AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾಲಿಟಿ ಶೋ ಸುಳ್ಳು ಅನ್ನೋದಕ್ಕೆ ಮತ್ತೊಂದು ಸಾಕ್ಷಿ? ಹಿಗ್ಗಾಮುಗ್ಗ ಟ್ರೋಲ್​ ಮಾಡಿದ ನೆಟ್ಟಿಗರು

Neha Kakkar | Himesh Reshammiya: ಈ ಹಿಂದೆ ಕೂಡ ಇಂಡಿಯನ್​ ಐಡಲ್​ ಬಗ್ಗೆ ಆಕ್ಷೇಪಗಳು ಕೇಳಿಬಂದಿದ್ದವು. ಬರುಬರುತ್ತ ಇದು ದೈನಂದಿನ ಧಾರಾವಾಹಿ ಥರ ಆಗುತ್ತಿದೆ. ಬರೀ ಡ್ರಾಮಾ ಹೆಚ್ಚಾಗುತ್ತಿದೆ ಎಂದು ನೆಟ್ಟಿಗರು ಟ್ರೋಲ್​ ಮಾಡಿದ್ದಾರೆ.

ರಿಯಾಲಿಟಿ ಶೋ ಸುಳ್ಳು ಅನ್ನೋದಕ್ಕೆ ಮತ್ತೊಂದು ಸಾಕ್ಷಿ? ಹಿಗ್ಗಾಮುಗ್ಗ ಟ್ರೋಲ್​ ಮಾಡಿದ ನೆಟ್ಟಿಗರು
ಟ್ರೋಲ್​ಗೆ ಒಳಗಾದ ಇಂಡಿಯನ್​ ಐಡಲ್​ ಶೋ ನಿರ್ಣಾಯಕರು
ಮದನ್​ ಕುಮಾರ್​
|

Updated on: Jun 21, 2021 | 1:46 PM

Share

ಕಿರುತೆರೆಯ ರಿಯಾಲಿಟಿ ಶೋಗಳ ಅಸಲಿಯತ್ತಿನ ಬಗ್ಗೆ ಪ್ರೇಕ್ಷಕರಿಗೆ ಮೊದಲಿನಿಂದಲೂ ಅನುಮಾನ ಇದೆ. ಅದರಲ್ಲೂ ಹಿಂದಿಯ ‘ಇಂಡಿಯನ್​ ಐಡಲ್​’ ಸಿಂಗಿಂಗ್​ ರಿಯಾಲಿಟಿ ಶೋ ಹಲವು ವಿವಾದಗಳನ್ನು ಮಾಡಿಕೊಂಡಿದೆ. ಪ್ರತಿ ದಿನ ಈ ಕಾರ್ಯಕ್ರಮದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಹತ್ತು ಹಲವು ಕಾರಣಗಳಿಗಾಗಿ ಇದನ್ನು ಟ್ರೋಲ್​ ಮಾಡಲಾಗುತ್ತಿದೆ. ಈಗ ‘ಇಂಡಿಯನ್​ ಐಡಲ್​’ ಜಡ್ಜ್​ಗಳ ಹುಸಿ ಕಣ್ಣೀರು ಎಲ್ಲರಿಂದ ಟೀಕೆಗೆ ಒಳಪಡುತ್ತಿದೆ.

ಇತ್ತೀಚೆಗೆ ಫಾದರ್ಸ್​ ಡೇ ಪ್ರಯುಕ್ತ ‘ಇಂಡಿಯನ್​ ಐಡಲ್​’ ಸ್ಪರ್ಧಿಗಳು ವಿಶೇಷ ಹಾಡುಗಳನ್ನು ಹೇಳಿದರು. ಅಲ್ಲದೆ, ತಮ್ಮ ತಂದೆ ಬಗೆಗಿನ ಕಥೆಗಳನ್ನೂ ವೇದಿಕೆ ಮೇಲೆ ಶೇರ್​ ಮಾಡಿಕೊಂಡರು. ಅದನ್ನು ಕೇಳಿದ ನಿರ್ಣಾಯಕರಾದ ಹಿಮೇಶ್​ ರೇಷಮಿಯಾ ಮತ್ತು ನೇಹಾ ಕಕ್ಕರ್​ ಅವರು ಕಣ್ಣೀರು ಹಾಕಿದರು. ಆದರೆ ಅವರು ನಿಜವಾಗಿಯೂ ಅತ್ತಿಲ್ಲ ಎಂದು ಹಲವರು ಕಮೆಂಟ್​ ಮಾಡಿದ್ದಾರೆ. ಇದು ಹುಸಿ ಕಣ್ಣೀರು ಎಂದು ಟ್ರೋಲ್​ ಮಾಡಲಾಗುತ್ತಿದೆ.

ಬರುಬರುತ್ತ ಇದು ದೈನಂದಿನ ಧಾರಾವಾಹಿ ಥರ ಆಗುತ್ತಿದೆ. ಬರೀ ಡ್ರಾಮಾ ಹೆಚ್ಚಾಗುತ್ತಿದೆ. ಜಡ್ಜ್​ಗಳು ಓವರ್​ ಆ್ಯಕ್ಟಿಂಗ್​ ಮಾಡುವುದನ್ನು ನಿಲ್ಲಿಸಬೇಕು ಎಂದು ಜನರು ಟ್ರೋಲ್​ ಮಾಡಿದ್ದಾರೆ. ಕೆಲವರು ಈ ಶೋನಿಂದ ನಿರಾಶೆಗೊಂಡಿರುವುದು ಮಾತ್ರವಲ್ಲದೆ ವಿಪರೀತ ಕೋಪವನ್ನೂ ವ್ಯಕ್ತಪಡಿಸಿಕದ್ದಾರೆ. ಒಟ್ಟಾರೆ ಈ ಪ್ರಸಂಗಕ್ಕೆ ಸಂಬಂಧಿಸಿದಂತೆ ಟ್ವಿಟರ್​ನಲ್ಲಿ ಹಲವು ಬಗೆಯ ಮೀಮ್​ಗಳು ಹರಿದಾಡುತ್ತಿವೆ.

ಈ ಹಿಂದೆ ಕೂಡ ಇಂಡಿಯನ್​​ ಐಡಲ್​ ಬಗ್ಗೆ ಆಕ್ಷೇಪಗಳು ಕೇಳಿಬಂದಿದ್ದವು. ಸ್ಪರ್ಧಿಗಳನ್ನು ಹೊಗಳುವಂತೆ ಆಯೋಜಕರು ಒತ್ತಾಯ ಹೇರುತ್ತಾರೆ. ಸ್ಪರ್ಧಿಗಳ ನಡುವೆ ಸುಳ್ಳು ಪ್ರೇಮಕಥೆಯನ್ನು ಸೃಷ್ಟಿಸಲಾಗುತ್ತದೆ ಎಂಬಿತ್ಯಾದಿ ಆರೋಪಗಳನ್ನು ಮಾಡಲಾಗಿತ್ತು. ಈ ಶೋಗೆ ಅತಿಥಿಯಾಗಿ ಹೋಗಿದ್ದ ಕಿಶೋರ್​ ಕುಮಾರ್​ ಪುತ್ರ ಅಮಿತ್​ ಕುಮಾರ್​ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು.

‘ಸ್ಪರ್ಧಿಗಳು ಹೇಗೆ ಹಾಡಿದರೂ ಮೆಚ್ಚುಗೆ ವ್ಯಕ್ತಪಡಿಸಬೇಕು ಎಂದು ಮೇಕರ್​ಗಳು ನಮಗೆ ಹೇಳುತ್ತಿದ್ದರು. ಅದು ನಿಜಕ್ಕೂ ದೊಡ್ಡ ವಿಚಾರ. ಹೀಗಾಗಿ, ನನಗೆ ಜಡ್ಜ್​ ಆಗಿ ಮುಂದುವರಿಯೋಕೆ ಸಾಧ್ಯವಾಗುತ್ತಿಲ್ಲ. ಅವರಿಗೆ ಹೇಗೆ ಬೇಕೋ ಹಾಗೆ ಇರೋಕೆ ಸಾಧ್ಯವಿಲ್ಲ. ಹೀಗಾಗಿ, ನಾನು ಹೊರ ಬಂದೆ. ನಾನು ಯಾವುದೇ ಶೋಗಳಿಗೂ ಈಗ ಜಡ್ಜ್​ ಆಗಿ ಹೋಗುತ್ತಿಲ್ಲ’ ಎಂದು ಇಂಡಿಯನ್​ ಐಡಲ್​ ಐದು ಹಾಗೂ ಆರನೇ ಸೀಸನ್​ ಜಡ್ಜ್​ ಆಗಿದ್ದ ಸುನಿಧಿ ಚೌಹಾಣ್​ ಹೇಳಿದ್ದರು.

ಇದನ್ನೂ ಓದಿ:

ಕೆಟ್ಟ ಗಾಯನ ಕೇಳಿ ಇಂಡಿಯನ್​ ಐಡಲ್​ ಶೋನಲ್ಲಿ ಕೆನ್ನೆಗೆ ಹೊಡೆದುಕೊಂಡಿದ್ದ ಜಡ್ಜ್​

ಬಡತನ, ಫೇಕ್​ ಲವ್​ ಸ್ಟೋರಿಗಳೇ ರಿಯಾಲಿಟಿ ಶೋಗಳ ಬಂಡವಾಳ; ಇಂಡಿಯನ್​ ಐಡಲ್​ ವಿನ್ನರ್​ ಆರೋಪ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ