AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಸಲ ಕಪ್​ ನಮ್ದೇ’ ಎಂದ ರಜನಿಕಾಂತ್; ವರ್ಲ್ಡ್​ ಕಪ್​ ಫೈನಲ್​ ಬಗ್ಗೆ ತಲೈವಾ ಭವಿಷ್ಯವಾಣಿ

ನ್ಯೂಜಿಲೆಂಡ್​ ವರ್ಸಸ್​ ಭಾರತದ ಪಂದ್ಯ ನೋಡಲು ರಜನಿಕಾಂತ್ ಅವರು ಮುಂಬೈಗೆ ತೆರಳಿದ್ದರು. ಸೆಮಿ ಫೈನಲ್​​ನಲ್ಲಿ ಭಾರತದ ಗೆಲುವನ್ನು ಅವರು ಸಂಭ್ರಮಿಸಿದರು. ಪಂದ್ಯ ಮುಗಿಸಿ ಚೆನ್ನೈಗೆ ಮರಳಿದ ಬಳಿಕ ಮಾಧ್ಯಮಗಳ ಜೊತೆ ರಜನಿಕಾಂತ್​ ಮಾತನಾಡಿದ್ದಾರೆ. ಫೈನಲ್​ನಲ್ಲಿ ಏನಾಗಲಿದೆ ಎಂದು ರಜನಿಕಾಂತ್​ ಭವಿಷ್ಯ ನುಡಿದಿದ್ದಾರೆ.

‘ಈ ಸಲ ಕಪ್​ ನಮ್ದೇ’ ಎಂದ ರಜನಿಕಾಂತ್; ವರ್ಲ್ಡ್​ ಕಪ್​ ಫೈನಲ್​ ಬಗ್ಗೆ ತಲೈವಾ ಭವಿಷ್ಯವಾಣಿ
ರಜನಿಕಾಂತ್​
ಮದನ್​ ಕುಮಾರ್​
|

Updated on: Nov 17, 2023 | 11:51 AM

Share

ವಿಶ್ವಕಪ್​ ಕ್ರಿಕೆಟ್​ನಲ್ಲಿ (World Cup 2023) ಟೀಮ್​ ಇಂಡಿಯಾ ಸೋಲಿಲ್ಲದೇ ಮುನ್ನುಗ್ಗಿದೆ. ಎಲ್ಲ ಪಂದ್ಯಗಳನ್ನೂ ಗೆದ್ದು ಫೈನಲ್​ ತಲುಪಿದೆ. ಈ ಬಾರಿ ಭಾರತಕ್ಕೆ ವರ್ಲ್ಡ್​ ಕಪ್​ ಸಿಗಲೇ ಬೇಕು ಎಂದು ಎಲ್ಲರೂ ಆಸೆಪಡುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಟೀಮ್​ ಇಂಡಿಯಾದ ಬೆನ್ನು ತಟ್ಟುತ್ತಿದ್ದಾರೆ. ಸೆಮಿ ಫೈನಲ್ ಪಂದ್ಯವನ್ನು ನೋಡಲು ವಿಕ್ಕಿ ಕೌಶಲ್​, ರಜನಿಕಾಂತ್​ (Rajinikanth), ರಣಬೀರ್​ ಕಪೂರ್​, ಶಾಹಿದ್​ ಕಪೂರ್​ ಸೇರಿದಂತೆ ಅನೇಕರು ಬಂದಿದ್ದರು. ಅವರಿಲ್ಲರಿಗೂ ರೋಹಿತ್​ ಶರ್ಮಾ ಪಡೆ ನಿರಾಸೆ ಮಾಡಿಲ್ಲ. ಈಗ ಎಲ್ಲರ ಕಣ್ಣು ಫೈನಲ್​ (World Cup 2023 Final) ಪಂದ್ಯದ ಮೇಲಿದೆ. ಫೈನಲ್​ನಲ್ಲಿ ಏನಾಗಲಿದೆ ಎಂದು ರಜನಿಕಾಂತ್​ ಭವಿಷ್ಯ ನುಡಿದಿದ್ದಾರೆ.

ನ್ಯೂಜಿಲೆಂಡ್​ ವರ್ಸಸ್​ ಭಾರತದ ಪಂದ್ಯ ನೋಡಲು ರಜನಿಕಾಂತ್ ಅವರು ಮುಂಬೈಗೆ ತೆರಳಿದ್ದರು. ಅವರ ಜೊತೆ ಪತ್ನಿ ಲತಾ ಕೂಡ ಇದ್ದರು. ಸೆಮಿ ಫೈನಲ್​​ನಲ್ಲಿ ಭಾರತದ ಗೆಲುವನ್ನು ಅವರು ಸಂಭ್ರಮಿಸಿದ್ದಾರೆ. ಪಂದ್ಯ ಮುಗಿಸಿ ಚೆನ್ನೈಗೆ ಮರಳಿದ ಬಳಿಕ ಮಾಧ್ಯಮಗಳ ಜೊತೆ ರಜನಿಕಾಂತ್​ ಮಾತನಾಡಿದ್ದಾರೆ. ‘ಮೊದಲಿಗೆ ನನಗೆ ನರ್ವಸ್​ ಆಗಿತ್ತು. ಒಂದೂವರೆ ಗಂಟೆಗಳ ಕಾಲ ನರ್ವಸ್​ ಆಗಿದ್ದೆ. ನಂತರ ನ್ಯೂಜಿಲೆಂಡ್​ ವಿಕೆಟ್​ ಪತನವಾಗಲು ಆರಂಭಿಸಿದಾಗ ಎಲ್ಲವೂ ಸರಿ ಆಯಿತು. ನನಗೆ ಶೇಕಡ ನೂರರಷ್ಟು ಭರವಸೆ ಇದೆ. ಈ ಸಲ ಕಪ್​ ನಮ್ದೇ’ ಎಂದಿದ್ದಾರೆ ರಜನಿಕಾಂತ್​.

ಇದನ್ನೂ ಓದಿ: ರಜನಿಕಾಂತ್​ ನಟನೆಯ ‘ಲಾಲ್​ ಸಲಾಂ’ ಚಿತ್ರದ ಬಿಡುಗಡೆ ದಿನಾಂಕದಲ್ಲಿ ಇಲ್ಲ ಬದಲಾವಣೆ

ಭಾರತದ ಟೀಮ್​ ನಿಜಕ್ಕೂ ಪ್ರಬಲವಾಗಿದೆ. ಬ್ಯಾಟಿಂಗ್​, ಬೌಲಿಂಗ್​, ಫೀಲ್ಡಿಂಗ್​ ಎಲ್ಲ ವಿಭಾಗದಲ್ಲೂ ಸರಿಸಾಟಿಯಿಲ್ಲದ ಪರ್ಫಾರ್ಮೆನ್ಸ್​ ನೀಡುತ್ತಿದ್ದಾರೆ. ಇದರಿಂದ ಕ್ರಿಕೆಟ್​ ಪ್ರೇಮಿಗಳಿಗೆ ಟೀಮ್​ ಇಂಡಿಯಾ ಮೇಲೆ ನೂರಕ್ಕೆ ನೂರರಷ್ಟು ಭರವಸೆ ಮೂಡಿದೆ. ಆಸ್ಟ್ರೇಲಿಯಾ ಕೂಡ ಪ್ರಬಲ ತಂಡವೇ ಆಗಿದ್ದರೂ ಇಂಡಿಯಾಗೆ ಜಯ ಖಚಿತ ಎಂದು ನಿರೀಕ್ಷೆ ಇಡಲಾಗಿದೆ. ನವೆಂಬರ್​ 19ರಂದು ನಡೆಯಲಿರುವ ಪಂದ್ಯ ನೋಡಲು ಅನೇಕ ಸೆಲೆಬ್ರಿಟಿಗಳು ಕೂಡ ಅಹಮದಾಬಾದ್​ಗೆ ಆಗಮಿಸಲಿದ್ದಾರೆ.

ಇದನ್ನೂ ಓದಿ: ‘ನನ್ನ ಗುರು ಜೊತೆ ಮತ್ತೆ ಕೆಲಸ ಮಾಡುತ್ತಿದ್ದೇನೆ’: ಅಮಿತಾಭ್​ ಬಗ್ಗೆ ರಜನಿಕಾಂತ್​ ಗೌರವದ ಮಾತು

ಸಿನಿಮಾ ವಿಚಾರಕ್ಕೆ ಬರುವುದಾದರೆ ರಜನಿಕಾಂತ್​ ಅವರು ಈ ವರ್ಷ ‘ಜೈಲರ್​’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಅವರ ಖ್ಯಾತಿ ಇನ್ನಷ್ಟು ಹೆಚ್ಚಾಗಿದೆ. ಹೊಸ ಹೊಸ ಸಿನಿಮಾಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ. ಅವರು ನಟಿಸಿರುವ ‘ಲಾಲ್​ ಸಲಾಂ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ರಜನಿ ಅಭಿನಯದ 170ನೇ ಸಿನಿಮಾದ ಕೆಲಸಗಳು ಕೂಡ ಭರದಿಂದ ಸಾಗುತ್ತಿವೆ. ಇದರ ನಡುವೆಯೂ ಸಮಯ ಮಾಡಿಕೊಂಡು ಅವರು ಕ್ರಿಕೆಟ್​ ನೋಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ