AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಟ್ಟ ಗಾಯನ ಕೇಳಿ ಇಂಡಿಯನ್​ ಐಡಲ್​ ಶೋನಲ್ಲಿ ಕೆನ್ನೆಗೆ ಹೊಡೆದುಕೊಂಡಿದ್ದ ಜಡ್ಜ್​

ಪವನ್​ ಅವರ ಹಾಡನ್ನು ಕೇಳಿ ನೇಹಾ ಕೂಡ ನಕ್ಕಿದ್ದರು. ಪವನ್​ ಕೈನಲ್ಲಿ ಹಿಡಿದು ತಂದಿದ್ದ ನೀರನ್ನು ಕುಡಿಯುವಂತೆ ನೇಹಾ ಮನವಿ ಮಾಡಿಕೊಂಡಿದ್ದರು.

ಕೆಟ್ಟ ಗಾಯನ ಕೇಳಿ ಇಂಡಿಯನ್​ ಐಡಲ್​ ಶೋನಲ್ಲಿ ಕೆನ್ನೆಗೆ ಹೊಡೆದುಕೊಂಡಿದ್ದ ಜಡ್ಜ್​
ಅನು ಮಲಿಕ್
ರಾಜೇಶ್ ದುಗ್ಗುಮನೆ
|

Updated on: Jun 14, 2021 | 7:26 PM

Share

ಇಂಡಿಯನ್​ ಐಡಲ್​ ಶೋ ಬಗ್ಗೆ ಸಾಕಷ್ಟು ಜನರು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಟಿಆರ್​ಪಿಗೋಸ್ಕರ ಇಲ್ಲ-ಸಲ್ಲದ ಮಾರ್ಗ ಅನುಸರಿಸುತ್ತಿದ್ದಾರೆ ಎಂದು ಜಡ್ಜ್​ ಹಾಗೂ ಸ್ಪರ್ಧಿಗಳು ಕಿಡಿಕಾರಿದ್ದರು. ಈಗ ಇಂಡಿಯನ್​ ಐಡಲ್​ನ ಮತ್ತೊಂದು ಹಳೆಯ ವಿಡಿಯೋ ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಜಡ್ಜ್​ ಅನು ಮಲಿಕ್​ ತಮ್ಮ ಕೆನ್ನೆಗೆ ತಾವೇ ಹೊಡೆದುಕೊಂಡಿದ್ದಾರೆ.

ಹೌದು, ಈ ಘಟನೆ ನಡೆದಿದ್ದು ಇಂಡಿಯನ್​ ಐಡಲ್ ಸೀಸನ್ 11ರಲ್ಲಿ. ಅನು ಮಲಿಕ್​, ನೇಹಾ ಕಕ್ಕರ್ ಮತ್ತು ವಿಶಾಲ್ ದಡ್ಲಾನಿ​ ಜಡ್ಜ್​ ಆಗಿದ್ದರು. ಪವನ್​ ಹೆಸರಿನ ವ್ಯಕ್ತಿ ಆಡಿಷನ್​ಗೆ ಆಗಮಿಸಿದ್ದರು. ‘ಯೇ ದಿಲ್​ ಹೈ ಮುಷ್ಕಿಲ್’​ ಚಿತ್ರದ ‘ಬುಲ್ಲೆಯಾ’ ಹಾಡನ್ನು ಕೀರಲು ಧ್ವನಿಯಲ್ಲಿ ಹಾಡಿದ್ದರು. ಇದನ್ನು ಕೇಳುತ್ತಿದ್ದಂತೆಯೇ ಅನು ಮಲಿಕ್ ತಮ್ಮ ಕೆನ್ನೆಗೆ ತಾವು ಜೋರಾಗಿ ಹೊಡೆದುಕೊಳ್ಳಲು ಆರಂಭಿಸಿದ್ದರು. ಇದಕ್ಕೆ ವಾಹಿನಿಯವರು ಸ್ಪೆಷಲ್​ ಏಫೆಕ್ಟ್​ ಕೂಡ ನೀಡಿದ್ದರು.

ಪವನ್​ ಅವರ ಹಾಡನ್ನು ಕೇಳಿ ನೇಹಾ ಕೂಡ ನಕ್ಕಿದ್ದರು. ಪವನ್​ ಕೈನಲ್ಲಿ ಹಿಡಿದು ತಂದಿದ್ದ ನೀರನ್ನು ಕುಡಿಯುವಂತೆ ನೇಹಾ ಮನವಿ ಮಾಡಿಕೊಂಡಿದ್ದರು. ಇದರಿಂದ ಪವನ್ ತೀವ್ರ ಮುಜುಗರಕ್ಕೆ ಒಳಗಾಗಿದ್ದರು.

ಇಂಡಿಯನ್​ ಐಡಲ್ ಬಗ್ಗೆ ಸಾಕಷ್ಟು ಜನರು ಅಸಮಾಧಾನ ಹೊರಹಾಕಿದ್ದಾರೆ. ಇಂಡಿಯನ್​ ಐಡಲ್​ ಐದು ಹಾಗೂ ಆರನೇ ಸೀಸನ್​ ಜಡ್ಜ್​ ಆಗಿದ್ದ ಸುನಿಧಿ ಚೌಹಾಣ್​ ಈ ಶೋನಿಂದ ಹೊರ ಬಂದಿದ್ದರು. ಅಲ್ಲದೆ, ಈ ಶೋ ಸ್ಕ್ರಿಪ್ಟೆಡ್​ ರೂಪದಲ್ಲಿ ನಡೆಯುತ್ತಿದೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ‘ಸ್ಪರ್ಧಿಗಳು ಹೇಗೆ ಹಾಡಿದರೂ ಮೆಚ್ಚುಗೆ ವ್ಯಕ್ತಪಡಿಸಬೇಕು ಎಂದು ಮೇಕರ್​ಗಳು ನಮಗೆ ಹೇಳುತ್ತಿದ್ದರು. ಅದು ನಿಜಕ್ಕೂ ದೊಡ್ಡ ವಿಚಾರ. ಹೀಗಾಗಿ, ನನಗೆ ಜಡ್ಜ್​ ಆಗಿ ಮುಂದುವರಿಯೋಕೆ ಸಾಧ್ಯವಾಗುತ್ತಿಲ್ಲ. ಅವರಿಗೆ ಹೇಗೆ ಬೇಕೋ ಹಾಗೆ ಇರೋಕೆ ಸಾಧ್ಯವಿಲ್ಲ. ಹೀಗಾಗಿ, ನಾನು ಹೊರ ಬಂದೆ. ನಾನು ಯಾವುದೇ ಶೋಗಳಿಗೂ ಈಗ ಜಡ್ಜ್​ ಆಗಿ ಹೋಗುತ್ತಿಲ್ಲ ಎಂದು ಸುನಿಧಿ ಹೇಳಿದ್ದರು.

ಇದನ್ನೂ ಓದಿ: ಬಡತನ, ಫೇಕ್​ ಲವ್​ ಸ್ಟೋರಿಗಳೇ ರಿಯಾಲಿಟಿ ಶೋಗಳ ಬಂಡವಾಳ; ಇಂಡಿಯನ್​ ಐಡಲ್​ ವಿನ್ನರ್​ ಆರೋಪ

ಇಂಡಿಯನ್ ಐಡಲ್​ ಫೇಕ್​ ಎಂದು ಹೊರ ಬಂದ ಜಡ್ಜ್​ ಬಿಚ್ಚಿಟ್ರು ಅಸಲಿ ವಿಚಾರ

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು