AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಚಿತ್ರಕ್ಕೆ ಇದೆಂಥಾ ಸ್ಥಿತಿ

‘ಇಂಡಿಯನ್ 2’ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 100 ಕೋಟಿ ರೂಪಾಯಿ ತಲುಪಲು ವಿಫಲವಾಗಿದೆ. ಈ ಚಿತ್ರಕ್ಕೆ ಮತ್ತೊಂದು ದುಸ್ಥಿತಿ ಬಂದೊದಗಿದೆ. ಸಿನಿಮಾ ರಿಲೀಸ್ ಆಗಿ ಇನ್ನೂ ಒಂದು ತಿಂಗಳು ಕಳೆದಿಲ್ಲ. ಆಗಲೇ ಚಿತ್ರ ಒಟಿಟಿಗೆ ಕಾಲಿಡುತ್ತಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.

ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಚಿತ್ರಕ್ಕೆ ಇದೆಂಥಾ ಸ್ಥಿತಿ
ಕಮಲ್ ಹಾಸನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 05, 2024 | 10:50 AM

Share

ಎಸ್​. ಶಂಕರ್ ನಿರ್ದೇಶನದ ‘ಇಂಡಿಯನ್ 2’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಹೀನಾಯ ಸೋಲು ಕಂಡಿದೆ. ಶಂಕರ್ ಅವರ ವೃತ್ತಿ ಜೀವನದಲ್ಲಿ ಸೋಲಿನ ಪಟ್ಟಿಯಲ್ಲಿ ಈ ಸಿನಿಮಾ ಸೇರಿಕೊಂಡಿದೆ. ಸಾಮಾನ್ಯವಾಗಿ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸೋತಿದೆ ಎಂದಾಗ ಅದನ್ನು ಆದಷ್ಟು ಬೇಗ ಒಟಿಟಿಗೆ ತರಲಾಗುತ್ತದೆ. ಈಗ ‘ಇಂಡಿಯನ್ 2’ ವಿಚಾರದಲ್ಲಿ ಆಗಿರೋದು ಕೂಡ ಅದೇ. ಈ ಸಿನಿಮಾ ಶೀಘ್ರವೇ ನೆಟ್​ಫ್ಲಿಕ್ಸ್ ಮೂಲಕ  ಒಟಿಟಿಗೆ ಕಾಲಿಡುತ್ತಿದೆ. ಇದು ಕಮಲ್ ಹಾಸನ್ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

‘ಇಂಡಿಯನ್’ ಸಿನಿಮಾ 1966ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಎನಿಸಿಕೊಂಡಿತು. ಈ ಚಿತ್ರಕ್ಕೆ ಶಂಕರ್ ಅವರು 28 ವರ್ಷಗಳ ಬಳಿಕ ಸೀಕ್ವೆಲ್ ತಂದರು. ‘ಇಂಡಿಯನ್ 2 ಸಿನಿಮಾ ಜುಲೈ 12ರಂದು ಬಿಡುಗಡೆ ಆಯಿತು. ಈಗ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳ ಒಳಗಾಗಿ ಒಟಿಟಿಗೆ ಬರುತ್ತಿದೆ. ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

ನೆಟ್​ಫ್ಲಿಕ್ಸ್ ಕಡೆಯಿಂದ ಘೋಷಣೆ ಆಗಿದೆ. ತಮಿಳಿನ ಜೊತೆಗೆ, ತೆಲುಗು, ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಒಟಿಟಿಗೆ ರಿಲೀಸ್ ಆಗಲಿದೆ. ಈ ವಿಷಯ ನೋಡಿದ ಬಳಿಕ ಸಿನಿಮಾ ಯಾವ ದುಸ್ಥಿತಿಗೆ ತಲುಪಿತ್ತು ಅನ್ನೋದು ಪಕ್ಕಾ ಆಗಿದೆ.

ಈ ಸಿನಿಮಾದ ಅವಧಿ ಈ ಮೊದಲು 3 ಗಂಟೆ ಇತ್ತು. ಆ ಬಳಿಕ ಚಿತ್ರದ ಅವಧಿಗೆ ಎಲ್ಲರೂ ಟೀಕೆ ವ್ಯಕ್ಯಪಡಿಸಿದರು. ಹೀಗಾಗಿ ಸಿನಿಮಾದ ಅವಧಿಗೆ 20 ನಿಮಿಷ ಕತ್ತರಿ ಹಾಕಿ ಅದನ್ನು 2 ಗಂಟೆ 40 ನಿಮಿಷಕ್ಕೆ ಇಳಿಕೆ ಮಾಡಲಾಯಿತು. ಕಮಲ್ ಹಾಸನ್ ಅವರು ಸೇನಾಪತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಮಲ್ ಹಾಸನ್ ಜೊತೆ ಸಿದ್ದಾರ್ಥ್, ಎಸ್​ಜೆ ಸೂರ್ಯ, ಬಾಬಿ ಸಿಂಹ, ರಕುಲ್ ಪ್ರೀತ್ ಸಿಂಗ್ ಮೊದಲಾದವರು ನಟಿಸಿದ್ದಾರೆ.

ಇದನ್ನೂ ಓದಿ: ‘ಕಮಲ್ ಹಾಸನ್ ಸಿನಿಮಾ ಮುಳುಗಿದ ಹಡಗು’; ಮೊದಲ ದಿನವೇ ನೆಲಕಚ್ಚಿದ ‘ಇಂಡಿಯನ್ 2’ ಚಿತ್ರ

ಈ ಚಿತ್ರದ ಕಥೆ ತುಂಬಾನೇ ಹಳೆಯ ಫಾರ್ಮ್ಯಾಟ್ ಹೊಂದಿದೆ. ‘ಇಂಡಿಯನ್ 2’ ಸಿನಿಮಾ ರಿಲೀಸ್ ಆಗಿ ಸೋತರೂ ಈ ಚಿತ್ರಕ್ಕೆ ಮೂರನೇ ಪಾರ್ಟ್ ಬರಲಿದೆ ಎನ್ನುವ ಸುದ್ದಿ ಹರಿದಾಡಿದೆ. ಆದರೆ, ಎರಡನೇ ಸಿನಿಮಾಗೆ ಸಿಕ್ಕ ರೆಸ್ಪಾನ್ಸ್ ನೋಡಿ ನಿರ್ಮಾಪಕರು ಮೂರನೇ ಪಾರ್ಟ್ ಮಾಡೋದು ಅನುಮಾನ ಎಂದೇ ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​