಿ ಬದುಕಿನ ಬಗ್ಗೆ ಈ ಸಿನಿಮಾದಲ್ಲಿ ವಿವರಿಸಲಾಗುವುದು. ಧನುಷ್​ ಅವರನ್ನು ಇಳೆಯರಾಜ ಅವರ ಪಾತ್ರದಲ್ಲಿ ನೋಡಲು ಫ್ಯಾನ್ಸ್​ ಕಾತರರಾಗಿದ್ದಾರೆ.

Ilaiyaraaja Biopic: ಇಳೆಯರಾಜ ಬಯೋಪಿಕ್​ನಲ್ಲಿ ಧನುಷ್​ ನಟನೆ; ಭಾರಿ ನಿರೀಕ್ಷೆ ಮೂಡಿಸಿದ ಸಿನಿಮಾ
ಧನುಷ್​, ಇಳೆಯರಾಜ
ಮದನ್​ ಕುಮಾರ್​
|

Updated on: Nov 10, 2023 | 7:03 PM

Share

ಖ್ಯಾತ ಸಂಗೀತ ನಿರ್ದೇಶಕ ಇಳೆಯರಾಜ ಅವರ ಜೀವನದ ಕುರಿತು ಸಿನಿಮಾ (Ilaiyaraaja Biopic) ಸಿದ್ಧವಾಗುತ್ತಿದೆ. ಈ ಬಗ್ಗೆ ನಿರ್ಮಾಣ ಸಂಸ್ಥೆಯಿಂದ ಹೊಸ ಸುದ್ದಿ ಹೊರಬಿದ್ದಿದೆ. ವಿಶೇಷ ಏನೆಂದರೆ, ಇಳೆಯರಾಜ (Ilaiyaraaja) ಅವರ ಪಾತ್ರವನ್ನು ಖ್ಯಾತ ಕಾಲಿವುಡ್​ ನಟ ಧನುಷ್​ (Dhanush) ಅವರು ಮಾಡಲಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ಇಳೆಯರಾಜ ಅವರು ನೀಡಿದ ಕೊಡುಗೆ ಅಪಾರ. 7 ಸಾವಿರಕ್ಕೂ ಅಧಿಕ ಹಾಡುಗಳಿಗೆ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. 1 ಸಾವಿರಕ್ಕೂ ಹೆಚ್ಚು ಸಿನಿಮಾಗಳಿಗೆ ಅವರು ಸಂಗೀತ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ. ಇಂಥ ಮಹಾನ್​ ಸಾಧಕನ ಜೀವನದ ವಿವರಗಳನ್ನು ಆಧರಿಸಿ ಈ ಸಿನಿಮಾ ನಿರ್ಮಾಣ ಆಗುತ್ತಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ.

‘ಇಸೈಗ್ನಾನಿ’ ಎಂದು ಈ ಸಿನಿಮಾಗೆ ಶೀರ್ಷಿಕೆ ಇಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಆ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ. ಈ ಪ್ರಾಜೆಕ್ಟ್​ ಅನೌನ್ಸ್​ ಆಗುತ್ತಿದ್ದಂತೆಯೇ ಇಳೆಯರಾಜ ಮತ್ತು ಧನುಷ್​ ಅವರು ಜೊತೆಯಾಗಿ ಇರುವ ಫೋಟೋಗಳು ವೈರಲ್​ ಆಗಿವೆ. ಟ್ರೇಡ್​ ಅನಲಿಸ್ಟ್​ ಮನೋಬಲ ವಿಜಯಬಾಲನ್​ ಅವರು ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ. ಅಭಿಮಾನಿಗಳು ಕಮೆಂಟ್​ ಮೂಲಕ ಈ ಸಿನಿಮಾ ಬಗ್ಗೆ ತಮಗೆ ಇರುವ ಎಗ್ಸೈಟ್​ಮೆಂಟ್​ ತೋಡಿಕೊಂಡಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದರೆ 2024ರ ಅಕ್ಟೋಬರ್​ನಲ್ಲಿ ಇಳೆಯರಾಜ ಅವರ ಬಯೋಪಿಕ್​ಗೆ ಶೂಟಿಂಗ್​ ಆರಂಭ ಆಗಲಿದೆ. 2025ರ ಮಧ್ಯಭಾಗದಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಇಳೆಯರಾಜ ಅವರ ವೃತ್ತಿಜೀವನ ಮತ್ತು ಖಾಸಗಿ ಬದುಕಿನ ಬಗ್ಗೆ ಈ ಸಿನಿಮಾದಲ್ಲಿ ವಿವರಿಸಲಾಗುವುದು. ಧನುಷ್​ ಅವರನ್ನು ಇಳೆಯರಾಜ ಅವರ ಪಾತ್ರದಲ್ಲಿ ನೋಡಲು ಫ್ಯಾನ್ಸ್​ ಕಾತರರಾಗಿದ್ದಾರೆ. ಮರ್ಕ್ಯುರಿ ಮೂವೀಸ್​ ಮತ್ತು ಕನೆಕ್ಟ್​ ಮೀಡಿಯಾ ಸಂಸ್ಥೆಗಳು ಜೊತೆಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಲಿವೆ.

ಇದನ್ನೂ ಓದಿ: Dhanush: ತಲೆ ಬೋಳಿಸಿಕೊಂಡ ಖ್ಯಾತ ನಟ ಧನುಷ್​; ಅಭಿಮಾನಿಗಳಲ್ಲಿ ಮೂಡಿತು ಗುಮಾನಿ

ಕನ್ನಡ ಚಿತ್ರರಂಗದ ಜೊತೆಗೂ ಇಳೆಯರಾಜ ಅವರಿಗೆ ನಂಟು ಇದೆ. ಕನ್ನಡದಲ್ಲೂ ಅವರು ಅನೇಕ ಸೂಪರ್​ ಹಿಟ್​ ಗೀತೆಗಳನ್ನು ನೀಡಿದ್ದಾರೆ. ‘ನಾನು ಕೂಡ ಕನ್ನಡದವನು’ ಎಂದು ಅವರು ಅನೇಕ ಸಂದರ್ಭಗಳಲ್ಲಿ ಹೇಳಿಕೊಂಡಿದ್ದಾರೆ. ಕರ್ನಾಟಕದಲ್ಲಿ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಕನ್ನಡದ ಮಂದಿಗೂ ಈ ಸಿನಿಮಾ ಮೇಲೆ ಕುತೂಹಲ ಸೃಷ್ಟಿ ಆಗಿದೆ. ಈಗಾಗಲೇ ಅನೇಕ ಸಾಧಕರ ಬಯೋಪಿಕ್​ ನಿರ್ಮಾಣ ಆಗಿ ಯಶಸ್ಸು ಕಂಡಿವೆ. ಇಂಥ ಸಿನಿಮಾಗಳನ್ನು ಮಾಡುವಾಗ ಹೆಚ್ಚು ಎಚ್ಚರಿಕೆ ವಹಿಸಬೇಕಾಗುತ್ತದೆ. ಇಳೆಯರಾಜ ಜೀವನಾಧಾರಿತ ಸಿನಿಮಾದ ತೆರೆಹಿಂದೆ ಕೆಲಸ ಮಾಡಲಿರುವ ತಾಂತ್ರಿಕ ಬಳಗದ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!