AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಚಿತ್ರಕ್ಕೆ ಇದೆಂಥಾ ಸ್ಥಿತಿ

‘ಇಂಡಿಯನ್ 2’ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 100 ಕೋಟಿ ರೂಪಾಯಿ ತಲುಪಲು ವಿಫಲವಾಗಿದೆ. ಈ ಚಿತ್ರಕ್ಕೆ ಮತ್ತೊಂದು ದುಸ್ಥಿತಿ ಬಂದೊದಗಿದೆ. ಸಿನಿಮಾ ರಿಲೀಸ್ ಆಗಿ ಇನ್ನೂ ಒಂದು ತಿಂಗಳು ಕಳೆದಿಲ್ಲ. ಆಗಲೇ ಚಿತ್ರ ಒಟಿಟಿಗೆ ಕಾಲಿಡುತ್ತಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.

ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಚಿತ್ರಕ್ಕೆ ಇದೆಂಥಾ ಸ್ಥಿತಿ
ಕಮಲ್ ಹಾಸನ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Aug 05, 2024 | 10:50 AM

ಎಸ್​. ಶಂಕರ್ ನಿರ್ದೇಶನದ ‘ಇಂಡಿಯನ್ 2’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಹೀನಾಯ ಸೋಲು ಕಂಡಿದೆ. ಶಂಕರ್ ಅವರ ವೃತ್ತಿ ಜೀವನದಲ್ಲಿ ಸೋಲಿನ ಪಟ್ಟಿಯಲ್ಲಿ ಈ ಸಿನಿಮಾ ಸೇರಿಕೊಂಡಿದೆ. ಸಾಮಾನ್ಯವಾಗಿ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸೋತಿದೆ ಎಂದಾಗ ಅದನ್ನು ಆದಷ್ಟು ಬೇಗ ಒಟಿಟಿಗೆ ತರಲಾಗುತ್ತದೆ. ಈಗ ‘ಇಂಡಿಯನ್ 2’ ವಿಚಾರದಲ್ಲಿ ಆಗಿರೋದು ಕೂಡ ಅದೇ. ಈ ಸಿನಿಮಾ ಶೀಘ್ರವೇ ನೆಟ್​ಫ್ಲಿಕ್ಸ್ ಮೂಲಕ  ಒಟಿಟಿಗೆ ಕಾಲಿಡುತ್ತಿದೆ. ಇದು ಕಮಲ್ ಹಾಸನ್ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

‘ಇಂಡಿಯನ್’ ಸಿನಿಮಾ 1966ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಎನಿಸಿಕೊಂಡಿತು. ಈ ಚಿತ್ರಕ್ಕೆ ಶಂಕರ್ ಅವರು 28 ವರ್ಷಗಳ ಬಳಿಕ ಸೀಕ್ವೆಲ್ ತಂದರು. ‘ಇಂಡಿಯನ್ 2 ಸಿನಿಮಾ ಜುಲೈ 12ರಂದು ಬಿಡುಗಡೆ ಆಯಿತು. ಈಗ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳ ಒಳಗಾಗಿ ಒಟಿಟಿಗೆ ಬರುತ್ತಿದೆ. ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

ನೆಟ್​ಫ್ಲಿಕ್ಸ್ ಕಡೆಯಿಂದ ಘೋಷಣೆ ಆಗಿದೆ. ತಮಿಳಿನ ಜೊತೆಗೆ, ತೆಲುಗು, ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಒಟಿಟಿಗೆ ರಿಲೀಸ್ ಆಗಲಿದೆ. ಈ ವಿಷಯ ನೋಡಿದ ಬಳಿಕ ಸಿನಿಮಾ ಯಾವ ದುಸ್ಥಿತಿಗೆ ತಲುಪಿತ್ತು ಅನ್ನೋದು ಪಕ್ಕಾ ಆಗಿದೆ.

ಈ ಸಿನಿಮಾದ ಅವಧಿ ಈ ಮೊದಲು 3 ಗಂಟೆ ಇತ್ತು. ಆ ಬಳಿಕ ಚಿತ್ರದ ಅವಧಿಗೆ ಎಲ್ಲರೂ ಟೀಕೆ ವ್ಯಕ್ಯಪಡಿಸಿದರು. ಹೀಗಾಗಿ ಸಿನಿಮಾದ ಅವಧಿಗೆ 20 ನಿಮಿಷ ಕತ್ತರಿ ಹಾಕಿ ಅದನ್ನು 2 ಗಂಟೆ 40 ನಿಮಿಷಕ್ಕೆ ಇಳಿಕೆ ಮಾಡಲಾಯಿತು. ಕಮಲ್ ಹಾಸನ್ ಅವರು ಸೇನಾಪತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಮಲ್ ಹಾಸನ್ ಜೊತೆ ಸಿದ್ದಾರ್ಥ್, ಎಸ್​ಜೆ ಸೂರ್ಯ, ಬಾಬಿ ಸಿಂಹ, ರಕುಲ್ ಪ್ರೀತ್ ಸಿಂಗ್ ಮೊದಲಾದವರು ನಟಿಸಿದ್ದಾರೆ.

ಇದನ್ನೂ ಓದಿ: ‘ಕಮಲ್ ಹಾಸನ್ ಸಿನಿಮಾ ಮುಳುಗಿದ ಹಡಗು’; ಮೊದಲ ದಿನವೇ ನೆಲಕಚ್ಚಿದ ‘ಇಂಡಿಯನ್ 2’ ಚಿತ್ರ

ಈ ಚಿತ್ರದ ಕಥೆ ತುಂಬಾನೇ ಹಳೆಯ ಫಾರ್ಮ್ಯಾಟ್ ಹೊಂದಿದೆ. ‘ಇಂಡಿಯನ್ 2’ ಸಿನಿಮಾ ರಿಲೀಸ್ ಆಗಿ ಸೋತರೂ ಈ ಚಿತ್ರಕ್ಕೆ ಮೂರನೇ ಪಾರ್ಟ್ ಬರಲಿದೆ ಎನ್ನುವ ಸುದ್ದಿ ಹರಿದಾಡಿದೆ. ಆದರೆ, ಎರಡನೇ ಸಿನಿಮಾಗೆ ಸಿಕ್ಕ ರೆಸ್ಪಾನ್ಸ್ ನೋಡಿ ನಿರ್ಮಾಪಕರು ಮೂರನೇ ಪಾರ್ಟ್ ಮಾಡೋದು ಅನುಮಾನ ಎಂದೇ ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ