AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಾವಂತ ಹುಡುಗಿಗೆ ಕೊಟ್ಟ ಮಾತು ಉಳಿಸಿಕೊಂಡ ವಿಜಯ್​ ದೇವರಕೊಂಡ; ಷಣ್ಮುಖಪ್ರಿಯಾಗೆ ಸಿಕ್ತು ಚಾನ್ಸ್​​

‘ಇಂಡಿಯನ್​ ಐಡಲ್​ 12’ ಶೋನಲ್ಲಿ ಹಿಂದಿ ಗಾಯಕರ ಮಧ್ಯೆ ಷಣ್ಮುಖಪ್ರಿಯಾ ಅವರು ಟಫ್​ ಸ್ಪರ್ಧೆ ನೀಡಿದ್ದರು. ಅಲ್ಲದೇ ಅವರ ಕಂಠಕ್ಕೆ ವಿಜಯ್​ ದೇವರಕೊಂಡ ಮಾರುಹೋಗಿದ್ದರು.

ಪ್ರತಿಭಾವಂತ ಹುಡುಗಿಗೆ ಕೊಟ್ಟ ಮಾತು ಉಳಿಸಿಕೊಂಡ ವಿಜಯ್​ ದೇವರಕೊಂಡ; ಷಣ್ಮುಖಪ್ರಿಯಾಗೆ ಸಿಕ್ತು ಚಾನ್ಸ್​​
ಷಣ್ಮುಖಪ್ರಿಯಾ, ವಿಜಯ್​ ದೇವರಕೊಂಡ
TV9 Web
| Edited By: |

Updated on: Sep 07, 2021 | 8:33 AM

Share

ನಟ ವಿಜಯ್​ ದೇವರಕೊಂಡ ಅವರಿಗೆ ಬಿಗ್​ ಬ್ರೇಕ್​ ನೀಡಿದ ಸಿನಿಮಾ ‘ಅರ್ಜುನ್​ ರೆಡ್ಡಿ’. ಆ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರು ದೇಶಾದ್ಯಂತ ಫೇಮಸ್​ ಆದರು. ಈಗ ಭಾರತೀಯ ಚಿತ್ರರಂಗದ ಬಹುಬೇಡಿಕೆ ನಟರಲ್ಲಿ ಅವರು ಕೂಡ ಮುಂಚೂಣಿಯಲ್ಲಿದ್ದಾರೆ. ಪ್ರಸ್ತುತ ವಿಜಯ್​ ದೇವರಕೊಂಡ ನಟಿಸುತ್ತಿರುವ ‘ಲೈಗರ್​’ ಚಿತ್ರದ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಯ ಮಟ್ಟವನ್ನು ಹೆಚ್ಚಲು ಇನ್ನೊಂದು ಕಾರಣ ಸಿಕ್ಕಿದೆ. ಈ ಸಿನಿಮಾದಲ್ಲಿ ‘ಇಂಡಿಯನ್​ ಐಡಲ್​ 12’ ಖ್ಯಾತಿಯ ಷಣ್ಮುಖಪ್ರಿಯಾ ಅವರು ಒಂದು ಸಾಂಗ್​ ಹಾಡಿದ್ದಾರೆ. ಈ ಸುದ್ದಿ ಕೇಳಿ ಅವರ ಫ್ಯಾನ್ಸ್​ ಫುಲ್​ ಖುಷ್​ ಆಗಿದ್ದಾರೆ.

ಭಾರಿ ಸೆನ್ಸೇಷನ್​ ಕ್ರಿಯೇಟ್​ ಮಾಡಿದ್ದ ‘ಇಂಡಿಯನ್​ ಐಡಲ್​ 12’ ರಿಯಾಲಿಟಿ ಶೋನಲ್ಲಿ ತೆಲುಗು ಮೂಲದ ಗಾಯಕಿ ಷಣ್ಮುಖಪ್ರಿಯಾ ಅವರು ಭಾಗವಹಿಸಿದ್ದರು. ಹಿಂದಿ ಗಾಯಕರ ಮಧ್ಯೆ ಅವರು ಟಫ್​ ಸ್ಪರ್ಧೆ ನೀಡಿದ್ದರು. ಅಲ್ಲದೇ ಅವರ ಕಂಠಕ್ಕೆ ವಿಜಯ್​ ದೇವರಕೊಂಡ ಕೂಡ ಮಾರುಹೋಗಿದ್ದರು. ಆಗಲೇ ಅವರೊಂದು ಭರವಸೆ ನೀಡಿದ್ದರು. ಅದನ್ನು ಈಗ ಈಡೇರಿಸಿದ್ದಾರೆ.

‘ಷಣ್ಮುಖಪ್ರಿಯಾ ಈ ರಿಯಾಲಿಟಿ ಶೋನಲ್ಲಿ ಗೆದ್ದರೂ, ಗೆಲ್ಲದಿದ್ದರೂ ಹೈದರಾಬಾದ್​ಗೆ ಬಂದ ಬಳಿಕ ನೀನು ನನ್ನ ಭೇಟಿ ಆಗಬೇಕು. ನನ್ನ ಸಿನಿಮಾದಲ್ಲಿ ಹಾಡುವ ಅವಕಾಶ ನಿನಗೆ ನೀಡುತ್ತೇನೆ. ಗುಡ್​ ಲುಕ್​’ ಎಂದು ವಿಡಿಯೋ ಮೆಸೇಜ್​ ಮೂಲಕ ವಿಜಯ್​ ದೇವರಕೊಂಡ ಹೇಳಿದ್ದರು. ಅದೀಗ ನಿಜವಾಗಿದೆ. ಅವರ ಮನೆಗೆ ಷಣ್ಮುಖಪ್ರಿಯಾ ಭೇಟಿ ನೀಡಿದ್ದಾರೆ. ನೆಚ್ಚಿನ ನಟನನ್ನು ಭೇಟಿಯಾಗಿ ಖುಷಿಪಟ್ಟಿದ್ದಾರೆ. ಅಲ್ಲದೇ, ‘ಲೈಗರ್​’ ಸಿನಿಮಾದಲ್ಲಿ ಹಾಡುವ ಅವಕಾಶ ಕೂಡ ಸಿಕ್ಕಿದೆ.

‘ಇಂಡಿಯಲ್​ ಐಡಲ್​ 12’ ಸ್ಪರ್ಧೆಯಲ್ಲಿ ಗೆಲ್ಲಲು ಷಣ್ಮುಖಪ್ರಿಯಾಗೆ ಸಾಧ್ಯವಾಗಲಿಲ್ಲ. ಆದರೆ ತೆಲುಗು ಮಂದಿಯ ಮನಗೆಲ್ಲುವಲ್ಲಿ ಅವರು ಯಶಸ್ವಿ ಆಗಿದ್ದಾರೆ. ‘ವಿಜಯ್​ ದೇವರಕೊಂಡ ಅವರು ನಮಗೆ ಈ ರೀತಿ ಬೆಂಬಲ ನೀಡುತ್ತಾರೆ ಎಂದು ನಾನು ನಿರೀಕ್ಷಿಸಿರಲಿಲ್ಲ. ಮೊದಲ ಬಾರಿಗೆ ಅವರ ವಿಡಿಯೋ ನೋಡಿದಾಗ ತುಂಬ ಆಶ್ಚರ್ಯ ಆಗಿತ್ತು’ ಎಂದು ಷಣ್ಮುಖಪ್ರಿಯಾ ಹೇಳಿದ್ದಾರೆ. ಅವರ ಧ್ವನಿಗೆ ಸರಿಹೊಂದುವಂತಹ ಗೀತೆಯನ್ನು ಲೈಗರ್​ ಸಿನಿಮಾದಲ್ಲಿ ಸೇರಿಸಲಾಗಿದೆ. ಈ ಚಿತ್ರಕ್ಕೆ ಪುರಿ ಜಗನ್ನಾಥ್​ ನಿರ್ದೇಶನ ಮಾಡುತ್ತಿದ್ದು, ತೆಲುಗಿನ ಜೊತೆಗೆ ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲೂ ಮೂಡಿಬರುತ್ತಿದೆ.

ಇದನ್ನೂ ಓದಿ:

‘ನನ್ನ ಜೊತೆ ಮನೆಯಲ್ಲೇ ಇರು’ ಎಂದು ರಶ್ಮಿಕಾಗೆ ಒತ್ತಾಯ; ಹೀಗಾದರೆ ಕೆಲಸ ಮಾಡೋದು ಹೇಗೆ?

ಜಿಮ್​ನಲ್ಲಿ ಒಟ್ಟಾಗಿ ವರ್ಕೌಟ್​ ಮಾಡಿದ ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ; ಫೋಟೋ ವೈರಲ್

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ