AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾಲಿಟಿ ಶೋ ಸುಳ್ಳು ಅನ್ನೋದಕ್ಕೆ ಮತ್ತೊಂದು ಸಾಕ್ಷಿ? ಹಿಗ್ಗಾಮುಗ್ಗ ಟ್ರೋಲ್​ ಮಾಡಿದ ನೆಟ್ಟಿಗರು

Neha Kakkar | Himesh Reshammiya: ಈ ಹಿಂದೆ ಕೂಡ ಇಂಡಿಯನ್​ ಐಡಲ್​ ಬಗ್ಗೆ ಆಕ್ಷೇಪಗಳು ಕೇಳಿಬಂದಿದ್ದವು. ಬರುಬರುತ್ತ ಇದು ದೈನಂದಿನ ಧಾರಾವಾಹಿ ಥರ ಆಗುತ್ತಿದೆ. ಬರೀ ಡ್ರಾಮಾ ಹೆಚ್ಚಾಗುತ್ತಿದೆ ಎಂದು ನೆಟ್ಟಿಗರು ಟ್ರೋಲ್​ ಮಾಡಿದ್ದಾರೆ.

ರಿಯಾಲಿಟಿ ಶೋ ಸುಳ್ಳು ಅನ್ನೋದಕ್ಕೆ ಮತ್ತೊಂದು ಸಾಕ್ಷಿ? ಹಿಗ್ಗಾಮುಗ್ಗ ಟ್ರೋಲ್​ ಮಾಡಿದ ನೆಟ್ಟಿಗರು
ಟ್ರೋಲ್​ಗೆ ಒಳಗಾದ ಇಂಡಿಯನ್​ ಐಡಲ್​ ಶೋ ನಿರ್ಣಾಯಕರು
ಮದನ್​ ಕುಮಾರ್​
|

Updated on: Jun 21, 2021 | 1:46 PM

Share

ಕಿರುತೆರೆಯ ರಿಯಾಲಿಟಿ ಶೋಗಳ ಅಸಲಿಯತ್ತಿನ ಬಗ್ಗೆ ಪ್ರೇಕ್ಷಕರಿಗೆ ಮೊದಲಿನಿಂದಲೂ ಅನುಮಾನ ಇದೆ. ಅದರಲ್ಲೂ ಹಿಂದಿಯ ‘ಇಂಡಿಯನ್​ ಐಡಲ್​’ ಸಿಂಗಿಂಗ್​ ರಿಯಾಲಿಟಿ ಶೋ ಹಲವು ವಿವಾದಗಳನ್ನು ಮಾಡಿಕೊಂಡಿದೆ. ಪ್ರತಿ ದಿನ ಈ ಕಾರ್ಯಕ್ರಮದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಹತ್ತು ಹಲವು ಕಾರಣಗಳಿಗಾಗಿ ಇದನ್ನು ಟ್ರೋಲ್​ ಮಾಡಲಾಗುತ್ತಿದೆ. ಈಗ ‘ಇಂಡಿಯನ್​ ಐಡಲ್​’ ಜಡ್ಜ್​ಗಳ ಹುಸಿ ಕಣ್ಣೀರು ಎಲ್ಲರಿಂದ ಟೀಕೆಗೆ ಒಳಪಡುತ್ತಿದೆ.

ಇತ್ತೀಚೆಗೆ ಫಾದರ್ಸ್​ ಡೇ ಪ್ರಯುಕ್ತ ‘ಇಂಡಿಯನ್​ ಐಡಲ್​’ ಸ್ಪರ್ಧಿಗಳು ವಿಶೇಷ ಹಾಡುಗಳನ್ನು ಹೇಳಿದರು. ಅಲ್ಲದೆ, ತಮ್ಮ ತಂದೆ ಬಗೆಗಿನ ಕಥೆಗಳನ್ನೂ ವೇದಿಕೆ ಮೇಲೆ ಶೇರ್​ ಮಾಡಿಕೊಂಡರು. ಅದನ್ನು ಕೇಳಿದ ನಿರ್ಣಾಯಕರಾದ ಹಿಮೇಶ್​ ರೇಷಮಿಯಾ ಮತ್ತು ನೇಹಾ ಕಕ್ಕರ್​ ಅವರು ಕಣ್ಣೀರು ಹಾಕಿದರು. ಆದರೆ ಅವರು ನಿಜವಾಗಿಯೂ ಅತ್ತಿಲ್ಲ ಎಂದು ಹಲವರು ಕಮೆಂಟ್​ ಮಾಡಿದ್ದಾರೆ. ಇದು ಹುಸಿ ಕಣ್ಣೀರು ಎಂದು ಟ್ರೋಲ್​ ಮಾಡಲಾಗುತ್ತಿದೆ.

ಬರುಬರುತ್ತ ಇದು ದೈನಂದಿನ ಧಾರಾವಾಹಿ ಥರ ಆಗುತ್ತಿದೆ. ಬರೀ ಡ್ರಾಮಾ ಹೆಚ್ಚಾಗುತ್ತಿದೆ. ಜಡ್ಜ್​ಗಳು ಓವರ್​ ಆ್ಯಕ್ಟಿಂಗ್​ ಮಾಡುವುದನ್ನು ನಿಲ್ಲಿಸಬೇಕು ಎಂದು ಜನರು ಟ್ರೋಲ್​ ಮಾಡಿದ್ದಾರೆ. ಕೆಲವರು ಈ ಶೋನಿಂದ ನಿರಾಶೆಗೊಂಡಿರುವುದು ಮಾತ್ರವಲ್ಲದೆ ವಿಪರೀತ ಕೋಪವನ್ನೂ ವ್ಯಕ್ತಪಡಿಸಿಕದ್ದಾರೆ. ಒಟ್ಟಾರೆ ಈ ಪ್ರಸಂಗಕ್ಕೆ ಸಂಬಂಧಿಸಿದಂತೆ ಟ್ವಿಟರ್​ನಲ್ಲಿ ಹಲವು ಬಗೆಯ ಮೀಮ್​ಗಳು ಹರಿದಾಡುತ್ತಿವೆ.

ಈ ಹಿಂದೆ ಕೂಡ ಇಂಡಿಯನ್​​ ಐಡಲ್​ ಬಗ್ಗೆ ಆಕ್ಷೇಪಗಳು ಕೇಳಿಬಂದಿದ್ದವು. ಸ್ಪರ್ಧಿಗಳನ್ನು ಹೊಗಳುವಂತೆ ಆಯೋಜಕರು ಒತ್ತಾಯ ಹೇರುತ್ತಾರೆ. ಸ್ಪರ್ಧಿಗಳ ನಡುವೆ ಸುಳ್ಳು ಪ್ರೇಮಕಥೆಯನ್ನು ಸೃಷ್ಟಿಸಲಾಗುತ್ತದೆ ಎಂಬಿತ್ಯಾದಿ ಆರೋಪಗಳನ್ನು ಮಾಡಲಾಗಿತ್ತು. ಈ ಶೋಗೆ ಅತಿಥಿಯಾಗಿ ಹೋಗಿದ್ದ ಕಿಶೋರ್​ ಕುಮಾರ್​ ಪುತ್ರ ಅಮಿತ್​ ಕುಮಾರ್​ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು.

‘ಸ್ಪರ್ಧಿಗಳು ಹೇಗೆ ಹಾಡಿದರೂ ಮೆಚ್ಚುಗೆ ವ್ಯಕ್ತಪಡಿಸಬೇಕು ಎಂದು ಮೇಕರ್​ಗಳು ನಮಗೆ ಹೇಳುತ್ತಿದ್ದರು. ಅದು ನಿಜಕ್ಕೂ ದೊಡ್ಡ ವಿಚಾರ. ಹೀಗಾಗಿ, ನನಗೆ ಜಡ್ಜ್​ ಆಗಿ ಮುಂದುವರಿಯೋಕೆ ಸಾಧ್ಯವಾಗುತ್ತಿಲ್ಲ. ಅವರಿಗೆ ಹೇಗೆ ಬೇಕೋ ಹಾಗೆ ಇರೋಕೆ ಸಾಧ್ಯವಿಲ್ಲ. ಹೀಗಾಗಿ, ನಾನು ಹೊರ ಬಂದೆ. ನಾನು ಯಾವುದೇ ಶೋಗಳಿಗೂ ಈಗ ಜಡ್ಜ್​ ಆಗಿ ಹೋಗುತ್ತಿಲ್ಲ’ ಎಂದು ಇಂಡಿಯನ್​ ಐಡಲ್​ ಐದು ಹಾಗೂ ಆರನೇ ಸೀಸನ್​ ಜಡ್ಜ್​ ಆಗಿದ್ದ ಸುನಿಧಿ ಚೌಹಾಣ್​ ಹೇಳಿದ್ದರು.

ಇದನ್ನೂ ಓದಿ:

ಕೆಟ್ಟ ಗಾಯನ ಕೇಳಿ ಇಂಡಿಯನ್​ ಐಡಲ್​ ಶೋನಲ್ಲಿ ಕೆನ್ನೆಗೆ ಹೊಡೆದುಕೊಂಡಿದ್ದ ಜಡ್ಜ್​

ಬಡತನ, ಫೇಕ್​ ಲವ್​ ಸ್ಟೋರಿಗಳೇ ರಿಯಾಲಿಟಿ ಶೋಗಳ ಬಂಡವಾಳ; ಇಂಡಿಯನ್​ ಐಡಲ್​ ವಿನ್ನರ್​ ಆರೋಪ

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು