AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ನಿರ್ಮಾಪಕರು ವಿತರಕರ ಮನೆ ಮೇಲೆ ಐಟಿ ದಾಳಿ, 200 ಕೋಟಿಗೂ ಅಧಿಕ ಅಘೋಷಿತ ಆದಾಯ ಪತ್ತೆ

ಚೆನ್ನೈ, ಮಧುರೈ, ಕೊಯಮತ್ತೂರು ಮತ್ತು ವೆಲ್ಲೂರ್‌ನಲ್ಲಿ ನಡೆದ ಶೋಧಕಾರ್ಯದಲ್ಲಿ ಒಟ್ಟು 200 ಕೋಟಿಗೂ ಅಧಿಕ ಅಘೋಷಿತ ಆದಾಯಕ್ಕೆ ಸಂಬಂಧಿಸಿದ ದಾಖಲೆಗಳು, ನಗದು, ಆಭರಣ ಪತ್ತೆಯಾಗಿದೆ.

ತಮಿಳುನಾಡು: ನಿರ್ಮಾಪಕರು ವಿತರಕರ ಮನೆ ಮೇಲೆ ಐಟಿ ದಾಳಿ, 200 ಕೋಟಿಗೂ ಅಧಿಕ ಅಘೋಷಿತ ಆದಾಯ ಪತ್ತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 10, 2022 | 10:18 AM

Share

ತಮಿಳನಾಡು ಚಲನಚಿತ್ರೋದ್ಯಮಕ್ಕೆ ಸಂಬಂಧಿಸಿದ ಕೆಲವು ಚಿತ್ರ ನಿರ್ಮಾಪಕರು, ವಿತರಕರು ಮತ್ತು ಹಣಕಾಸುದಾರರ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ (Income Tax Department)  ಅಧಿಕಾರಿಗಳು ಆಗಸ್ಟ್ 2 ರಂದು  ದಾಳಿ ನಡೆಸಿದ್ದಾರೆ. ಚೆನ್ನೈ, ಮಧುರೈ, ಕೊಯಮತ್ತೂರು ಮತ್ತು ವೆಲ್ಲೂರಿನ ಸುಮಾರು 40 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ.

ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ, ಲೆಕ್ಕಕ್ಕೆ ಸಿಗದ ಹಣ ಅಕ್ರಮ ವರ್ಗಾವಣೆ ಮತ್ತು ಹೂಡಿಕೆಗಳಿಗೆ ಸಂಬಂಧಿಸಿದ ಹಲವಾರು ದಾಖಲೆಗಳು ಮತ್ತು ಡಿಜಿಟಲ್ ಸಾಕ್ಷ್ಯಗಳನ್ನು ತೆರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಶೋಧ ಕಾರ್ಯಾಚರಣೆ ವೇಳೆ ಕೆಲ ರಹಸ್ಯ ಮತ್ತು ಗುಪ್ತ ಸ್ಥಳಗಳ ಬಗ್ಗೆಯೋ ಅಧಿಕಾರಿಗಳಿಗೆ ಸುಳಿವು ಸಿಕ್ಕಿದೆ.

ಚೆನ್ನೈ, ಮಧುರೈ, ಕೊಯಮತ್ತೂರು ಮತ್ತು ವೆಲ್ಲೂರ್‌ನಲ್ಲಿ ನಡೆದ ಶೋಧಕಾರ್ಯದಲ್ಲಿ ಒಟ್ಟು 200 ಕೋಟಿಗೂ ಅಧಿಕ ಅಘೋಷಿತ ಆದಾಯಕ್ಕೆ ಸಂಬಂಧಿಸಿದ ದಾಖಲೆಗಳು, ನಗದು, ಆಭರಣ ಪತ್ತೆಯಾಗಿದೆ. 26 ಕೋಟಿ ನಗದು ಮತ್ತು 13 ಕೋಟಿ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಹಣ ಅಕ್ರಮ ವರ್ಗಾವಣೆ ಮತ್ತು ಹೂಡಿಕೆಗಳಿಗೆ ಸಂಬಂಧಿಸಿದ ದಾಖಲೆಗಳು, ಡಿಜಿಟಲ್ ಉಪಕರಣ ಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಕೆಲವು ಸಿನಿಮಾ ನಿರ್ಮಾಣ ಸಂಸ್ಥೆಗಳು ತೆರಿಗೆ ವಿನಾಯಿತಿ ಪಡೆಯಲು, ಸಿನಿಮಾದಿಂದ ಬಂದ ಆದಾಯವು ಕಡಿಮೆ ಎಂದು ತೋರಿಸಿದ್ದನ್ನು ಪತ್ತೆಹಚ್ಚಲಾಗಿದೆ.

ಅಕ್ರಮವಾಗಿ ಸಂಗ್ರಹಿಸಿದ ಅದಾಯವನ್ನು ಅಘೋಷಿತ ಹೂಡಿಕೆಗೆ ಮತ್ತು ಅಷಿಸಿದ ವಾವತಿಗೆ ಬಳಕೆ ಮಾಡಲಾಗಿದೆ. ಚಿತ್ರಮಂದಿರಗಳಿಂದ ದಾಖಲೆಗಳನ್ನು ನಿರ್ವಹಿಸದೆ ಹಣವನ್ನು ಸಂಗ್ರಹಿಸಿದೆ ಎಂದು ಸಿನಿಮಾ ವಿತರಕರಿಂದ ವಶಪಡಿಸಿಕೊಂಡ ದಾಖಲೆಗಳಿಂದ ತಿಳಿದುಬಂದಿದೆ. ‘ಚಿತ್ರಮಂದಿರಗಳಿಂದ ಕಡಿಮೆ ಆದಾಯ ಬಂದಿದೆ’ ಎಂದು ತೋರಿಸಲಾಗುತ್ತದೆ ಎಂದು ಆದಾಯ ಇಲಾಖೆ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

Published On - 11:18 pm, Tue, 9 August 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್