ಪ್ರತಿಭಾವಂತ ಹುಡುಗಿಗೆ ಕೊಟ್ಟ ಮಾತು ಉಳಿಸಿಕೊಂಡ ವಿಜಯ್​ ದೇವರಕೊಂಡ; ಷಣ್ಮುಖಪ್ರಿಯಾಗೆ ಸಿಕ್ತು ಚಾನ್ಸ್​​

‘ಇಂಡಿಯನ್​ ಐಡಲ್​ 12’ ಶೋನಲ್ಲಿ ಹಿಂದಿ ಗಾಯಕರ ಮಧ್ಯೆ ಷಣ್ಮುಖಪ್ರಿಯಾ ಅವರು ಟಫ್​ ಸ್ಪರ್ಧೆ ನೀಡಿದ್ದರು. ಅಲ್ಲದೇ ಅವರ ಕಂಠಕ್ಕೆ ವಿಜಯ್​ ದೇವರಕೊಂಡ ಮಾರುಹೋಗಿದ್ದರು.

ಪ್ರತಿಭಾವಂತ ಹುಡುಗಿಗೆ ಕೊಟ್ಟ ಮಾತು ಉಳಿಸಿಕೊಂಡ ವಿಜಯ್​ ದೇವರಕೊಂಡ; ಷಣ್ಮುಖಪ್ರಿಯಾಗೆ ಸಿಕ್ತು ಚಾನ್ಸ್​​
ಷಣ್ಮುಖಪ್ರಿಯಾ, ವಿಜಯ್​ ದೇವರಕೊಂಡ
Follow us
| Updated By: ಮದನ್​ ಕುಮಾರ್​

Updated on: Sep 07, 2021 | 8:33 AM

ನಟ ವಿಜಯ್​ ದೇವರಕೊಂಡ ಅವರಿಗೆ ಬಿಗ್​ ಬ್ರೇಕ್​ ನೀಡಿದ ಸಿನಿಮಾ ‘ಅರ್ಜುನ್​ ರೆಡ್ಡಿ’. ಆ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರು ದೇಶಾದ್ಯಂತ ಫೇಮಸ್​ ಆದರು. ಈಗ ಭಾರತೀಯ ಚಿತ್ರರಂಗದ ಬಹುಬೇಡಿಕೆ ನಟರಲ್ಲಿ ಅವರು ಕೂಡ ಮುಂಚೂಣಿಯಲ್ಲಿದ್ದಾರೆ. ಪ್ರಸ್ತುತ ವಿಜಯ್​ ದೇವರಕೊಂಡ ನಟಿಸುತ್ತಿರುವ ‘ಲೈಗರ್​’ ಚಿತ್ರದ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಯ ಮಟ್ಟವನ್ನು ಹೆಚ್ಚಲು ಇನ್ನೊಂದು ಕಾರಣ ಸಿಕ್ಕಿದೆ. ಈ ಸಿನಿಮಾದಲ್ಲಿ ‘ಇಂಡಿಯನ್​ ಐಡಲ್​ 12’ ಖ್ಯಾತಿಯ ಷಣ್ಮುಖಪ್ರಿಯಾ ಅವರು ಒಂದು ಸಾಂಗ್​ ಹಾಡಿದ್ದಾರೆ. ಈ ಸುದ್ದಿ ಕೇಳಿ ಅವರ ಫ್ಯಾನ್ಸ್​ ಫುಲ್​ ಖುಷ್​ ಆಗಿದ್ದಾರೆ.

ಭಾರಿ ಸೆನ್ಸೇಷನ್​ ಕ್ರಿಯೇಟ್​ ಮಾಡಿದ್ದ ‘ಇಂಡಿಯನ್​ ಐಡಲ್​ 12’ ರಿಯಾಲಿಟಿ ಶೋನಲ್ಲಿ ತೆಲುಗು ಮೂಲದ ಗಾಯಕಿ ಷಣ್ಮುಖಪ್ರಿಯಾ ಅವರು ಭಾಗವಹಿಸಿದ್ದರು. ಹಿಂದಿ ಗಾಯಕರ ಮಧ್ಯೆ ಅವರು ಟಫ್​ ಸ್ಪರ್ಧೆ ನೀಡಿದ್ದರು. ಅಲ್ಲದೇ ಅವರ ಕಂಠಕ್ಕೆ ವಿಜಯ್​ ದೇವರಕೊಂಡ ಕೂಡ ಮಾರುಹೋಗಿದ್ದರು. ಆಗಲೇ ಅವರೊಂದು ಭರವಸೆ ನೀಡಿದ್ದರು. ಅದನ್ನು ಈಗ ಈಡೇರಿಸಿದ್ದಾರೆ.

‘ಷಣ್ಮುಖಪ್ರಿಯಾ ಈ ರಿಯಾಲಿಟಿ ಶೋನಲ್ಲಿ ಗೆದ್ದರೂ, ಗೆಲ್ಲದಿದ್ದರೂ ಹೈದರಾಬಾದ್​ಗೆ ಬಂದ ಬಳಿಕ ನೀನು ನನ್ನ ಭೇಟಿ ಆಗಬೇಕು. ನನ್ನ ಸಿನಿಮಾದಲ್ಲಿ ಹಾಡುವ ಅವಕಾಶ ನಿನಗೆ ನೀಡುತ್ತೇನೆ. ಗುಡ್​ ಲುಕ್​’ ಎಂದು ವಿಡಿಯೋ ಮೆಸೇಜ್​ ಮೂಲಕ ವಿಜಯ್​ ದೇವರಕೊಂಡ ಹೇಳಿದ್ದರು. ಅದೀಗ ನಿಜವಾಗಿದೆ. ಅವರ ಮನೆಗೆ ಷಣ್ಮುಖಪ್ರಿಯಾ ಭೇಟಿ ನೀಡಿದ್ದಾರೆ. ನೆಚ್ಚಿನ ನಟನನ್ನು ಭೇಟಿಯಾಗಿ ಖುಷಿಪಟ್ಟಿದ್ದಾರೆ. ಅಲ್ಲದೇ, ‘ಲೈಗರ್​’ ಸಿನಿಮಾದಲ್ಲಿ ಹಾಡುವ ಅವಕಾಶ ಕೂಡ ಸಿಕ್ಕಿದೆ.

‘ಇಂಡಿಯಲ್​ ಐಡಲ್​ 12’ ಸ್ಪರ್ಧೆಯಲ್ಲಿ ಗೆಲ್ಲಲು ಷಣ್ಮುಖಪ್ರಿಯಾಗೆ ಸಾಧ್ಯವಾಗಲಿಲ್ಲ. ಆದರೆ ತೆಲುಗು ಮಂದಿಯ ಮನಗೆಲ್ಲುವಲ್ಲಿ ಅವರು ಯಶಸ್ವಿ ಆಗಿದ್ದಾರೆ. ‘ವಿಜಯ್​ ದೇವರಕೊಂಡ ಅವರು ನಮಗೆ ಈ ರೀತಿ ಬೆಂಬಲ ನೀಡುತ್ತಾರೆ ಎಂದು ನಾನು ನಿರೀಕ್ಷಿಸಿರಲಿಲ್ಲ. ಮೊದಲ ಬಾರಿಗೆ ಅವರ ವಿಡಿಯೋ ನೋಡಿದಾಗ ತುಂಬ ಆಶ್ಚರ್ಯ ಆಗಿತ್ತು’ ಎಂದು ಷಣ್ಮುಖಪ್ರಿಯಾ ಹೇಳಿದ್ದಾರೆ. ಅವರ ಧ್ವನಿಗೆ ಸರಿಹೊಂದುವಂತಹ ಗೀತೆಯನ್ನು ಲೈಗರ್​ ಸಿನಿಮಾದಲ್ಲಿ ಸೇರಿಸಲಾಗಿದೆ. ಈ ಚಿತ್ರಕ್ಕೆ ಪುರಿ ಜಗನ್ನಾಥ್​ ನಿರ್ದೇಶನ ಮಾಡುತ್ತಿದ್ದು, ತೆಲುಗಿನ ಜೊತೆಗೆ ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲೂ ಮೂಡಿಬರುತ್ತಿದೆ.

ಇದನ್ನೂ ಓದಿ:

‘ನನ್ನ ಜೊತೆ ಮನೆಯಲ್ಲೇ ಇರು’ ಎಂದು ರಶ್ಮಿಕಾಗೆ ಒತ್ತಾಯ; ಹೀಗಾದರೆ ಕೆಲಸ ಮಾಡೋದು ಹೇಗೆ?

ಜಿಮ್​ನಲ್ಲಿ ಒಟ್ಟಾಗಿ ವರ್ಕೌಟ್​ ಮಾಡಿದ ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ; ಫೋಟೋ ವೈರಲ್

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ