AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಯರಾಜನಿಗೆ ದೇಗುಲ ಪ್ರವೇಶ ನಿರಾಕರಣೆ ನಿಜವೇ? ಸ್ಪಷ್ಟನೆ ನೀಡಿದ ಸಂಗೀತ ಮಾಂತ್ರಿಕ

ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರಿಗೆ ತಮಿಳುನಾಡಿನ ದೇವಸ್ಥಾನದಲ್ಲಿ ಪ್ರವೇಶ ನಿರಾಕರಿಸಲ್ಪಟ್ಟಿದ್ದಾರೆ ಎಂಬ ವದಂತಿ ಹರಡಿದೆ. ಆದರೆ ಇಳಯರಾಜ ಅವರು ಇದನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ದೇವಸ್ಥಾನದ ನಿಯಮಗಳಿಗೆ ಅನುಗುಣವಾಗಿ ಅವರ ಪ್ರವೇಶವನ್ನು ಸೀಮಿತಗೊಳಿಸಲಾಗಿತ್ತು ಎಂದು ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕ ಸಚಿವ ಮಹದೇವಪ್ಪ ಅವರು ಈ ಘಟನೆಯನ್ನು ಖಂಡಿಸಿದ್ದಾರೆ.

ಇಳಯರಾಜನಿಗೆ ದೇಗುಲ ಪ್ರವೇಶ ನಿರಾಕರಣೆ ನಿಜವೇ? ಸ್ಪಷ್ಟನೆ ನೀಡಿದ ಸಂಗೀತ ಮಾಂತ್ರಿಕ
ಇಳಯರಾಜ
Follow us
ರಾಜೇಶ್ ದುಗ್ಗುಮನೆ
|

Updated on:Dec 17, 2024 | 8:31 AM

ಖ್ಯಾತ ಸಂಗೀತ ಸಂಯೋಜಕ ಹಾಗೂ ರಾಜ್ಯಸಭಾ ಸದಸ್ಯ ಇಳಯರಾಜ ಹೆಸರು ಸಾಕಷ್ಟು ಚರ್ಚೆಯಲ್ಲಿ ಇದೆ. ತಮಿಳುನಾಡಿನ ಶ್ರೀವಿಲ್ಲಿಪುತ್ತೂರ್ ಆಂಡಾಳ್ ದೇವಸ್ಥಾನದ ಒಳಗೆ ಇಳಯರಾಜ ಅವರನ್ನು ಬಿಟ್ಟಿಲ್ಲ ಎಂಬ ಸುದ್ದಿ ಎಲ್ಲ ಕಡೆಗಳಲ್ಲಿ ಹರಿದಾಡಿದೆ. ಇದರಿಂದ ಅವರಿಗೆ ಅವಮಾನ ಆಗಿದೆ ಎಂಬ ಕೂಗು ಎದ್ದಿದೆ. ಕರ್ನಾಟಕದ ಸಚಿವ ಮಹದೇವಪ್ಪ ಕೂಡ ಈ ಬಗ್ಗೆ ಟ್ವೀಟ್ ಮಾಡಿ ಘಟನೆಯನ್ನು ಖಂಡಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಇಳಯರಾಜ, ಆ ರೀತಿಯ ಘಟನೆ ನಡೆದೇ ಇಲ್ಲ ಎಂದಿದ್ದಾರೆ. ಜೊತೆಗೆ ವದಂತಿಗಳಿಗೆ ಕಿವಿಕೊಡದಂತೆ ಕೋರಿದ್ದಾರೆ.

ಘಟನೆ ಬಗ್ಗೆ ತಮಿಳಿನಲ್ಲಿ ಟ್ವೀಟ್ ಮಾಡಿರುವ ಇಳಯರಾಜ, ‘ನನ್ನ ವಿಚಾರದಲ್ಲಿ ಕೆಲವರು ವದಂತಿ ಹಬ್ಬಿಸಿದ್ದಾರೆ. ನಾನು ಯಾವುದೇ ಸಮಯದಲ್ಲಿ ಅಥವಾ ಸ್ಥಳದಲ್ಲಿ ನನ್ನ ಸ್ವಾಭಿಮಾನವನ್ನು ಬಿಟ್ಟುಕೊಡುವವನಲ್ಲ. ನಡೆದಿರದ ಘಟನೆಯನ್ನು ನಡೆದಿರುವ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ಅಭಿಮಾನಿಗಳು ಹಾಗೂ ಜನರು ಈ ರೀತಿಯ ವದಂತಿಯನ್ನು ನಂಬಬಾರದು’ ಎಂದು ಇಳಯರಾಜ ಕೋರಿದ್ದಾರೆ.

ನಡೆದ ಘಟನೆ ಏನು?

ವಿರುದುನಗರ ಜಿಲ್ಲೆಯ ಶ್ರೀವಿಲ್ಲಿಪುತ್ತೂರಿನ ಆಂಡಾಳ್ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಳಯರಾಜ ಭಾಗವಹಿಸಿದ್ದರು. ಅವರಿಗೆ ಹೂಮಾಲೆ ಹಾಕಿ ಸ್ವಾಗತಿಸಲಾಯಿತು. ದೇವಸ್ಥಾನದ ಅರ್ಥಮಂಟಪ ದಾಟಿ ಹೋಗದಂತೆ ಇಳಯರಾಜ ಅವರ ಬಳಿ ಕೋರಲಾಗಿದೆ.

ಇದನ್ನೂ ಓದಿ: ‘ಕೇಳದೆ ನಿಮಗೀಗ..’ ಕಂಪೋಸ್ ಮಾಡುವಾಗ ನಡೆದ ಅಪರೂಪದ ಘಟನೆ ಹೇಳಿದ ಇಳಯರಾಜ

ದೇವಸ್ಥಾನದ ಸಂಪ್ರದಾಯದ ಪ್ರಕಾರ ಅರ್ಚಕರು, ಮಠಾಧೀಶರು ಸೇರಿದಂತೆ ಅಧಿಕೃತ ಸಿಬ್ಬಂದಿಗೆ ಮಾತ್ರ ಅರ್ಥಮಂಟಪದ ಬಳಿ ಪ್ರವೇಶವಿದೆ. ಶಿಷ್ಟಾಚಾರದ ಕಾರಣದಿಂದ ಇಳಯರಾಜ ಅವರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಬೇರೆ ರೀತಿಯಲ್ಲಿ ಬಿಂಬಿಸಲಾಯಿತು..

ಈ ಘಟನೆಯನ್ನು ಇಟ್ಟುಕೊಂಡು ಬೇರೆ ರೀತಿಯಲ್ಲಿ ಬಿಂಬಿಸಲಾಯಿತು. ಜಾತಿ ವಿಚಾರವನ್ನು ಇಲ್ಲಿ ಎಳೆದು ತರಲಾಯಿತು. ಇಳಯರಾಜ ಅವರಿಗೆ ಅವಮಾನ ಮಾಡಲಾಗಿದೆ ಎಂದು ಅನೇಕರು ಹೇಳಿದ್ದರು. ಇದು ಇಳಯರಾಜ ಗಮನಕ್ಕೂ ಬಂದಿದ್ದು, ಅವರೇ ಘಟನೆ ಬಗ್ಗೆ ಸ್ಪಷ್ಟನೆ ನೀಡಿರುವುದರಿಂದ ಎಲ್ಲಾ ವದಂತಿಗೆ ತೆರೆ ಬಿದ್ದಂತೆ ಆಗಿದೆ.

ಮಹದೇವಪ್ಪ ಟ್ವೀಟ್..

ಕರ್ನಾಟಕ ಸಮಾಜ ಕಲ್ಯಾಣ ಸಚಿವ ಎಚ್​ಸಿ ಮಹದೇವಪ್ಪ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ಸಂಗೀತ ಮಾಂತ್ರಿಕ, ಹಾಲಿ ರಾಜ್ಯ ಸಭಾ ಸದಸ್ಯರಾದ ಇಳಯರಾಜ ಅವರನ್ನು ತಮಿಳುನಾಡಿನ ದೇವಸ್ಥಾನವೊಂದರಲ್ಲಿ ಪ್ರವೇಶ ಮಾಡಲು ನಿರಾಕರಿಸಿದ ಘಟನೆಯು ನಿಜಕ್ಕೂ ಅವಮಾನಕರ ಸಂಗತಿ ಆಗಿದ್ದು, ಸಮಾಜದಲ್ಲಿ  ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆಯು ಇನ್ನೂ ಜೀವಂತವಾಗಿದೆ ಎಂಬುದನ್ನು ಸಾರಿ ಹೇಳುತ್ತಿದೆ. ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿ, ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಗಳಿಸಿದವರ ಸ್ಥಿತಿಯೇ ಹೀಗಿದ್ದರೆ, ಸಾಮಾನ್ಯರಾಗಿ ಜೀವಿಸುತ್ತಿರುವ ಪರಿಶಿಷ್ಟ ಸಮುದಾಯಗಳ ಪರಿಸ್ಥಿತಿ ಏನಾಗಿರಬೇಕು ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು’ ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:26 am, Tue, 17 December 24

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ