AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯನ್ ಐಡಲ್​ ಸ್ಕ್ರಿಪ್ಟೆಡ್​ ಎನ್ನುವ ಆರೋಪದ ಮಧ್ಯೆಯೇ ಮಹತ್ವದ ನಿರ್ಧಾರ ತೆಗೆದುಕೊಂಡ ಆಶಾ ಭೋಸ್ಲೆ

Indian Idol 12: ಇಂಡಿಯನ್​ ಐಡಲ್​ ಯಶಸ್ವಿಯಾಗಿ 11 ಸೀಸನ್​​ ಪೂರ್ಣಗೊಳಿಸಿದೆ. ಈಗ 12ನೇ ಸೀಸನ್​ ನಡೆಯುತ್ತಿದೆ. ಮುಂಬರುವ ವಿಶೇಷ ಎಪಿಸೋಡ್​ನಲ್ಲಿ ಆಶಾ ಭೋಸ್ಲೆ ಜಡ್ಜ್​ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಇಂಡಿಯನ್ ಐಡಲ್​ ಸ್ಕ್ರಿಪ್ಟೆಡ್​ ಎನ್ನುವ ಆರೋಪದ ಮಧ್ಯೆಯೇ ಮಹತ್ವದ ನಿರ್ಧಾರ ತೆಗೆದುಕೊಂಡ ಆಶಾ ಭೋಸ್ಲೆ
ಆಶಾ ಭೋಸ್ಲೆ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jul 08, 2021 | 7:48 PM

Share

ಇಂಡಿಯನ್​ ಐಡಲ್​ ಬಗ್ಗೆ ಇತ್ತೀಚೆಗೆ ಸಾಕಷ್ಟು ಆರೋಪಗಳು ಕೇಳಿ ಬಂದಿದೆ. ಬಡತನ, ಫೇಕ್​ ಲವ್​ ಸ್ಟೋರಿಗಳೇ ರಿಯಾಲಿಟಿ ಶೋಗಳ ಬಂಡವಾಳ ಎಂದು ಸ್ವತಃ ಇಂಡಿಯನ್​ ಐಡಲ್​ ವಿನ್ನರ್​ ಆರೋಪಿಸಿದ್ದರು. ಈ ಬೆನ್ನಲ್ಲೇ ಗಾಯಕಿ ಆಶಾ ಭೋಸ್ಲೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂಡಿಯನ್​ ಐಡಲ್​ 12ರಲ್ಲಿ ವಿಶೇಷ ಜಡ್ಜ್​ ಆಗಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಇಂಡಿಯನ್​ ಐಡಲ್​ ಯಶಸ್ವಿಯಾಗಿ 11 ಸೀಸನ್​​ ಪೂರ್ಣಗೊಳಿಸಿದೆ. ಈಗ 12ನೇ ಸೀಸನ್​ ನಡೆಯುತ್ತಿದೆ. ಮುಂಬರುವ ವಿಶೇಷ ಎಪಿಸೋಡ್​ನಲ್ಲಿ ಆಶಾ ಭೋಸ್ಲೆ ಜಡ್ಜ್​ ಆಗಿ ಕಾಣಿಸಿಕೊಳ್ಳಲಿದ್ದಾರೆ. ಸೋನಿ ಟಿವಿ ಈ ಬಗ್ಗೆ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಇನ್ನು ಜಡ್ಜ್​ ಆದಿತ್ಯ ನಾರಾಯಣ್​ ಅವರು ಈ ಎಪಿಸೋಡ್​ ವಿಶೇಷವಾಗಿ ನಡೆಸಿಕೊಡುತ್ತಿದ್ದಾರೆ.

ಆಶಾ ಅವರು ವೇದಿಕೆ ಮೇಲೆ ಬರುತ್ತಿದ್ದಂತೆ ಸ್ಪರ್ಧಿ ಪವನ್​ದೀಪ್​ ರಾಜನ್​ ಅವರು ಗುಲಾಬಿ ಹೂವನ್ನು ನೀಡಿ ಸ್ವಾಗತಿಸಿದ್ದಾರೆ. ಸದ್ಯದಲ್ಲೇ ಇಂಡಿಯನ್ ಐಡಲ್​ 12ರ ಫಿನಾಲೆ ನಡೆಯುತ್ತಿದ್ದು, ಅದಕ್ಕೂ ಮೊದಲೇ ಈ ಶೋನ ರಂಗು ಹೆಚ್ಚಿಸಲಾಗುತ್ತಿದೆ.

ಕಿರುತೆರೆ ಪ್ರೇಕ್ಷಕರನ್ನು ಸೆಳೆದುಕೊಳ್ಳಲು ಮನರಂಜನಾ ವಾಹಿನಿಗಳು ಎಲ್ಲಿಲ್ಲದ ಕಸರತ್ತು ನಡೆಸುತ್ತವೆ. ಅದರಲ್ಲೂ ರಿಯಾಲಿಟಿ ಶೋಗಳ ಮೂಲಕ ಜನರನ್ನು ಮೋಡಿ ಮಾಡಲು ಹಲವು ಪ್ರಯತ್ನಗಳನ್ನು ಮಾಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ರಿಯಾಲಿಟಿ ಶೋಗಳ ಬಗ್ಗೆ ಪರ-ವಿರೋಧದ ಅನೇಕ ಚರ್ಚೆಗಳು ಸೋಶಿಯಲ್​ ಮೀಡಿಯಾದಲ್ಲಿ ನಡೆದಿದೆ. ಹಿಂದಿಯ ‘ಇಂಡಿಯನ್​ ಐಡಲ್​ 12’ ಸಿಂಗಿಂಗ್​ ರಿಯಾಲಿಟಿ ಶೋ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸ್ಪರ್ಧಿಗಳನ್ನು, ನಿರೂಪಕರನ್ನು ಹಾಗೂ ಜಡ್ಜ್​ಗಳನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡಲಾಗುತ್ತಿದೆ.

ಇಂಡಿಯನ್​ ಐಡಲ್​ ಐದು ಹಾಗೂ ಆರನೇ ಸೀಸನ್​ ಜಡ್ಜ್​ ಆಗಿದ್ದ ಸುನಿಧಿ ಚೌಹಾಣ್​ ಈ ಶೋನಿಂದ ಹೊರ ಬಂದಿದ್ದರು. ಅಲ್ಲದೆ, ಈ ಶೋ ಸ್ಕ್ರಿಪ್ಟೆಡ್​ ರೂಪದಲ್ಲಿ ನಡೆಯುತ್ತಿದೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ‘

ಇದನ್ನೂ ಒದಿ: ಕೆಟ್ಟ ಗಾಯನ ಕೇಳಿ ಇಂಡಿಯನ್​ ಐಡಲ್​ ಶೋನಲ್ಲಿ ಕೆನ್ನೆಗೆ ಹೊಡೆದುಕೊಂಡಿದ್ದ ಜಡ್ಜ್​

Published On - 7:46 pm, Thu, 8 July 21

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು