AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೂಲಿ’, ‘ವಾರ್ 2’ ಎರಡನೇ ದಿನದ ಗಳಿಕೆ ಇಷ್ಟೊಂದಾ? ಅಬ್ಬಬ್ಬಾ ಊಹಿಸಲೂ ಸಾಧ್ಯವಿಲ್ಲ

ಆಗಸ್ಟ್ 14ರಂದು ಬಿಡುಗಡೆಯಾದ ‘ಕೂಲಿ’ ಮತ್ತು ‘ವಾರ್ 2’ ಚಿತ್ರಗಳು ಎರಡು ದಿನಗಳಲ್ಲಿ 100 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿವೆ. ರಜನಿಕಾಂತ್ ನಟಿಸಿರುವ ‘ಕೂಲಿ’ ಮಿಶ್ರ ಪ್ರತಿಕ್ರಿಯೆ ಪಡೆದಿತ್ತು. ‘ವಾರ್ 2’ ಸಿನಿಮಾದ ಕಥೆ ಕೂಡ ಅಷ್ಟೇ. ಇವು ಅಭಿಮಾನಿಗಳ ಬೆಂಬಲದಿಂದ ಭರ್ಜರಿ ಗಳಿಕೆ ಕಂಡಿವೆ.

‘ಕೂಲಿ’, ‘ವಾರ್ 2’ ಎರಡನೇ ದಿನದ ಗಳಿಕೆ ಇಷ್ಟೊಂದಾ? ಅಬ್ಬಬ್ಬಾ ಊಹಿಸಲೂ ಸಾಧ್ಯವಿಲ್ಲ
ಕೂಲಿ ಕಲೆಕ್ಷನ್
ರಾಜೇಶ್ ದುಗ್ಗುಮನೆ
|

Updated on: Aug 16, 2025 | 6:32 AM

Share

‘ಕೂಲಿ’ (Coolie Collection) ಹಾಗೂ ‘ವಾರ್ 2’ ಸಿನಿಮಾಗಳು ಸ್ವತಂತ್ರ್ಯ ದಿನಾಚರಣೆ ಪ್ರಯುಕ್ತ ಆಗಸ್ಟ್ 14ರಂದು ರಿಲೀಸ್ ಆದವು. ಈ ಎರಡೂ ಸಿನಿಮಾಗಳ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಎರಡೂ ಸಿನಿಮಾಗೆ ಸಿಕ್ಕಿದ್ದು ಮಿಶ್ರ ಪ್ರತಿಕ್ರಿಯೆ ಮಾತ್ರ. ಆದಾಗ್ಯೂ ಸಿನಿಮಾಗಳು ನೂರು ಕೋಟಿ ರೂಪಾಯಿ ಕ್ಷಬ್ ಸೇರಿವೆ. ಅದು ಕೂಡ ಕೇವಲ ಎರಡು ದಿನಕ್ಕೆ ಅನ್ನೋದು ವಿಶೇಷ. ಆ ಬಗ್ಗೆ ಇಲ್ಲಿದೆ ಮಾಹಿತಿ.

‘ಕೂಲಿ’ ಸಿನಿಮಾದಲ್ಲಿ ರಜನಿಕಾಂತ್ ನಟಿಸಿದ್ದಾರೆ. ಈ ಸಿನಿಮಾದಲ್ಲಿ ರಜನಿಕಾಂತ್ ಜೊತೆ ಆಮಿರ್ ಖಾನ್, ಉಪೇಂದ್ರ ಸೇರಿದಂತೆ ಹಲವು ಸ್ಟಾರ್ ಹೀರೋಗಳು ಇದ್ದಾರೆ. ಈ ಕಾರಣದಿಂದಲೇ ಸಿನಿಮಾ ಎಲ್ಲರ ಗಮನ ಸೆಳೆಯುವ ನಿರೀಕ್ಷೆ ಇತ್ತು. ಆದರೆ, ನಿರೀಕ್ಷೆಯನ್ನೂ ಸಿನಿಮಾ ತಕ್ಕ ಮಟ್ಟಿಗೆ ಮಾತ್ರ ತಲುಪಿದೆ. ಆಗಸ್ಟ್ 15ರ ಕಲೆಕ್ಷನ್ ಲೆಕ್ಕ ಬಂದಿದ್ದು ಎಲ್ಲರೂ ಹೌಹಾರಿದ್ದಾರೆ.

ಈ ಸಿನಿಮಾ ಮೊದಲ ದಿನ 65 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ 53.50 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ದುಬಾರಿ ಟಿಕೆಟ್ ದರ, ರಜನಿಕಾಂತ್ ಅಭಿಮಾನಿವರ್ಗದ ಕಾರಣಕ್ಕೆ ಸಿನಿಮಾ ಇಷ್ಟು ಮಟ್ಟಕ್ಕೆ ಕಲೆಕ್ಷನ್ ಮಾಡಿದೆ. ಹೀಗೆಯೇ ಮುಂದುವರಿದರೆ ಸಿನಿಮಾ ಎರಡೇ ದಿನಕ್ಕೆ 200 ಕೋಟಿ ರೂಪಾಯಿ ಕ್ಲಬ್ ಸೇರಲಿದೆ.

ಇದನ್ನೂ ಓದಿ
Image
ಒಬ್ಬರದ್ದು ಕಣ್ಣೀರು, ಇನ್ನೊಬ್ಬರದ್ದು ಹರಟೆ; ಒಂದೇ ಬ್ಯಾರಕ್​ನಲ್ಲಿ ಗ್ಯಾಂಗ
Image
ಫ್ಲಾಪ್ ಆದರೂ ಭಾರೀ ಗಳಿಕೆ ಮಾಡಿದ ‘ವಾರ್ 2’; ಕೈ ಕೊಟ್ಟ ಹಿಂದಿ ಮಂದಿ
Image
ರಜನಿ ಅಬ್ಬರಕ್ಕೆ ಬಾಕ್ಸ್ ಆಫೀಸ್ ಉಡೀಸ್; ‘ಕೂಲಿ’ ಮೊದಲ ದಿನದ ಗಳಿಕೆ ಎಷ್ಟು?
Image
ಗೌತಮ್ ಕೈಯಲ್ಲಿ ತಾಯಿಯ ಹಿಸ್ಟರಿ; ದುರ್ಗಾಗೆ ಬಂತು ಅಕ್ಕನ ನೆನಪು

‘ವಾರ್ 2’ ಚಿತ್ರಕ್ಕೆ ಅನೇಕರು ಹೀನಾಯ ವಿಮರ್ಶೆ ನೀಡಿದ್ದಾರೆ. ಆದರೆ, ವಿಮರ್ಶೆ ಬಗ್ಗೆ ಯಾರೂ ಅಷ್ಟಾಗಿ ತಲೆಕೆಡಿಸಿಕೊಂಡಂತೆ ಕಾಣಿಸುತ್ತಿಲ್ಲ. ಜೂನಿಯರ್ ಎನ್​ಟಿಆರ್ ಅಭಿಮಾನಿಗಳು ಥಿಯೇಟರ್​ಗೆ ನುಗ್ಗುತ್ತಿದ್ದಾರೆ. ಮೊದಲ ದಿನಕ್ಕಿಂತ ಹೆಚ್ಚಿನ ಕಲೆಕ್ಷನ್ ಮಾಡಿದೆ. ಈ ಸಿನಿಮಾದ ಗಳಿಕೆ ಮೊದಲ ದಿನ 51.5 ಕೋಟಿ ರೂಪಾಯಿ ಇತ್ತು. ಎರಡನೇ ದಿನಕ್ಕೆ ಅದು 56.50 ಕೋಟಿ ರೂಪಾಯಿಗೆ ಏರಿಕೆ ಕಂಡಿದೆ.

ಇದನ್ನೂ ಓದಿ: ‘ವಾರ್ 2’ vs ‘ಕೂಲಿ’; ಎರಡು ಬಿಗ್ ಬಜೆಟ್ ಚಿತ್ರಗಳಲ್ಲಿ ಮೊದಲ ದಿನ ಗೆದ್ದವರು ಯಾರು?

ಸದ್ಯ ‘ವಾರ್ 2’ ಚಿತ್ರದ ಒಟ್ಟಾರೆ ಗಳಿಕೆ 108 ಕೋಟಿ ರೂಪಾಯಿ ಆಗಿದೆ. ಕಳಪೆ ವಿಮರ್ಶೆ ಮಧ್ಯೆಯೂ ಸಿನಿಮಾ ಈ ರೀತಿಯ ಅಬ್ಬರದ ಗಳಿಕೆ ಮಾಡುತ್ತಿರುವುದು ವಿಶೇಷ. ಹೀಗೆಯೇ ಮುಂದುವರಿದರೆ ಈ ಚಿತ್ರವೂ ಅನಾಯಾಸವಾಗಿ 200 ಕೋಟಿ ಕ್ಲಬ್ ಸೇರಲಿದೆ. ಜೂನಿಯರ್ ಎನ್​ಟಿಆರ್, ಹೃತಿಕ್, ಕಿಯಾರಾ ಸಿನಿಮಾದ ಭಾಗವಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ