AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ನಿರ್ಮಾಪಕರು ವಿತರಕರ ಮನೆ ಮೇಲೆ ಐಟಿ ದಾಳಿ, 200 ಕೋಟಿಗೂ ಅಧಿಕ ಅಘೋಷಿತ ಆದಾಯ ಪತ್ತೆ

ಚೆನ್ನೈ, ಮಧುರೈ, ಕೊಯಮತ್ತೂರು ಮತ್ತು ವೆಲ್ಲೂರ್‌ನಲ್ಲಿ ನಡೆದ ಶೋಧಕಾರ್ಯದಲ್ಲಿ ಒಟ್ಟು 200 ಕೋಟಿಗೂ ಅಧಿಕ ಅಘೋಷಿತ ಆದಾಯಕ್ಕೆ ಸಂಬಂಧಿಸಿದ ದಾಖಲೆಗಳು, ನಗದು, ಆಭರಣ ಪತ್ತೆಯಾಗಿದೆ.

ತಮಿಳುನಾಡು: ನಿರ್ಮಾಪಕರು ವಿತರಕರ ಮನೆ ಮೇಲೆ ಐಟಿ ದಾಳಿ, 200 ಕೋಟಿಗೂ ಅಧಿಕ ಅಘೋಷಿತ ಆದಾಯ ಪತ್ತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 10, 2022 | 10:18 AM

Share

ತಮಿಳನಾಡು ಚಲನಚಿತ್ರೋದ್ಯಮಕ್ಕೆ ಸಂಬಂಧಿಸಿದ ಕೆಲವು ಚಿತ್ರ ನಿರ್ಮಾಪಕರು, ವಿತರಕರು ಮತ್ತು ಹಣಕಾಸುದಾರರ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ (Income Tax Department)  ಅಧಿಕಾರಿಗಳು ಆಗಸ್ಟ್ 2 ರಂದು  ದಾಳಿ ನಡೆಸಿದ್ದಾರೆ. ಚೆನ್ನೈ, ಮಧುರೈ, ಕೊಯಮತ್ತೂರು ಮತ್ತು ವೆಲ್ಲೂರಿನ ಸುಮಾರು 40 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ.

ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ, ಲೆಕ್ಕಕ್ಕೆ ಸಿಗದ ಹಣ ಅಕ್ರಮ ವರ್ಗಾವಣೆ ಮತ್ತು ಹೂಡಿಕೆಗಳಿಗೆ ಸಂಬಂಧಿಸಿದ ಹಲವಾರು ದಾಖಲೆಗಳು ಮತ್ತು ಡಿಜಿಟಲ್ ಸಾಕ್ಷ್ಯಗಳನ್ನು ತೆರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಶೋಧ ಕಾರ್ಯಾಚರಣೆ ವೇಳೆ ಕೆಲ ರಹಸ್ಯ ಮತ್ತು ಗುಪ್ತ ಸ್ಥಳಗಳ ಬಗ್ಗೆಯೋ ಅಧಿಕಾರಿಗಳಿಗೆ ಸುಳಿವು ಸಿಕ್ಕಿದೆ.

ಚೆನ್ನೈ, ಮಧುರೈ, ಕೊಯಮತ್ತೂರು ಮತ್ತು ವೆಲ್ಲೂರ್‌ನಲ್ಲಿ ನಡೆದ ಶೋಧಕಾರ್ಯದಲ್ಲಿ ಒಟ್ಟು 200 ಕೋಟಿಗೂ ಅಧಿಕ ಅಘೋಷಿತ ಆದಾಯಕ್ಕೆ ಸಂಬಂಧಿಸಿದ ದಾಖಲೆಗಳು, ನಗದು, ಆಭರಣ ಪತ್ತೆಯಾಗಿದೆ. 26 ಕೋಟಿ ನಗದು ಮತ್ತು 13 ಕೋಟಿ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಹಣ ಅಕ್ರಮ ವರ್ಗಾವಣೆ ಮತ್ತು ಹೂಡಿಕೆಗಳಿಗೆ ಸಂಬಂಧಿಸಿದ ದಾಖಲೆಗಳು, ಡಿಜಿಟಲ್ ಉಪಕರಣ ಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಕೆಲವು ಸಿನಿಮಾ ನಿರ್ಮಾಣ ಸಂಸ್ಥೆಗಳು ತೆರಿಗೆ ವಿನಾಯಿತಿ ಪಡೆಯಲು, ಸಿನಿಮಾದಿಂದ ಬಂದ ಆದಾಯವು ಕಡಿಮೆ ಎಂದು ತೋರಿಸಿದ್ದನ್ನು ಪತ್ತೆಹಚ್ಚಲಾಗಿದೆ.

ಅಕ್ರಮವಾಗಿ ಸಂಗ್ರಹಿಸಿದ ಅದಾಯವನ್ನು ಅಘೋಷಿತ ಹೂಡಿಕೆಗೆ ಮತ್ತು ಅಷಿಸಿದ ವಾವತಿಗೆ ಬಳಕೆ ಮಾಡಲಾಗಿದೆ. ಚಿತ್ರಮಂದಿರಗಳಿಂದ ದಾಖಲೆಗಳನ್ನು ನಿರ್ವಹಿಸದೆ ಹಣವನ್ನು ಸಂಗ್ರಹಿಸಿದೆ ಎಂದು ಸಿನಿಮಾ ವಿತರಕರಿಂದ ವಶಪಡಿಸಿಕೊಂಡ ದಾಖಲೆಗಳಿಂದ ತಿಳಿದುಬಂದಿದೆ. ‘ಚಿತ್ರಮಂದಿರಗಳಿಂದ ಕಡಿಮೆ ಆದಾಯ ಬಂದಿದೆ’ ಎಂದು ತೋರಿಸಲಾಗುತ್ತದೆ ಎಂದು ಆದಾಯ ಇಲಾಖೆ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

Published On - 11:18 pm, Tue, 9 August 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!