AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಸಲ ಕಪ್​ ನಮ್ದೇ’ ಎಂದ ರಜನಿಕಾಂತ್; ವರ್ಲ್ಡ್​ ಕಪ್​ ಫೈನಲ್​ ಬಗ್ಗೆ ತಲೈವಾ ಭವಿಷ್ಯವಾಣಿ

ನ್ಯೂಜಿಲೆಂಡ್​ ವರ್ಸಸ್​ ಭಾರತದ ಪಂದ್ಯ ನೋಡಲು ರಜನಿಕಾಂತ್ ಅವರು ಮುಂಬೈಗೆ ತೆರಳಿದ್ದರು. ಸೆಮಿ ಫೈನಲ್​​ನಲ್ಲಿ ಭಾರತದ ಗೆಲುವನ್ನು ಅವರು ಸಂಭ್ರಮಿಸಿದರು. ಪಂದ್ಯ ಮುಗಿಸಿ ಚೆನ್ನೈಗೆ ಮರಳಿದ ಬಳಿಕ ಮಾಧ್ಯಮಗಳ ಜೊತೆ ರಜನಿಕಾಂತ್​ ಮಾತನಾಡಿದ್ದಾರೆ. ಫೈನಲ್​ನಲ್ಲಿ ಏನಾಗಲಿದೆ ಎಂದು ರಜನಿಕಾಂತ್​ ಭವಿಷ್ಯ ನುಡಿದಿದ್ದಾರೆ.

‘ಈ ಸಲ ಕಪ್​ ನಮ್ದೇ’ ಎಂದ ರಜನಿಕಾಂತ್; ವರ್ಲ್ಡ್​ ಕಪ್​ ಫೈನಲ್​ ಬಗ್ಗೆ ತಲೈವಾ ಭವಿಷ್ಯವಾಣಿ
ರಜನಿಕಾಂತ್​
Follow us
ಮದನ್​ ಕುಮಾರ್​
|

Updated on: Nov 17, 2023 | 11:51 AM

ವಿಶ್ವಕಪ್​ ಕ್ರಿಕೆಟ್​ನಲ್ಲಿ (World Cup 2023) ಟೀಮ್​ ಇಂಡಿಯಾ ಸೋಲಿಲ್ಲದೇ ಮುನ್ನುಗ್ಗಿದೆ. ಎಲ್ಲ ಪಂದ್ಯಗಳನ್ನೂ ಗೆದ್ದು ಫೈನಲ್​ ತಲುಪಿದೆ. ಈ ಬಾರಿ ಭಾರತಕ್ಕೆ ವರ್ಲ್ಡ್​ ಕಪ್​ ಸಿಗಲೇ ಬೇಕು ಎಂದು ಎಲ್ಲರೂ ಆಸೆಪಡುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಟೀಮ್​ ಇಂಡಿಯಾದ ಬೆನ್ನು ತಟ್ಟುತ್ತಿದ್ದಾರೆ. ಸೆಮಿ ಫೈನಲ್ ಪಂದ್ಯವನ್ನು ನೋಡಲು ವಿಕ್ಕಿ ಕೌಶಲ್​, ರಜನಿಕಾಂತ್​ (Rajinikanth), ರಣಬೀರ್​ ಕಪೂರ್​, ಶಾಹಿದ್​ ಕಪೂರ್​ ಸೇರಿದಂತೆ ಅನೇಕರು ಬಂದಿದ್ದರು. ಅವರಿಲ್ಲರಿಗೂ ರೋಹಿತ್​ ಶರ್ಮಾ ಪಡೆ ನಿರಾಸೆ ಮಾಡಿಲ್ಲ. ಈಗ ಎಲ್ಲರ ಕಣ್ಣು ಫೈನಲ್​ (World Cup 2023 Final) ಪಂದ್ಯದ ಮೇಲಿದೆ. ಫೈನಲ್​ನಲ್ಲಿ ಏನಾಗಲಿದೆ ಎಂದು ರಜನಿಕಾಂತ್​ ಭವಿಷ್ಯ ನುಡಿದಿದ್ದಾರೆ.

ನ್ಯೂಜಿಲೆಂಡ್​ ವರ್ಸಸ್​ ಭಾರತದ ಪಂದ್ಯ ನೋಡಲು ರಜನಿಕಾಂತ್ ಅವರು ಮುಂಬೈಗೆ ತೆರಳಿದ್ದರು. ಅವರ ಜೊತೆ ಪತ್ನಿ ಲತಾ ಕೂಡ ಇದ್ದರು. ಸೆಮಿ ಫೈನಲ್​​ನಲ್ಲಿ ಭಾರತದ ಗೆಲುವನ್ನು ಅವರು ಸಂಭ್ರಮಿಸಿದ್ದಾರೆ. ಪಂದ್ಯ ಮುಗಿಸಿ ಚೆನ್ನೈಗೆ ಮರಳಿದ ಬಳಿಕ ಮಾಧ್ಯಮಗಳ ಜೊತೆ ರಜನಿಕಾಂತ್​ ಮಾತನಾಡಿದ್ದಾರೆ. ‘ಮೊದಲಿಗೆ ನನಗೆ ನರ್ವಸ್​ ಆಗಿತ್ತು. ಒಂದೂವರೆ ಗಂಟೆಗಳ ಕಾಲ ನರ್ವಸ್​ ಆಗಿದ್ದೆ. ನಂತರ ನ್ಯೂಜಿಲೆಂಡ್​ ವಿಕೆಟ್​ ಪತನವಾಗಲು ಆರಂಭಿಸಿದಾಗ ಎಲ್ಲವೂ ಸರಿ ಆಯಿತು. ನನಗೆ ಶೇಕಡ ನೂರರಷ್ಟು ಭರವಸೆ ಇದೆ. ಈ ಸಲ ಕಪ್​ ನಮ್ದೇ’ ಎಂದಿದ್ದಾರೆ ರಜನಿಕಾಂತ್​.

ಇದನ್ನೂ ಓದಿ: ರಜನಿಕಾಂತ್​ ನಟನೆಯ ‘ಲಾಲ್​ ಸಲಾಂ’ ಚಿತ್ರದ ಬಿಡುಗಡೆ ದಿನಾಂಕದಲ್ಲಿ ಇಲ್ಲ ಬದಲಾವಣೆ

ಭಾರತದ ಟೀಮ್​ ನಿಜಕ್ಕೂ ಪ್ರಬಲವಾಗಿದೆ. ಬ್ಯಾಟಿಂಗ್​, ಬೌಲಿಂಗ್​, ಫೀಲ್ಡಿಂಗ್​ ಎಲ್ಲ ವಿಭಾಗದಲ್ಲೂ ಸರಿಸಾಟಿಯಿಲ್ಲದ ಪರ್ಫಾರ್ಮೆನ್ಸ್​ ನೀಡುತ್ತಿದ್ದಾರೆ. ಇದರಿಂದ ಕ್ರಿಕೆಟ್​ ಪ್ರೇಮಿಗಳಿಗೆ ಟೀಮ್​ ಇಂಡಿಯಾ ಮೇಲೆ ನೂರಕ್ಕೆ ನೂರರಷ್ಟು ಭರವಸೆ ಮೂಡಿದೆ. ಆಸ್ಟ್ರೇಲಿಯಾ ಕೂಡ ಪ್ರಬಲ ತಂಡವೇ ಆಗಿದ್ದರೂ ಇಂಡಿಯಾಗೆ ಜಯ ಖಚಿತ ಎಂದು ನಿರೀಕ್ಷೆ ಇಡಲಾಗಿದೆ. ನವೆಂಬರ್​ 19ರಂದು ನಡೆಯಲಿರುವ ಪಂದ್ಯ ನೋಡಲು ಅನೇಕ ಸೆಲೆಬ್ರಿಟಿಗಳು ಕೂಡ ಅಹಮದಾಬಾದ್​ಗೆ ಆಗಮಿಸಲಿದ್ದಾರೆ.

ಇದನ್ನೂ ಓದಿ: ‘ನನ್ನ ಗುರು ಜೊತೆ ಮತ್ತೆ ಕೆಲಸ ಮಾಡುತ್ತಿದ್ದೇನೆ’: ಅಮಿತಾಭ್​ ಬಗ್ಗೆ ರಜನಿಕಾಂತ್​ ಗೌರವದ ಮಾತು

ಸಿನಿಮಾ ವಿಚಾರಕ್ಕೆ ಬರುವುದಾದರೆ ರಜನಿಕಾಂತ್​ ಅವರು ಈ ವರ್ಷ ‘ಜೈಲರ್​’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಅವರ ಖ್ಯಾತಿ ಇನ್ನಷ್ಟು ಹೆಚ್ಚಾಗಿದೆ. ಹೊಸ ಹೊಸ ಸಿನಿಮಾಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ. ಅವರು ನಟಿಸಿರುವ ‘ಲಾಲ್​ ಸಲಾಂ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ರಜನಿ ಅಭಿನಯದ 170ನೇ ಸಿನಿಮಾದ ಕೆಲಸಗಳು ಕೂಡ ಭರದಿಂದ ಸಾಗುತ್ತಿವೆ. ಇದರ ನಡುವೆಯೂ ಸಮಯ ಮಾಡಿಕೊಂಡು ಅವರು ಕ್ರಿಕೆಟ್​ ನೋಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ