AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಟ್ಟ ಗಾಯನ ಕೇಳಿ ಇಂಡಿಯನ್​ ಐಡಲ್​ ಶೋನಲ್ಲಿ ಕೆನ್ನೆಗೆ ಹೊಡೆದುಕೊಂಡಿದ್ದ ಜಡ್ಜ್​

ಪವನ್​ ಅವರ ಹಾಡನ್ನು ಕೇಳಿ ನೇಹಾ ಕೂಡ ನಕ್ಕಿದ್ದರು. ಪವನ್​ ಕೈನಲ್ಲಿ ಹಿಡಿದು ತಂದಿದ್ದ ನೀರನ್ನು ಕುಡಿಯುವಂತೆ ನೇಹಾ ಮನವಿ ಮಾಡಿಕೊಂಡಿದ್ದರು.

ಕೆಟ್ಟ ಗಾಯನ ಕೇಳಿ ಇಂಡಿಯನ್​ ಐಡಲ್​ ಶೋನಲ್ಲಿ ಕೆನ್ನೆಗೆ ಹೊಡೆದುಕೊಂಡಿದ್ದ ಜಡ್ಜ್​
ಅನು ಮಲಿಕ್
ರಾಜೇಶ್ ದುಗ್ಗುಮನೆ
|

Updated on: Jun 14, 2021 | 7:26 PM

Share

ಇಂಡಿಯನ್​ ಐಡಲ್​ ಶೋ ಬಗ್ಗೆ ಸಾಕಷ್ಟು ಜನರು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಟಿಆರ್​ಪಿಗೋಸ್ಕರ ಇಲ್ಲ-ಸಲ್ಲದ ಮಾರ್ಗ ಅನುಸರಿಸುತ್ತಿದ್ದಾರೆ ಎಂದು ಜಡ್ಜ್​ ಹಾಗೂ ಸ್ಪರ್ಧಿಗಳು ಕಿಡಿಕಾರಿದ್ದರು. ಈಗ ಇಂಡಿಯನ್​ ಐಡಲ್​ನ ಮತ್ತೊಂದು ಹಳೆಯ ವಿಡಿಯೋ ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಜಡ್ಜ್​ ಅನು ಮಲಿಕ್​ ತಮ್ಮ ಕೆನ್ನೆಗೆ ತಾವೇ ಹೊಡೆದುಕೊಂಡಿದ್ದಾರೆ.

ಹೌದು, ಈ ಘಟನೆ ನಡೆದಿದ್ದು ಇಂಡಿಯನ್​ ಐಡಲ್ ಸೀಸನ್ 11ರಲ್ಲಿ. ಅನು ಮಲಿಕ್​, ನೇಹಾ ಕಕ್ಕರ್ ಮತ್ತು ವಿಶಾಲ್ ದಡ್ಲಾನಿ​ ಜಡ್ಜ್​ ಆಗಿದ್ದರು. ಪವನ್​ ಹೆಸರಿನ ವ್ಯಕ್ತಿ ಆಡಿಷನ್​ಗೆ ಆಗಮಿಸಿದ್ದರು. ‘ಯೇ ದಿಲ್​ ಹೈ ಮುಷ್ಕಿಲ್’​ ಚಿತ್ರದ ‘ಬುಲ್ಲೆಯಾ’ ಹಾಡನ್ನು ಕೀರಲು ಧ್ವನಿಯಲ್ಲಿ ಹಾಡಿದ್ದರು. ಇದನ್ನು ಕೇಳುತ್ತಿದ್ದಂತೆಯೇ ಅನು ಮಲಿಕ್ ತಮ್ಮ ಕೆನ್ನೆಗೆ ತಾವು ಜೋರಾಗಿ ಹೊಡೆದುಕೊಳ್ಳಲು ಆರಂಭಿಸಿದ್ದರು. ಇದಕ್ಕೆ ವಾಹಿನಿಯವರು ಸ್ಪೆಷಲ್​ ಏಫೆಕ್ಟ್​ ಕೂಡ ನೀಡಿದ್ದರು.

ಪವನ್​ ಅವರ ಹಾಡನ್ನು ಕೇಳಿ ನೇಹಾ ಕೂಡ ನಕ್ಕಿದ್ದರು. ಪವನ್​ ಕೈನಲ್ಲಿ ಹಿಡಿದು ತಂದಿದ್ದ ನೀರನ್ನು ಕುಡಿಯುವಂತೆ ನೇಹಾ ಮನವಿ ಮಾಡಿಕೊಂಡಿದ್ದರು. ಇದರಿಂದ ಪವನ್ ತೀವ್ರ ಮುಜುಗರಕ್ಕೆ ಒಳಗಾಗಿದ್ದರು.

ಇಂಡಿಯನ್​ ಐಡಲ್ ಬಗ್ಗೆ ಸಾಕಷ್ಟು ಜನರು ಅಸಮಾಧಾನ ಹೊರಹಾಕಿದ್ದಾರೆ. ಇಂಡಿಯನ್​ ಐಡಲ್​ ಐದು ಹಾಗೂ ಆರನೇ ಸೀಸನ್​ ಜಡ್ಜ್​ ಆಗಿದ್ದ ಸುನಿಧಿ ಚೌಹಾಣ್​ ಈ ಶೋನಿಂದ ಹೊರ ಬಂದಿದ್ದರು. ಅಲ್ಲದೆ, ಈ ಶೋ ಸ್ಕ್ರಿಪ್ಟೆಡ್​ ರೂಪದಲ್ಲಿ ನಡೆಯುತ್ತಿದೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ‘ಸ್ಪರ್ಧಿಗಳು ಹೇಗೆ ಹಾಡಿದರೂ ಮೆಚ್ಚುಗೆ ವ್ಯಕ್ತಪಡಿಸಬೇಕು ಎಂದು ಮೇಕರ್​ಗಳು ನಮಗೆ ಹೇಳುತ್ತಿದ್ದರು. ಅದು ನಿಜಕ್ಕೂ ದೊಡ್ಡ ವಿಚಾರ. ಹೀಗಾಗಿ, ನನಗೆ ಜಡ್ಜ್​ ಆಗಿ ಮುಂದುವರಿಯೋಕೆ ಸಾಧ್ಯವಾಗುತ್ತಿಲ್ಲ. ಅವರಿಗೆ ಹೇಗೆ ಬೇಕೋ ಹಾಗೆ ಇರೋಕೆ ಸಾಧ್ಯವಿಲ್ಲ. ಹೀಗಾಗಿ, ನಾನು ಹೊರ ಬಂದೆ. ನಾನು ಯಾವುದೇ ಶೋಗಳಿಗೂ ಈಗ ಜಡ್ಜ್​ ಆಗಿ ಹೋಗುತ್ತಿಲ್ಲ ಎಂದು ಸುನಿಧಿ ಹೇಳಿದ್ದರು.

ಇದನ್ನೂ ಓದಿ: ಬಡತನ, ಫೇಕ್​ ಲವ್​ ಸ್ಟೋರಿಗಳೇ ರಿಯಾಲಿಟಿ ಶೋಗಳ ಬಂಡವಾಳ; ಇಂಡಿಯನ್​ ಐಡಲ್​ ವಿನ್ನರ್​ ಆರೋಪ

ಇಂಡಿಯನ್ ಐಡಲ್​ ಫೇಕ್​ ಎಂದು ಹೊರ ಬಂದ ಜಡ್ಜ್​ ಬಿಚ್ಚಿಟ್ರು ಅಸಲಿ ವಿಚಾರ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ