AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಪೈರಸಿ ತಡೆಯಲು ಹೊಸ ಪ್ಲ್ಯಾನ್​​ನೊಂದಿಗೆ ಬಂದ ಕೇಂದ್ರ ಸರ್ಕಾರ

ಚಿತ್ರರಂಗಕ್ಕೆ ಮಾರಕವಾಗಿರುವ ಸಿನಿಮಾ ಪೈರಸಿ ತಡೆಗೆ ಭಾರತ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಈಗಾಗಲೇ ಸಾವಿರಾರು ಪೈರಸಿ ಲಿಂಕ್ ಹಾಗೂ ವೆಬ್‌ಸೈಟ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ದೂರು ದಾಖಲಿಸಲು ಪ್ರತ್ಯೇಕ ಪೋರ್ಟಲ್ ಆರಂಭಿಸುತ್ತಿದ್ದು, ಇತ್ತೀಚೆಗೆ 'ಐಬೊಮ್ಮ' ರವಿ ಬಂಧನ ಕೂಡ ಈ ನಿಟ್ಟಿನಲ್ಲಿ ದೊಡ್ಡ ಯಶಸ್ಸಾಗಿದೆ.

ಸಿನಿಮಾ ಪೈರಸಿ ತಡೆಯಲು ಹೊಸ ಪ್ಲ್ಯಾನ್​​ನೊಂದಿಗೆ ಬಂದ ಕೇಂದ್ರ ಸರ್ಕಾರ
ಅಶ್ವಿನ್ ವೈಷ್ಣವ್
ರಾಜೇಶ್ ದುಗ್ಗುಮನೆ
|

Updated on: Jul 28, 2026 | 12:58 PM

Share

ಮುಖ್ಯಾಂಶಗಳು

  • ಚಿತ್ರರಂಗದ ಶಾಪ 'ಪೈರಸಿ'ಗೆ ಬೀಳಲಿದೆ ಬಿಗ್ ಲಾಕ್
  • ಸಾವಿರಾರು ವೆಬ್‌ಸೈಟ್, ಟೆಲಿಗ್ರಾಂ ಲಿಂಕ್‌ಗಳು ಬ್ಲಾಕ್
  • ಕೇಂದ್ರ ಸರ್ಕಾರದ ಬಿಗಿ ಕ್ರಮಕ್ಕೆ ಮೆಚ್ಚುಗೆ

ಕನ್ನಡ, ಬಾಲಿವುಡ್ ಸೇರಿದಂತೆ ಎಲ್ಲಾ ಚಿತ್ರರಂಗಕ್ಕೂ ಪೈರಸಿ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ನಿರ್ಮಾಪಕರು ಮತ್ತು ಆ್ಯಂಟಿ ಪೈರಸಿ ತಂಡಗಳು ಎಷ್ಟೇ ಪ್ರಯತ್ನಿಸಿದರೂ ಸಿನಿಮಾಗಳು ಆನ್​​ಲೈನ್​ ಅಲ್ಲಿ ಲೀಕ್ ಆಗುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಈಗ ಹೊಸ ಅಸ್ತ್ರದೊಂದಿಗೆ ಬರಲು ರೆಡಿ ಆಗಿದೆ. ಪೈರಸಿ ತಡೆಗಟ್ಟಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಬಗ್ಗೆ ದೊಡ್ಡ ಸೂಚನೆ ನೀಡಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರವು ಪೈರಸಿಗೆ ಸಂಬಂಧಿಸಿದ 7,393 ಲಿಂಕ್‌ಗಳನ್ನು ನಿಷ್ಕ್ರಿಯಗೊಳಿಸಿದೆ. ಇದರಲ್ಲಿ 1,263 ವೆಬ್‌ಸೈಟ್‌ಗಳು ಹಾಗೂ 4,996 ಟೆಲಿಗ್ರಾಂ ಚಾನಲ್‌ಗಳು ಸೇರಿವೆ. ದೂರುಗಳನ್ನು ದಾಖಲಿಸಲು ಕೇಂದ್ರ ಸರ್ಕಾರವು ಪ್ರತ್ಯೇಕ ಆ್ಯಂಟಿ-ಪೈರಸಿ ಪೋರ್ಟಲ್ ಅನ್ನು ಸಿದ್ಧಪಡಿಸುತ್ತಿದೆ. ಇದರಿಂದಾಗಿ ಕಾನೂನು ಜಾರಿ ಪ್ರಕ್ರಿಯೆ ಇನ್ನುಮುಂದೆ ವೇಗವಾಗಿ ನಡೆಯಲಿದೆ.

ಸರ್ಕಾರದ ಕ್ರಮ ಚಿತ್ರರಂಗಕ್ಕೆ ದೊಡ್ಡ ಆನೆಬಲ ತಂದಿದೆ. ಇತ್ತೀಚೆಗಷ್ಟೇ ಪೊಲೀಸರು ‘ಐಬೊಮ್ಮ’ ರವಿಯನ್ನು ಬಂಧಿಸಿರುವುದು ಇದಕ್ಕೆ ಉತ್ತಮ ಉದಾಹರಣೆ. ದೇಶೀಯ ಪೊಲೀಸ್ ಇಲಾಖೆಯೂ ಈ ನಿಟ್ಟಿನಲ್ಲಿ ಚುರುಕಾಗಿ ಕೆಲಸ ಮಾಡುತ್ತಿದೆ.

ಇದನ್ನೂ ಓದಿ: ‘ಜನ ನಾಯಗನ್’ ಪೈರಸಿ ಕಾಪಿ ಡೌನ್​ಲೋಡ್ ಮಾಡಿದವರಿಗೂ ಎದುರಾಗಲಿದೆ ಸಂಕಷ್ಟ

ಗಲ್ಫ್ ದೇಶಗಳಲ್ಲಿ ಪ್ರದರ್ಶನಗೊಳ್ಳುವ ಪ್ರಿಂಟ್‌ಗಳಿಂದ ಪೈರಸಿ ಆಗುತ್ತಿದೆ ಎಂದು ಕೆಲವು ನಿರ್ಮಾಪಕರು ಅಭಿಪ್ರಾಯ ಹೊರಹಾಕಿದ್ದಾರೆಬ. ಚಿತ್ರಮಂದಿರಗಳಿಗೆ ಪ್ರೇಕ್ಷಕರು ಬರುವುದು ಕಡಿಮೆಯಾಗುತ್ತಿರುವ ಈ ಸಮಯದಲ್ಲಿ ಸರ್ಕಾರದ ಈ ನಡೆ ಚಿತ್ರರಂಗಕ್ಕೆ ಹೊಸ ಆಶಾಕಿರಣ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್