AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಚಿತ್ರಕ್ಕೆ ಇದೆಂಥಾ ಸ್ಥಿತಿ

‘ಇಂಡಿಯನ್ 2’ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 100 ಕೋಟಿ ರೂಪಾಯಿ ತಲುಪಲು ವಿಫಲವಾಗಿದೆ. ಈ ಚಿತ್ರಕ್ಕೆ ಮತ್ತೊಂದು ದುಸ್ಥಿತಿ ಬಂದೊದಗಿದೆ. ಸಿನಿಮಾ ರಿಲೀಸ್ ಆಗಿ ಇನ್ನೂ ಒಂದು ತಿಂಗಳು ಕಳೆದಿಲ್ಲ. ಆಗಲೇ ಚಿತ್ರ ಒಟಿಟಿಗೆ ಕಾಲಿಡುತ್ತಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.

ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಚಿತ್ರಕ್ಕೆ ಇದೆಂಥಾ ಸ್ಥಿತಿ
ಕಮಲ್ ಹಾಸನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 05, 2024 | 10:50 AM

Share

ಎಸ್​. ಶಂಕರ್ ನಿರ್ದೇಶನದ ‘ಇಂಡಿಯನ್ 2’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಹೀನಾಯ ಸೋಲು ಕಂಡಿದೆ. ಶಂಕರ್ ಅವರ ವೃತ್ತಿ ಜೀವನದಲ್ಲಿ ಸೋಲಿನ ಪಟ್ಟಿಯಲ್ಲಿ ಈ ಸಿನಿಮಾ ಸೇರಿಕೊಂಡಿದೆ. ಸಾಮಾನ್ಯವಾಗಿ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸೋತಿದೆ ಎಂದಾಗ ಅದನ್ನು ಆದಷ್ಟು ಬೇಗ ಒಟಿಟಿಗೆ ತರಲಾಗುತ್ತದೆ. ಈಗ ‘ಇಂಡಿಯನ್ 2’ ವಿಚಾರದಲ್ಲಿ ಆಗಿರೋದು ಕೂಡ ಅದೇ. ಈ ಸಿನಿಮಾ ಶೀಘ್ರವೇ ನೆಟ್​ಫ್ಲಿಕ್ಸ್ ಮೂಲಕ  ಒಟಿಟಿಗೆ ಕಾಲಿಡುತ್ತಿದೆ. ಇದು ಕಮಲ್ ಹಾಸನ್ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

‘ಇಂಡಿಯನ್’ ಸಿನಿಮಾ 1966ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಎನಿಸಿಕೊಂಡಿತು. ಈ ಚಿತ್ರಕ್ಕೆ ಶಂಕರ್ ಅವರು 28 ವರ್ಷಗಳ ಬಳಿಕ ಸೀಕ್ವೆಲ್ ತಂದರು. ‘ಇಂಡಿಯನ್ 2 ಸಿನಿಮಾ ಜುಲೈ 12ರಂದು ಬಿಡುಗಡೆ ಆಯಿತು. ಈಗ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳ ಒಳಗಾಗಿ ಒಟಿಟಿಗೆ ಬರುತ್ತಿದೆ. ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

ನೆಟ್​ಫ್ಲಿಕ್ಸ್ ಕಡೆಯಿಂದ ಘೋಷಣೆ ಆಗಿದೆ. ತಮಿಳಿನ ಜೊತೆಗೆ, ತೆಲುಗು, ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಒಟಿಟಿಗೆ ರಿಲೀಸ್ ಆಗಲಿದೆ. ಈ ವಿಷಯ ನೋಡಿದ ಬಳಿಕ ಸಿನಿಮಾ ಯಾವ ದುಸ್ಥಿತಿಗೆ ತಲುಪಿತ್ತು ಅನ್ನೋದು ಪಕ್ಕಾ ಆಗಿದೆ.

ಈ ಸಿನಿಮಾದ ಅವಧಿ ಈ ಮೊದಲು 3 ಗಂಟೆ ಇತ್ತು. ಆ ಬಳಿಕ ಚಿತ್ರದ ಅವಧಿಗೆ ಎಲ್ಲರೂ ಟೀಕೆ ವ್ಯಕ್ಯಪಡಿಸಿದರು. ಹೀಗಾಗಿ ಸಿನಿಮಾದ ಅವಧಿಗೆ 20 ನಿಮಿಷ ಕತ್ತರಿ ಹಾಕಿ ಅದನ್ನು 2 ಗಂಟೆ 40 ನಿಮಿಷಕ್ಕೆ ಇಳಿಕೆ ಮಾಡಲಾಯಿತು. ಕಮಲ್ ಹಾಸನ್ ಅವರು ಸೇನಾಪತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಮಲ್ ಹಾಸನ್ ಜೊತೆ ಸಿದ್ದಾರ್ಥ್, ಎಸ್​ಜೆ ಸೂರ್ಯ, ಬಾಬಿ ಸಿಂಹ, ರಕುಲ್ ಪ್ರೀತ್ ಸಿಂಗ್ ಮೊದಲಾದವರು ನಟಿಸಿದ್ದಾರೆ.

ಇದನ್ನೂ ಓದಿ: ‘ಕಮಲ್ ಹಾಸನ್ ಸಿನಿಮಾ ಮುಳುಗಿದ ಹಡಗು’; ಮೊದಲ ದಿನವೇ ನೆಲಕಚ್ಚಿದ ‘ಇಂಡಿಯನ್ 2’ ಚಿತ್ರ

ಈ ಚಿತ್ರದ ಕಥೆ ತುಂಬಾನೇ ಹಳೆಯ ಫಾರ್ಮ್ಯಾಟ್ ಹೊಂದಿದೆ. ‘ಇಂಡಿಯನ್ 2’ ಸಿನಿಮಾ ರಿಲೀಸ್ ಆಗಿ ಸೋತರೂ ಈ ಚಿತ್ರಕ್ಕೆ ಮೂರನೇ ಪಾರ್ಟ್ ಬರಲಿದೆ ಎನ್ನುವ ಸುದ್ದಿ ಹರಿದಾಡಿದೆ. ಆದರೆ, ಎರಡನೇ ಸಿನಿಮಾಗೆ ಸಿಕ್ಕ ರೆಸ್ಪಾನ್ಸ್ ನೋಡಿ ನಿರ್ಮಾಪಕರು ಮೂರನೇ ಪಾರ್ಟ್ ಮಾಡೋದು ಅನುಮಾನ ಎಂದೇ ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ