AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಾವಂತ ಹುಡುಗಿಗೆ ಕೊಟ್ಟ ಮಾತು ಉಳಿಸಿಕೊಂಡ ವಿಜಯ್​ ದೇವರಕೊಂಡ; ಷಣ್ಮುಖಪ್ರಿಯಾಗೆ ಸಿಕ್ತು ಚಾನ್ಸ್​​

‘ಇಂಡಿಯನ್​ ಐಡಲ್​ 12’ ಶೋನಲ್ಲಿ ಹಿಂದಿ ಗಾಯಕರ ಮಧ್ಯೆ ಷಣ್ಮುಖಪ್ರಿಯಾ ಅವರು ಟಫ್​ ಸ್ಪರ್ಧೆ ನೀಡಿದ್ದರು. ಅಲ್ಲದೇ ಅವರ ಕಂಠಕ್ಕೆ ವಿಜಯ್​ ದೇವರಕೊಂಡ ಮಾರುಹೋಗಿದ್ದರು.

ಪ್ರತಿಭಾವಂತ ಹುಡುಗಿಗೆ ಕೊಟ್ಟ ಮಾತು ಉಳಿಸಿಕೊಂಡ ವಿಜಯ್​ ದೇವರಕೊಂಡ; ಷಣ್ಮುಖಪ್ರಿಯಾಗೆ ಸಿಕ್ತು ಚಾನ್ಸ್​​
ಷಣ್ಮುಖಪ್ರಿಯಾ, ವಿಜಯ್​ ದೇವರಕೊಂಡ
TV9 Web
| Edited By: |

Updated on: Sep 07, 2021 | 8:33 AM

Share

ನಟ ವಿಜಯ್​ ದೇವರಕೊಂಡ ಅವರಿಗೆ ಬಿಗ್​ ಬ್ರೇಕ್​ ನೀಡಿದ ಸಿನಿಮಾ ‘ಅರ್ಜುನ್​ ರೆಡ್ಡಿ’. ಆ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರು ದೇಶಾದ್ಯಂತ ಫೇಮಸ್​ ಆದರು. ಈಗ ಭಾರತೀಯ ಚಿತ್ರರಂಗದ ಬಹುಬೇಡಿಕೆ ನಟರಲ್ಲಿ ಅವರು ಕೂಡ ಮುಂಚೂಣಿಯಲ್ಲಿದ್ದಾರೆ. ಪ್ರಸ್ತುತ ವಿಜಯ್​ ದೇವರಕೊಂಡ ನಟಿಸುತ್ತಿರುವ ‘ಲೈಗರ್​’ ಚಿತ್ರದ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಯ ಮಟ್ಟವನ್ನು ಹೆಚ್ಚಲು ಇನ್ನೊಂದು ಕಾರಣ ಸಿಕ್ಕಿದೆ. ಈ ಸಿನಿಮಾದಲ್ಲಿ ‘ಇಂಡಿಯನ್​ ಐಡಲ್​ 12’ ಖ್ಯಾತಿಯ ಷಣ್ಮುಖಪ್ರಿಯಾ ಅವರು ಒಂದು ಸಾಂಗ್​ ಹಾಡಿದ್ದಾರೆ. ಈ ಸುದ್ದಿ ಕೇಳಿ ಅವರ ಫ್ಯಾನ್ಸ್​ ಫುಲ್​ ಖುಷ್​ ಆಗಿದ್ದಾರೆ.

ಭಾರಿ ಸೆನ್ಸೇಷನ್​ ಕ್ರಿಯೇಟ್​ ಮಾಡಿದ್ದ ‘ಇಂಡಿಯನ್​ ಐಡಲ್​ 12’ ರಿಯಾಲಿಟಿ ಶೋನಲ್ಲಿ ತೆಲುಗು ಮೂಲದ ಗಾಯಕಿ ಷಣ್ಮುಖಪ್ರಿಯಾ ಅವರು ಭಾಗವಹಿಸಿದ್ದರು. ಹಿಂದಿ ಗಾಯಕರ ಮಧ್ಯೆ ಅವರು ಟಫ್​ ಸ್ಪರ್ಧೆ ನೀಡಿದ್ದರು. ಅಲ್ಲದೇ ಅವರ ಕಂಠಕ್ಕೆ ವಿಜಯ್​ ದೇವರಕೊಂಡ ಕೂಡ ಮಾರುಹೋಗಿದ್ದರು. ಆಗಲೇ ಅವರೊಂದು ಭರವಸೆ ನೀಡಿದ್ದರು. ಅದನ್ನು ಈಗ ಈಡೇರಿಸಿದ್ದಾರೆ.

‘ಷಣ್ಮುಖಪ್ರಿಯಾ ಈ ರಿಯಾಲಿಟಿ ಶೋನಲ್ಲಿ ಗೆದ್ದರೂ, ಗೆಲ್ಲದಿದ್ದರೂ ಹೈದರಾಬಾದ್​ಗೆ ಬಂದ ಬಳಿಕ ನೀನು ನನ್ನ ಭೇಟಿ ಆಗಬೇಕು. ನನ್ನ ಸಿನಿಮಾದಲ್ಲಿ ಹಾಡುವ ಅವಕಾಶ ನಿನಗೆ ನೀಡುತ್ತೇನೆ. ಗುಡ್​ ಲುಕ್​’ ಎಂದು ವಿಡಿಯೋ ಮೆಸೇಜ್​ ಮೂಲಕ ವಿಜಯ್​ ದೇವರಕೊಂಡ ಹೇಳಿದ್ದರು. ಅದೀಗ ನಿಜವಾಗಿದೆ. ಅವರ ಮನೆಗೆ ಷಣ್ಮುಖಪ್ರಿಯಾ ಭೇಟಿ ನೀಡಿದ್ದಾರೆ. ನೆಚ್ಚಿನ ನಟನನ್ನು ಭೇಟಿಯಾಗಿ ಖುಷಿಪಟ್ಟಿದ್ದಾರೆ. ಅಲ್ಲದೇ, ‘ಲೈಗರ್​’ ಸಿನಿಮಾದಲ್ಲಿ ಹಾಡುವ ಅವಕಾಶ ಕೂಡ ಸಿಕ್ಕಿದೆ.

‘ಇಂಡಿಯಲ್​ ಐಡಲ್​ 12’ ಸ್ಪರ್ಧೆಯಲ್ಲಿ ಗೆಲ್ಲಲು ಷಣ್ಮುಖಪ್ರಿಯಾಗೆ ಸಾಧ್ಯವಾಗಲಿಲ್ಲ. ಆದರೆ ತೆಲುಗು ಮಂದಿಯ ಮನಗೆಲ್ಲುವಲ್ಲಿ ಅವರು ಯಶಸ್ವಿ ಆಗಿದ್ದಾರೆ. ‘ವಿಜಯ್​ ದೇವರಕೊಂಡ ಅವರು ನಮಗೆ ಈ ರೀತಿ ಬೆಂಬಲ ನೀಡುತ್ತಾರೆ ಎಂದು ನಾನು ನಿರೀಕ್ಷಿಸಿರಲಿಲ್ಲ. ಮೊದಲ ಬಾರಿಗೆ ಅವರ ವಿಡಿಯೋ ನೋಡಿದಾಗ ತುಂಬ ಆಶ್ಚರ್ಯ ಆಗಿತ್ತು’ ಎಂದು ಷಣ್ಮುಖಪ್ರಿಯಾ ಹೇಳಿದ್ದಾರೆ. ಅವರ ಧ್ವನಿಗೆ ಸರಿಹೊಂದುವಂತಹ ಗೀತೆಯನ್ನು ಲೈಗರ್​ ಸಿನಿಮಾದಲ್ಲಿ ಸೇರಿಸಲಾಗಿದೆ. ಈ ಚಿತ್ರಕ್ಕೆ ಪುರಿ ಜಗನ್ನಾಥ್​ ನಿರ್ದೇಶನ ಮಾಡುತ್ತಿದ್ದು, ತೆಲುಗಿನ ಜೊತೆಗೆ ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲೂ ಮೂಡಿಬರುತ್ತಿದೆ.

ಇದನ್ನೂ ಓದಿ:

‘ನನ್ನ ಜೊತೆ ಮನೆಯಲ್ಲೇ ಇರು’ ಎಂದು ರಶ್ಮಿಕಾಗೆ ಒತ್ತಾಯ; ಹೀಗಾದರೆ ಕೆಲಸ ಮಾಡೋದು ಹೇಗೆ?

ಜಿಮ್​ನಲ್ಲಿ ಒಟ್ಟಾಗಿ ವರ್ಕೌಟ್​ ಮಾಡಿದ ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ; ಫೋಟೋ ವೈರಲ್

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ