AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2026ರಲ್ಲಿ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ 5 ಜನಪ್ರಿಯ ಸೆಲೆಬ್ರಿಟಿ ಜೋಡಿಗಳು

2026ರ ಆರಂಭದಿಂದ ಭಾರತೀಯ ಸಿನಿಮಾ ಮತ್ತು ಕಿರುತೆರೆಯ ಹಲವು ಸೆಲೆಬ್ರಿಟಿ ಜೋಡಿಗಳು ತಮ್ಮ ದಾಂಪತ್ಯ ಜೀವನಕ್ಕೆ ವಿದಾಯ ಹೇಳಿ ಅಭಿಮಾನಿಗಳಿಗೆ ಆಘಾತ ನೀಡಿವೆ. ದಳಪತಿ ವಿಜಯ್, ಮೌನಿ ರಾಯ್, ಹನ್ಸಿಕಾ ಮೋಟ್ವಾನಿ, ಜಯ್ ಭಾನುಶಾಲಿ, ಮತ್ತು ಎವೆಲಿನ್ ಶರ್ಮಾ ಅವರಂತಹ ಐದು ಪ್ರಮುಖ ಸ್ಟಾರ್ ದಂಪತಿಗಳ ವಿಚ್ಛೇದನಗಳ ಕುರಿತು ಇಲ್ಲಿ ವಿವರವಿದೆ.

2026ರಲ್ಲಿ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ 5 ಜನಪ್ರಿಯ ಸೆಲೆಬ್ರಿಟಿ ಜೋಡಿಗಳು
2026ರಲ್ಲಿ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ 5 ಜನಪ್ರಿಯ ಸೆಲೆಬ್ರಿಟಿ ಜೋಡಿಗಳು
 ಶ್ರೀಲಕ್ಷ್ಮೀ ಎಚ್
| Edited By: |

Updated on: May 19, 2026 | 7:52 AM

Share

ಸಿನಿಮಾ ರಂಗದ ಸೆಲೆಬ್ರಿಟಿಗಳ ವೈವಾಹಿಕ ಜೀವನದ ಏಳುಬೀಳುಗಳು ಯಾವಾಗಲೂ ಸುದ್ದಿಯಲ್ಲಿರುತ್ತವೆ. ಅದರಲ್ಲೂ 2026ರ ಆರಂಭದಿಂದ ಹಿಡಿದು ಇತ್ತೀಚಿನವರೆಗಿನ ಕೆಲವೇ ತಿಂಗಳುಗಳಲ್ಲಿ ಭಾರತೀಯ ಚಿತ್ರರಂಗ ಹಾಗೂ ಕಿರುತೆರೆಯ ಹಲವು ಸ್ಟಾರ್ ಜೋಡಿಗಳು ತಮ್ಮ ದಾಂಪತ್ಯ ಜೀವನವನ್ನು ಕೊನೆಗೊಳಿಸುವ ಮೂಲಕ ಅಭಿಮಾನಿಗಳಿಗೆ ತೀವ್ರ ಆಘಾತ ನೀಡಿವೆ. ಅಂತಹ ಪ್ರಮುಖ 5 ಸೆಲೆಬ್ರಿಟಿ ಜೋಡಿಗಳ ವಿವರ ಇಲ್ಲಿde.

1. ದಳಪತಿ ವಿಜಯ್ – ಸಂಗೀತಾ ಸ್ವರ್ಣಲಿಂಗಂ: ಕಾಲಿವುಡ್‌ನ ಸ್ಟಾರ್ ನಟ, ತಮಿಳುನಾಡು ಸಿಎಂ ದಳಪತಿ ವಿಜಯ್ ಮತ್ತು ಸಂಗೀತಾ ಅವರ ಸುದೀರ್ಘ 27 ವರ್ಷಗಳ ಸಂಸಾರ ಇತ್ತೀಚೆಗೆ ಮುರಿದುಬಿದ್ದಿದೆ. 1999ರಲ್ಲಿ ವಿವಾಹವಾಗಿದ್ದ ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ, ವಿಜಯ್ ಅವರಿಗೆ ಮತ್ತೊಬ್ಬ ನಟಿಯ ಜೊತೆ ಒಡನಾಟ ಇದೆ ಎಂದು ಆರೋಪಿಸಿ ಸಂಗೀತಾ ಅವರು 2026ರ ಫೆಬ್ರವರಿಯಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವ ಮೂಲಕ ಈ ಹೈಪ್ರೊಫೈಲ್ ಜೋಡಿ ಬೇರ್ಪಡುವ ಸನಿಹದಲ್ಲಿದೆ.

2. ಮೌನಿ ರಾಯ್ – ಸೂರಜ್ ನಂಬಿಯಾರ್: ಬಾಲಿವುಡ್ ನಟಿ ಮೌನಿ ರಾಯ್ ಮತ್ತು ಉದ್ಯಮಿ ಸೂರಜ್ ನಂಬಿಯಾರ್ ಅಧಿಕೃತವಾಗಿ ತಮ್ಮ ವಿಚ್ಛೇದನವನ್ನು ಘೋಷಿಸಿದ್ದಾರೆ. 2022ರ ಜನವರಿಯಲ್ಲಿ ಗೋವಾದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದ ಈ ಜೋಡಿ, ನಾಲ್ಕು ವರ್ಷಗಳ ದಾಂಪತ್ಯದ ನಂತರ ಪರಸ್ಪರ ಒಪ್ಪಿಗೆಯಿಂದಲೇ ಬೇರೆಯಾಗುತ್ತಿರುವುದಾಗಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದೆ.

3. ಹನ್ಸಿಕಾ ಮೋಟ್ವಾನಿ – ಸೊಹೇಲ್ ಕತುರಿಯಾ: ದಕ್ಷಿಣ ಭಾರತದ ಖ್ಯಾತ ನಟಿ ಹನ್ಸಿಕಾ ಮೋಟ್ವಾನಿ ಮತ್ತು ಉದ್ಯಮಿ ಸೊಹೇಲ್ ಕತುರಿಯಾ ದಂಪತಿಗೆ 2026ರ ಮಾರ್ಚ್‌ನಲ್ಲಿ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಮಂಜೂರಾಗಿದೆ. 2022ರ ಡಿಸೆಂಬರ್‌ನಲ್ಲಿ ಜೈಪುರದಲ್ಲಿ ಮದುವೆಯಾಗಿದ್ದ ಇವರು, ವೈಯಕ್ತಿಕ ಭಿನ್ನಾಭಿಪ್ರಾಯಗಳಿಂದಾಗಿ 2024ರಿಂದಲೇ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ವಿಶೇಷವೆಂದರೆ ಹನ್ಸಿಕಾ ಯಾವುದೇ ಜೀವನಾಂಶ ಪಡೆದಿಲ್ಲ ಎನ್ನಲಾಗಿದೆ.

4. ಜಯ್ ಭಾನುಶಾಲಿ – ಮಾಹಿ ವಿಜ್: ಹಿಂದಿ ಕಿರುತೆರೆಯ ಅತ್ಯಂತ ನೆಚ್ಚಿನ ಜೋಡಿಯಾಗಿದ್ದ ಜಯ್ ಭಾನುಶಾಲಿ ಮತ್ತು ಮಾಹಿ ವಿಜ್ ಜನವರಿ 2026ರಲ್ಲಿ ತಮ್ಮ 14 ವರ್ಷಗಳ ದಾಂಪತ್ಯ ಜೀವನವನ್ನು ಕೊನೆಗೊಳಿಸುವುದಾಗಿ ಘೋಷಿಸಿ ಶಾಕ್ ನೀಡಿದರು. ಇಬ್ಬರ ನಡುವೆ ಯಾವುದೇ ದ್ವೇಷವಿಲ್ಲದೆ, ಒಮ್ಮತದಿಂದಲೇ ಈ ನಿರ್ಧಾರ ಕೈಗೊಂಡಿದ್ದು, ತಮ್ಮ ಮೂವರು ಮಕ್ಕಳನ್ನು ಜವಾಬ್ದಾರಿಯಿಂದ ಒಟ್ಟಿಗೆ ಸಾಕೋಣ ಎಂದು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ವಿಚ್ಛೇದನದ ಬಳಿಕ ಮೌನಿ ರಾಯ್​​​ಗೆ ಸಿಕ್ಕ ಜೀವನಾಂಶ ಎಷ್ಟು? ಮಾಜಿ ಪತಿ ಹೇಳಿದ್ದಿಷ್ಟು

5. ಎವೆಲಿನ್ ಶರ್ಮಾ – ತುಶಾನ್ ಭಿಂದಿ: ‘ಯೇ ಜವಾನಿ ಹೈ ದೀವಾನಿ’ ಖ್ಯಾತಿಯ ನಟಿ ಎವೆಲಿನ್ ಶರ್ಮಾ ತಮ್ಮ ಪತಿ, ಇಂಡೋ-ಆಸ್ಟ್ರೇಲಿಯನ್ ದಂತ ವೈದ್ಯ ತುಶಾನ್ ಭಿಂದಿ ಅವರಿಂದ ವಿಚ್ಛೇದನ ಪಡೆದಿದ್ದಾರೆ. ಐದು ವರ್ಷಗಳ ಮದುವೆ ಜೀವನದ ನಂತರ ಪ್ರೀತಿಯಿಂದಲೇ ದೂರಾಗಿರುವ ಈ ಜೋಡಿ, ತಮ್ಮ ಇಬ್ಬರು ಪುಟ್ಟ ಮಕ್ಕಳ ಪಾಲನೆಯತ್ತ ಗಮನ ಹರಿಸುವುದಾಗಿ ತಿಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!