AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಮೋಸದ ಎಲಿಮಿನೇಷನ್​’; ಇಂಡಿಯನ್​ ಐಡಲ್​ ಶೋ ಮೇಲೆ ಪ್ರೇಕ್ಷಕರ ಸಿಟ್ಟಿಗೆ ಇಲ್ಲಿದೆ ಕಾರಣ

Indian Idol 12 Elimination: ಇತ್ತೀಚಿನ ಎಪಿಸೋಡ್​ನಲ್ಲಿ ಆಶಾ ಭೋಸ್ಲೆ ಕೂಡ ತೀರ್ಪುಗಾರರಾಗಿ ಭಾಗವಹಿಸಿದ್ದರು. ಎಲ್ಲ ಸ್ಪರ್ಧಿಗಳು ಭರ್ಜರಿ ಪೈಪೋಟಿ ನೀಡಿದರು. ಆಶಿಷ್​ ಕುಲಕರ್ಣಿ ಮತ್ತು ಷಣ್ಮುಖಪ್ರಿಯಾ ಅವರು ಡೇಂಜರ್​ ಝೋನ್​ನಲ್ಲಿ ಇದ್ದರು.

‘ಇದು ಮೋಸದ ಎಲಿಮಿನೇಷನ್​’; ಇಂಡಿಯನ್​ ಐಡಲ್​ ಶೋ ಮೇಲೆ ಪ್ರೇಕ್ಷಕರ ಸಿಟ್ಟಿಗೆ ಇಲ್ಲಿದೆ ಕಾರಣ
‘ಇದು ಮೋಸದ ಎಲಿಮಿನೇಷನ್​’; ಇಂಡಿಯನ್​ ಐಡಲ್​ ಶೋ ಮೇಲೆ ಪ್ರೇಕ್ಷಕರ ಸಿಟ್ಟಿಗೆ ಇಲ್ಲಿದೆ ಕಾರಣ
TV9 Web
| Updated By: ಮದನ್​ ಕುಮಾರ್​|

Updated on: Jul 12, 2021 | 1:15 PM

Share

ಹತ್ತು ಹಲವು ಕಾರಣಗಳಿಂದಾಗಿ ‘ಇಂಡಿಯನ್​ ಐಡಲ್​’ (Indian Idol 12) ರಿಯಾಲಿಟಿ ಶೋ ವಿವಾದಕ್ಕೆ ಒಳಗಾಗುತ್ತಿದೆ. ಇತ್ತೀಚೆಗೆ ನಡೆದ ಎಲಿಮಿನೇಷನ್​ ಪ್ರಕ್ರಿಯೆಯಲ್ಲಿ ಗಾಯಕ ಆಶಿಷ್​ ಕುಲಕರ್ಣಿ (Ashish Kulkarni) ಅವರನ್ನು ಎಲಿಮಿನೇಟ್​ ಮಾಡಲಾಗಿದೆ. ಈ ಬಗ್ಗೆ ಪ್ರೇಕ್ಷಕರಿಗೆ ತೀವ್ರ ಬೇಸರ ಆಗಿದೆ. ಮತ್ತೋರ್ವ ಗಾಯಕಿ ಷಣ್ಮುಖಪ್ರಿಯಾ ಅವರು ಎಲಿಮಿನೇಷನ್​ನಿಂದ ಬಜಾವ್​ ಆಗಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿದೆ. ಇಂಡಿಯನ್​ ಐಡಲ್​ ಶೋನಲ್ಲಿ ಮೋಸದ ಎಲಿಮಿನೇಷನ್​ ನಡೆದಿದೆ ಎಂದು ನೆಟ್ಟಿಗರು ಟ್ವೀಟ್​ ಮಾಡುತ್ತಿದ್ದಾರೆ.

ಸ್ಪರ್ಧಿಗಳ ನಡುವೆ ಫೇಕ್​ ಲವ್​ ಸ್ಟೋರಿ ಸೃಷ್ಟಿಮಾಡಲಾಗಿದೆ, ಲೆಜೆಂಡರಿ ಗಾಯಕ ಕಿಶೋರ್​ ಕುಮಾರ್​ ಅವರ ಗೀತೆಗಳನ್ನು ಕೆಟ್ಟದಾಗಿ ಹಾಡಲಾಗಿದೆ, ಸ್ಪರ್ಧಿಗಳ ನಡುವೆ ಪಕ್ಷಪಾತ ಮಾಡಲಾಗಿದೆ, ಎಲ್ಲ ಎಪಿಸೋಡ್​ಗಳು ಸ್ಕ್ರಿಪ್ಟೆಡ್​ ಆಗಿವೆ ಎಂಬಿತ್ಯಾದಿ ಆರೋಪಗಳು ಇಂಡಿಯನ್​ ಐಡಲ್ ಶೋ ಮೇಲಿದೆ. ಈಗ ಆಶಿಷ್​ ಕುಲಕರ್ಣಿ ಎಲಿಮಿನೇಷನ್​ ಬಳಿಕ ಒಂದು ವರ್ಗದ ಪ್ರೇಕ್ಷಕರು ಈ ಶೋ ವಿರುದ್ಧ ಗುಡುಗಿದ್ದಾರೆ.

ಇತ್ತೀಚಿನ ಎಪಿಸೋಡ್​ನಲ್ಲಿ ಆಶಾ ಭೋಸ್ಲೆ ಕೂಡ ತೀರ್ಪುಗಾರರಾಗಿ ಭಾಗವಹಿಸಿದ್ದರು. ಎಲ್ಲ ಸ್ಪರ್ಧಿಗಳು ಭರ್ಜರಿ ಪೈಪೋಟಿ ನೀಡಿದರು. ಆಶಿಷ್​ ಕುಲಕರ್ಣಿ ಮತ್ತು ಷಣ್ಮುಖಪ್ರಿಯಾ ಅವರು ಡೇಂಜರ್​ ಝೋನ್​ನಲ್ಲಿ ಇದ್ದರು. ‘ದಿಲ್​ ದೇನಾ ಖೇಲ್​ ಹೈ ದಿಲ್​ದಾರ್​ ಕಾ..’ ಹಾಡನ್ನು ಆಶಿಷ್​ ಹಾಡಿದರು. ‘ದುನಿಯಾ ಮೇ ಲೋಗೋಂಕೋ..’ ಗೀತೆಯನ್ನು ಷಣ್ಮುಖಪ್ರಿಯಾ ಹಾಡಿದರು. ತೀರ್ಪುಗಾರರಿಗೆ ಇಬ್ಬರ ಗಾಯನ ಕೂಡ ಸಖತ್​ ಇಷ್ಟ ಆಯಿತು. ಅಂತಿಮವಾಗಿ ಒಬ್ಬರು ಎಲಿಮಿನೇಟ್​ ಆಗಲೇಬೇಕಿದ್ದರಿಂದ ಆಶಿಷ್​ ಕುಲಕರ್ಣಿ ಅವರು ಶೋನಿಂದ ಹೊರಬೀಳುವಂತಾಯಿತು.

ಆಶಿಷ್​ ಕುಲಕರ್ಣಿ ಅವರ ಎಲಿಮಿನೇಷನ್​ ಬಗ್ಗೆ ಬೇಸರ ವ್ಯಕ್ತಪಡಿಸುತ್ತಿರುವ ಅನೇಕರು ಇಂಡಿಯಲ್​ ಐಡಲ್​ ವಿರುದ್ಧ ಟ್ವೀಟ್​ ಮಾಡುತ್ತಿದ್ದಾರೆ. ‘ಷಣ್ಮುಖಪ್ರಿಯಾ ಅವರಿಗಿಂತ ಆಶಿಷ್​ ಕುಲಕರ್ಣಿ ಚೆನ್ನಾಗಿ ಹಾಡುತ್ತಾರೆ. ಆದರೂ ಕೂಡ ಷಣ್ಮುಖಪ್ರಿಯಾಗೆ ಝೋಂಬಿಗಳು ವೋಟ್​ ಮಾಡುತ್ತಿದ್ದಾವೆ. ನನ್ನ ಪ್ರಕಾರ ಆಶಿಷ್​ ಅವರು ಟಾಪ್​ 3 ಸ್ಪರ್ಧಿಗಳಲ್ಲಿ ಒಬ್ಬರಾಗಿರಬೇಕಿತ್ತು’ ಎಂದು ನೆಟ್ಟಿಗರೊಬ್ಬರು ಟ್ವೀಟ್​ ಮಾಡಿದ್ದಾರೆ.

‘ದಿನದಿಂದ ದಿನಕ್ಕೆ ಈ ಶೋ ಹದಗೆಡುತ್ತಿದೆ. ಪಕ್ಷಪಾತವೇ ತುಂಬಿಹೋಗುತ್ತಿದೆ. ಆಶಿಷ್​ ಕುಲಕರ್ಣಿ ಅವರ ಎಲಿಮಿನೇಷನ್​ನಿಂದ ತೀವ್ರ ನಿರಾಸೆ ಆಗಿದೆ. ಅವರ ಬದಲು ಇನ್ನುಳಿದ ಮೂವರಲ್ಲಿ ಯಾರಾದರೂ ಎಲಿಮಿನೇಟ್​ ಆಗಬಹುದಿತ್ತು’ ಎಂದು ಕೆಲವರು ಟ್ವೀಟ್​ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ. ‘ಈ ಶೋ ಆಯೋಜಕರು ಮತ್ತು ತೀರ್ಪುಗಾರರು ಕಿವುಡರಾಗಿದ್ದಾರಾ? ಕುರುಡರಾಗಿದ್ದಾರಾ’ ಎಂಬ ಕಮೆಂಟ್​ ಕೂಡ ಬಂದಿದೆ.

ಇದನ್ನೂ ಓದಿ:

ಕೆಟ್ಟ ಗಾಯನ ಕೇಳಿ ಇಂಡಿಯನ್​ ಐಡಲ್​ ಶೋನಲ್ಲಿ ಕೆನ್ನೆಗೆ ಹೊಡೆದುಕೊಂಡಿದ್ದ ಜಡ್ಜ್​

ಬಡತನ, ಫೇಕ್​ ಲವ್​ ಸ್ಟೋರಿಗಳೇ ರಿಯಾಲಿಟಿ ಶೋಗಳ ಬಂಡವಾಳ; ಇಂಡಿಯನ್​ ಐಡಲ್​ ವಿನ್ನರ್​ ಆರೋಪ

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,