ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಚಿತ್ರಕ್ಕೆ ಇದೆಂಥಾ ಸ್ಥಿತಿ

‘ಇಂಡಿಯನ್ 2’ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 100 ಕೋಟಿ ರೂಪಾಯಿ ತಲುಪಲು ವಿಫಲವಾಗಿದೆ. ಈ ಚಿತ್ರಕ್ಕೆ ಮತ್ತೊಂದು ದುಸ್ಥಿತಿ ಬಂದೊದಗಿದೆ. ಸಿನಿಮಾ ರಿಲೀಸ್ ಆಗಿ ಇನ್ನೂ ಒಂದು ತಿಂಗಳು ಕಳೆದಿಲ್ಲ. ಆಗಲೇ ಚಿತ್ರ ಒಟಿಟಿಗೆ ಕಾಲಿಡುತ್ತಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.

ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಚಿತ್ರಕ್ಕೆ ಇದೆಂಥಾ ಸ್ಥಿತಿ
ಕಮಲ್ ಹಾಸನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 05, 2024 | 10:50 AM

ಎಸ್​. ಶಂಕರ್ ನಿರ್ದೇಶನದ ‘ಇಂಡಿಯನ್ 2’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಹೀನಾಯ ಸೋಲು ಕಂಡಿದೆ. ಶಂಕರ್ ಅವರ ವೃತ್ತಿ ಜೀವನದಲ್ಲಿ ಸೋಲಿನ ಪಟ್ಟಿಯಲ್ಲಿ ಈ ಸಿನಿಮಾ ಸೇರಿಕೊಂಡಿದೆ. ಸಾಮಾನ್ಯವಾಗಿ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸೋತಿದೆ ಎಂದಾಗ ಅದನ್ನು ಆದಷ್ಟು ಬೇಗ ಒಟಿಟಿಗೆ ತರಲಾಗುತ್ತದೆ. ಈಗ ‘ಇಂಡಿಯನ್ 2’ ವಿಚಾರದಲ್ಲಿ ಆಗಿರೋದು ಕೂಡ ಅದೇ. ಈ ಸಿನಿಮಾ ಶೀಘ್ರವೇ ನೆಟ್​ಫ್ಲಿಕ್ಸ್ ಮೂಲಕ  ಒಟಿಟಿಗೆ ಕಾಲಿಡುತ್ತಿದೆ. ಇದು ಕಮಲ್ ಹಾಸನ್ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

‘ಇಂಡಿಯನ್’ ಸಿನಿಮಾ 1966ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಎನಿಸಿಕೊಂಡಿತು. ಈ ಚಿತ್ರಕ್ಕೆ ಶಂಕರ್ ಅವರು 28 ವರ್ಷಗಳ ಬಳಿಕ ಸೀಕ್ವೆಲ್ ತಂದರು. ‘ಇಂಡಿಯನ್ 2 ಸಿನಿಮಾ ಜುಲೈ 12ರಂದು ಬಿಡುಗಡೆ ಆಯಿತು. ಈಗ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳ ಒಳಗಾಗಿ ಒಟಿಟಿಗೆ ಬರುತ್ತಿದೆ. ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

ನೆಟ್​ಫ್ಲಿಕ್ಸ್ ಕಡೆಯಿಂದ ಘೋಷಣೆ ಆಗಿದೆ. ತಮಿಳಿನ ಜೊತೆಗೆ, ತೆಲುಗು, ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಒಟಿಟಿಗೆ ರಿಲೀಸ್ ಆಗಲಿದೆ. ಈ ವಿಷಯ ನೋಡಿದ ಬಳಿಕ ಸಿನಿಮಾ ಯಾವ ದುಸ್ಥಿತಿಗೆ ತಲುಪಿತ್ತು ಅನ್ನೋದು ಪಕ್ಕಾ ಆಗಿದೆ.

ಈ ಸಿನಿಮಾದ ಅವಧಿ ಈ ಮೊದಲು 3 ಗಂಟೆ ಇತ್ತು. ಆ ಬಳಿಕ ಚಿತ್ರದ ಅವಧಿಗೆ ಎಲ್ಲರೂ ಟೀಕೆ ವ್ಯಕ್ಯಪಡಿಸಿದರು. ಹೀಗಾಗಿ ಸಿನಿಮಾದ ಅವಧಿಗೆ 20 ನಿಮಿಷ ಕತ್ತರಿ ಹಾಕಿ ಅದನ್ನು 2 ಗಂಟೆ 40 ನಿಮಿಷಕ್ಕೆ ಇಳಿಕೆ ಮಾಡಲಾಯಿತು. ಕಮಲ್ ಹಾಸನ್ ಅವರು ಸೇನಾಪತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಮಲ್ ಹಾಸನ್ ಜೊತೆ ಸಿದ್ದಾರ್ಥ್, ಎಸ್​ಜೆ ಸೂರ್ಯ, ಬಾಬಿ ಸಿಂಹ, ರಕುಲ್ ಪ್ರೀತ್ ಸಿಂಗ್ ಮೊದಲಾದವರು ನಟಿಸಿದ್ದಾರೆ.

ಇದನ್ನೂ ಓದಿ: ‘ಕಮಲ್ ಹಾಸನ್ ಸಿನಿಮಾ ಮುಳುಗಿದ ಹಡಗು’; ಮೊದಲ ದಿನವೇ ನೆಲಕಚ್ಚಿದ ‘ಇಂಡಿಯನ್ 2’ ಚಿತ್ರ

ಈ ಚಿತ್ರದ ಕಥೆ ತುಂಬಾನೇ ಹಳೆಯ ಫಾರ್ಮ್ಯಾಟ್ ಹೊಂದಿದೆ. ‘ಇಂಡಿಯನ್ 2’ ಸಿನಿಮಾ ರಿಲೀಸ್ ಆಗಿ ಸೋತರೂ ಈ ಚಿತ್ರಕ್ಕೆ ಮೂರನೇ ಪಾರ್ಟ್ ಬರಲಿದೆ ಎನ್ನುವ ಸುದ್ದಿ ಹರಿದಾಡಿದೆ. ಆದರೆ, ಎರಡನೇ ಸಿನಿಮಾಗೆ ಸಿಕ್ಕ ರೆಸ್ಪಾನ್ಸ್ ನೋಡಿ ನಿರ್ಮಾಪಕರು ಮೂರನೇ ಪಾರ್ಟ್ ಮಾಡೋದು ಅನುಮಾನ ಎಂದೇ ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ