AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್ 2 ಚಿತ್ರದಲ್ಲಿ ನಾನು ಇಂದಿರಾ ಗಾಂಧಿ ಪಾತ್ರ ನಿರ್ವಹಿಸುತ್ತಿಲ್ಲವೆಂದ ನಟಿ ರವೀನಾ ಟಂಡನ್

ಶೀಘ್ರದಲ್ಲೇ ಕೆಜಿಎಫ್ 2 ಚಿತ್ರದ ಮೂಲಕ ದೊಡ್ಡ ಪರದೆಯ ಮೇಲೆ ಕಾಣಿಸಿಕೊಳ್ಳುವ ಮೂಲಕ ಮತ್ತೊಮ್ಮ ಕನ್ನಡಕ್ಕೆ ಪಾದಾರ್ಪಣೆ ಮಾಡಿಲಿದ್ದಾರೆ ನಟಿ ರವೀನಾ ಟಂಡನ್.

ಕೆಜಿಎಫ್ 2 ಚಿತ್ರದಲ್ಲಿ ನಾನು ಇಂದಿರಾ ಗಾಂಧಿ ಪಾತ್ರ ನಿರ್ವಹಿಸುತ್ತಿಲ್ಲವೆಂದ ನಟಿ ರವೀನಾ ಟಂಡನ್
ಕೆಜಿಫ್ 2 ಚಿತ್ರದಲ್ಲಿ ಪ್ರಧಾನ ಮಂತ್ರಿ ಪಾತ್ರದಲ್ಲಿ ಕಾಣಿಸಿಕೊಂಡ ನಟಿ ರವೀನಾ ಟಂಡನ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 19, 2022 | 1:38 PM

Share

ರವೀನಾ ಟಂಡನ್ ತನ್ನ ಇತ್ತೀಚಿಗೆ ನೆಟ್‌ಫ್ಲಿಕ್ರ್ಸ್​ನಲ್ಲಿ ಬಿಡುಗಡೆಯಾದ ಅರಣ್ಯಕ್‌ ವೆಬ್ ಸರಣಿಯ ಯಶಸ್ಸಿನಲ್ಲಿ ಮುಳುಗಿದ್ದಾರೆ. ಥ್ರಿಲ್ಲರ್ ಚಿತ್ರಯಿದಾಗಿದ್ದು, ಪೊಲೀಸ್ ಅಧಿಕಾರಿಯ ಪಾತ್ರವನ್ನು ನಟಿ ರವೀನಾ ಟಂಡನ್ ನಿರ್ವಹಿಸಿದ್ದಾರೆ. ಶೀಘ್ರದಲ್ಲೇ ಕೆಜಿಎಫ್ 2 ನೊಂದಿಗೆ ದೊಡ್ಡ ಪರದೆಯ ಮೇಲೆ ಕಾಣಿಸಿಕೊಳ್ಳುವ ಮೂಲಕ ಮತ್ತೊಮ್ಮ ಕನ್ನಡಕ್ಕೆ ಪಾದಾರ್ಪಣೆ ಮಾಡಿಲಿದ್ದಾರೆ. ಯಶ್ ಅಭಿನಯದ ಚಿತ್ರದಲ್ಲಿ ಟಂಡನ್ ಪ್ರಧಾನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಅವರ ಪಾತ್ರವು ದಿವಂಗತ ಭಾರತದ ಪ್ರಧಾನಿ ಇಂದಿರಾ ಗಾಂಧಿಯವರ ಮಾದರಿಯಲ್ಲಿದೆ ಎಂದು ಈ ಹಿಂದೆ ವರದಿಯಾಗಿತ್ತು. ಇದನ್ನು ನಿರಾಕರಿಸಿದ ರವೀನಾ ಟಂಡನ್ ಈ ಚಿತ್ರದಲ್ಲಿ ಇಂದಿರಾ ಗಾಂಧಿಜಿ ಬಗ್ಗೆ ಏನೂ ಇಲ್ಲ. ನನ್ನ ನೋಟ ಅಥವಾ ನನ್ನ ಪಾತ್ರ ಅವರಿಂದ ಸ್ಪೂರ್ತಿ ಪಡೆದಿಲ್ಲ. ನಾವು ಅಂತಹ ಯಾವುದೇ ಉಲ್ಲೇಖಗಳನ್ನು ತೆಗೆದುಕೊಂಡಿಲ್ಲ. ಈ ಚಿತ್ರವು 80 ರ ದಶಕದ ಕಥೆಯನ್ನ ಆಧಾರಿತವಾಗಿದ್ದು, ಚಿತ್ರದಲ್ಲಿ ನಾನು ಪ್ರಧಾನ ಮಂತ್ರಿಯಾಗಿ ನಟಿಸುತ್ತಿದ್ದೇನೆ. ಅದನ್ನ ಹೊರತು ಪಡಿಸಿ ನಾನು ಚಿತ್ರದಲ್ಲಿ ಇಂದಿರಾ ಗಾಂಧಿಜಿ ಪಾತ್ರವನ್ನು ನಿರ್ವಹಿಸುತ್ತಿದ್ದೇನೆ ಎಂದು ಅನೇಕ ಊಹಾಪೋಹಗಳು ಕೇಳಿಬರುತ್ತಿವೆ ಎಂದರು.

ಕೆಜಿಎಫ್ 1 ಭಾಗವು ಯಶಸ್ಸಿನ ನಂತರ ರವೀನಾ ಟಂಡನ್ ಕೆಜಿಎಫ್ 2 ಬಿಡುಗಡೆಗಾಗಿ ಅಭಿಮಾನಿಗಳಂತೆ ಅವರು ಕೂಡ ಕಾತುರುದಿಮದ ಕಾಯುತ್ತಿದ್ದಾರಂತೆ. ನಾವು ಪ್ರಸ್ತುತ ಅತ್ಯಂತ ಅನಿರೀಕ್ಷಿತ ಪರಿಸ್ಥಿತಿಯಲ್ಲಿ ಬದುಕುತ್ತಿದ್ದೇವೆ. ಥಿಯೇಟರ್‌ಗಳು ಮತ್ತೆ ತೆರೆದಿವೆ ಮತ್ತು ಪ್ರೇಕ್ಷಕರು ಚಿತ್ರಮಂದಿರದಲ್ಲಿ ಚಲನಚಿತ್ರಗಳನ್ನು ವೀಕ್ಷಿಸಲು ಹೋಗುತ್ತಿದ್ದರು, ಆದರೆ ಹೊಸ ಅಲೆಯು ಮತ್ತೆ ಕೆಲಸಗಳನ್ನು ನಿಧಾನಗೊಳಿಸಿದೆ. ನಾನು ಕೆಜಿಎಫ್ 2 ಗಾಗಿ ಅಷ್ಟೇ ಉತ್ಸುಕಳಾಗಿದ್ದೇನೆ. ನಿರ್ದೇಶಕ ಪ್ರಶಾಂತ್ ನೀಲ್ ಅವರೊಂದಿಗೆ ಕೆಲಸ ಮಾಡುವುದು ತುಂಭಾ ಸಂತೋಷವಾಗಿದೆ. ನಟ ಯಶ್ ಉತ್ತಮ ನಟ ಮತ್ತು ಸಂಭಾವಿತ ವ್ಯಕ್ತಿ ಎಂದು ಅವರು ಹೇಳಿದರು.

ಇನ್ನೂ ಕೆಜಿಎಫ್ 2 ಚಿತ್ರದಲ್ಲಿ ನಟ ಸಂಜಯ್ ದತ್ ಕೂಡ ಇದ್ದಾರೆ. ಖಡಕ್ ಲುಕ್​ನಲ್ಲಿ ಖಳನಾಯಕನಾಗಿ ನಟಿಸಿದ್ದಾರೆ. ದುರದೃಷ್ಟವಶಾತ್ ಅವರೊಂದಿಗೆ ಯಾವುದೇ ದೃಶ್ಯಗಳು ಇಲ್ಲ ಎಂದು ನಟಿ ರವೀನಾ ಟಂಡನ್ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಮಾಲ್ಡೀವ್ಸ್​ ಸಮುದ್ರ ತೀರದಲ್ಲಿ ನಿಂತಿರುವ​ ಫೋಟೋ ಹಾಕಿ ಪಡ್ಡೆಗಳ ಮನಗೆದ್ದ ಪೂಜಾ ಹೆಗ್ಡೆ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ