ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಶೂಟ್; ವಿವಾದದ ಬಳಿಕ ಉಲ್ಟಾ ಹೊಡೆದ ಅರಣ್ಯ ಇಲಾಖೆ

ಬಂಡೀಪುರ ಅರಣ್ಯದಲ್ಲಿ ಮಲಯಾಳಂ ಚಿತ್ರದ ಶೂಟಿಂಗ್ ನಡೆದಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಹುಲಿ ಸಂರಕ್ಷಿತ ಪ್ರದೇಶದಲ್ಲಿ ಚಿತ್ರೀಕರಣಕ್ಕೆ ಅನುಮತಿ ನೀಡಿದ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆಯಿಂದ ಅರಣ್ಯ ಇಲಾಖೆಯ ದ್ವಂದ್ವ ನೀತಿ ಬಯಲಾಗಿದೆ .

ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಶೂಟ್; ವಿವಾದದ ಬಳಿಕ ಉಲ್ಟಾ ಹೊಡೆದ ಅರಣ್ಯ ಇಲಾಖೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಶೂಟ್; ವಿವಾದದ ಬಳಿಕ ಉಲ್ಟಾ ಹೊಡೆದ ಅರಣ್ಯ ಇಲಾಖೆ
Edited By:

Updated on: Apr 10, 2025 | 8:56 AM

ಕಾಡು ಪ್ರದೇಶಗಳಲ್ಲಿ ಶೂಟಿಂಗ್ ಮಾಡಲು ಅನುಮತಿ ಪಡೆಯಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮಧ್ಯೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ವ್ಯಾಪ್ತಿಯಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲಯಾಳಂ ಚಿತ್ರ (Malayalam Movie) ತಂಡವೊಂದು ಬೀಡು ಬಿಟ್ಟು ಸಿನಿಮಾ ಶೂಟ್ ಮಾಡಿದ್ದು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ತಂಡದವರಿಗೆ ಅನುಮತಿ ಇದೆಯೋ ಇಲ್ಲವೋ ಎನ್ನುವ ಪ್ರಶ್ನೆಯೂ ಎದುರಾಗಿತ್ತು. ಈಗ ಅರಣ್ಯ ಇಲಾಖೆ ಅನುಮತಿ ನೀಡಿರುವ ಸಂಪೂರ್ಣ ಮಾಹಿತಿ ಟಿವಿ9ಗೆ ಲಭ್ಯ ಆಗಿದೆ.

‘ಪೆನ್ನು ಕೇಸ್​’ ಎಂಬ ಹೆಸರಿನ ಚಿತ್ರತಂಡಕ್ಕೆ ಶೂಟಿಂಗ್​​ಗೆ ಅನುಮತಿ ನೀಡಲಾಗಿದೆ. ಅಶ್ವಥಿ ನಡುತೋಡಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಫೆಬಿನ್​ ಸಿದ್ಧಾರ್ಥ್​ ನಿರ್ದೇಶನದ ‘ಪೆನ್ನು ಕೇಸ್​’ ಚಿತ್ರದಲ್ಲಿ ನಿಖಿಲ್ ವಿಮಲ್, ಹಕಿಮ್ ಶಜಹನ್ ಅಭಿನಯಿಸುತ್ತಿದ್ದಾರೆ. ಸಿನಿಮಾ ತಂಡದವರು ಬಂಡೀಪುರ ಟೈಗರ್ ಕನ್ಸರವೇಷನ್​​ ಫೌಂಡೇಷನ್​ಗೆ 1 ಲಕ್ಷ ಹಣ ನೀಡಿದ್ದಾರೆ.

ಅರಣ್ಯಾಧಿಕಾರಿ ಪ್ರಭಾಕರನ್​ ಶೂಟಿಂಗ್​ಗೆ ಅನುಮತಿ ನೀಡಿದ್ದಾರೆ. ಈ ಮೊದಲು ಯಾವುದೇ ಮಾಹಿತಿ ನೀಡದೆ ಅರಣ್ಯ ಇಲಾಖೆ ಕಣ್ಣಾಮುಚ್ಚಾಲೆ ಆಡಿತ್ತು. ಈಗ ಎಲ್ಲಾ ದಾಖಲೆಗಳು ಲಭ್ಯವಾಗಿವೆ. ಟಿವಿ9 ವರದಿ ಬಳಿಕ ತರಾತುರಿಯಲ್ಲಿ ಅರಣ್ಯ ಇಲಾಖೆ ದಾಖಲೆ ಸೃಷ್ಟಿ ಮಾಡಿತಾ ಎಂಬ ಪ್ರಶ್ನೆಯೂ ಮೂಡುವಂತೆ ಆಗಿದೆ.

ವಿವಾದ ಏಕೆ?

ಹುಲಿ ಸಂರಕ್ಷಿತ ವಲಯದಲ್ಲಿ ಚಿತ್ರೀಕರಣ ಮಾಡಲು ಮಲಯಾಳಂ ಸಿನಿಮಾಗೆ ನೀಡಲು ಅವಕಾಶ ಕೊಟ್ಟಿದ್ದೇಕೆ ಎನ್ನುವ ಪ್ರಶ್ನೆ ಮೂಡಿದೆ. ನಿಷೇಧಿತ ವಲಯ ಎಂದು ಗೊತ್ತಿದ್ದರೂ ಸಹ ಚಿತ್ರೀಕರಣಕ್ಕೆ ಅವಕಾಶ ಕೊಟ್ಟಿದ್ದು ಚರ್ಚೆ ಹುಟ್ಟುಹಾಕಿದೆ. ಇದು ವಿವಾದಕ್ಕೆ ಮೂಲಕ ಕಾರಣ.

ಇದನ್ನೂ ಓದಿ: ಕನ್ನಡ ಚಿತ್ರರಂಗಕ್ಕೆ ಸುಣ್ಣ, ಮಲಯಾಳಿಗಳಿಗೆ ಬೆಣ್ಣೆ, ರಾಜ್ಯ ಸರ್ಕಾರದ ಇಬ್ಬಗೆ ನೀತಿಗೆ ವಿರೋಧ

ಡಬಲ್ ಸ್ಟ್ಯಾಂಡ್

ಬಂಡೀಪುರ ಅರಣ್ಯ ಮುಖ್ಯಸ್ಥ ಪ್ರಭಾಕರನ್ ಅವರು ಈವರೆಗೆ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ವಿವಾದವಾಗುತ್ತಿದ್ದಂತೆ ಅವರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಹಿಮವದ್ ಗೋಪಾಲಸ್ವಾಮಿ ಬೆಟ್ಟ ಇರೋದು ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ. ಈ ಭಾಗದಲ್ಲಿ ಸಿನಿಮಾ ಶೂಟ್ ಮಾಡುವಂತಿಲ್ಲ. ‘ಚಿತ್ರದ ಶೂಟಿಂಗ್​ಗೆ ಅನುಮತಿ ಕೊಟ್ಟಿದ್ದು ನಿಜ. ಆದರೆ, ದೇವಾಲಯದ ಆವರಣದಲ್ಲಿ  ಮಾತ್ರ ಶೂಟ್ ಮಾಡಲು ಅನುಮತಿ ನೀಡಲಾಗಿದೆ’ ಎಂದು ಅರಣ್ಯ ಇಲಾಖೆ ಬಿಂಬಿಸುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us