AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳಾಂಗಣ ಚಿತ್ರೀಕರಣಕ್ಕೂ ಇಲ್ಲ ಅವಕಾಶ; ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್​ ಸ್ಪಷ್ಟನೆ

ಕಳೆದ ಬಾರಿ ಕೊರೊನಾ ಕರ್ಫ್ಯೂ ವೇಳೆ ಬೆಳಗ್ಗೆ 6-12 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಿತ್ತು. ಅಲ್ಲದೆ, ಜನರ ಓಡಾಟಕ್ಕೂ ಅಷ್ಟಾಗಿ ಕಠಿಣ ನಿರ್ಬಂಧ ಇರಲಿಲ್ಲ.

ಒಳಾಂಗಣ ಚಿತ್ರೀಕರಣಕ್ಕೂ ಇಲ್ಲ ಅವಕಾಶ; ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್​ ಸ್ಪಷ್ಟನೆ
ಸಾಂರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: May 07, 2021 | 8:24 PM

Share

ಕರ್ನಾಟಕದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಹೀಗಾಗಿ 14 ದಿನಗಳ ಕಾಲ ಕರ್ನಾಟಕ ಸರ್ಕಾರ ಲಾಕ್​ಡೌನ್ ಘೋಷಣೆ ಮಾಡಿದೆ. ಮೇ 10ರಿಂದ ಲಾಕ್​ಡೌನ್​ ನಿಯಮ ಜಾರಿಗೆ ಬರಲಿದೆ. ಈ ಲಾಕ್​ಡೌನ್​ ವೇಳೆ ಧಾರಾವಾಹಿ ಹಾಗೂ ಸಿನಿಮಾ ಶೂಟಿಂಗ್​ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ.

ಕಳೆದ ಬಾರಿ ಕೊರೊನಾ ಕರ್ಫ್ಯೂ ವೇಳೆ ಬೆಳಗ್ಗೆ 6-12 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಿತ್ತು. ಅಲ್ಲದೆ, ಜನರ ಓಡಾಟಕ್ಕೂ ಅಷ್ಟಾಗಿ ಕಠಿಣ ನಿರ್ಬಂಧ ಇರಲಿಲ್ಲ. ಹೀಗಾಗಿ, ಧಾರಾವಾಹಿಗಳನ್ನು ಒಳಾಂಗಣದಲ್ಲಿ ಶೂಟಿಂಗ್​ ನಡೆಸುತ್ತಿದ್ದವು. ಆದರೆ, ಈ ಬಾರಿ ಸರ್ಕಾರ ಅದನ್ನು ಹಿಂಪಡೆದಿದೆ.

ರಿಯಾಲಿಟಿ ಶೋಗಳು ಹಾಗೂ ಧಾರಾವಾಹಿಗಳು ಇಂಡೋರ್​ ಶೂಟಿಂಗ್​ ಮಾಡುತ್ತಿವೆ. ಇದಕ್ಕೆ ಏನಾದರೂ ನಿರ್ಬಂಧ ಇದೆಯೇ ಎನ್ನುವ ಪ್ರಶ್ನೆಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರಿಗೆ ಕೇಳಲಾಯಿತು. ಈ ಬಗ್ಗೆ ಉತ್ತರಿಸಿದ ಅವರು, ಈ ಬಾರಿ ಒಳಾಂಗಣ ಶೂಟಿಂಗ್​ಗೆ ಯಾವುದೇ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದರಿಂದ ಒಳಾಂಗಣದಲ್ಲಿ ಶೂಟಿಂಗ್​ ಮಾಡುತ್ತಿರುವವರು ಈಗಲೇ ಶೂಟಿಂಗ್​ ನಿಲ್ಲಿಸಬೇಕಾಗಬಹುದು.

ಈ ಬಾರಿ ಹಾಲಿನ ಬೂತ್‌ ತೆರೆಯಲು ಸಂಜೆವರೆಗೂ ಅವಕಾಶ ನೀಡಲಾಗಿದೆ. ಸರ್ಕಾರಿ ಕಚೇರಿ ಭಾಗಶಃ ಕೆಲಸ ನಿರ್ವಹಿಸುತ್ತವೆ. ಕಟ್ಟಡ ಕಾಮಗಾರಿಗೆ ಯಾವುದೇ ಅಡ್ಡಿ.ಇಲ್ಲ ಅಗತ್ಯ ವಸ್ತು ಸಾಗಿಸುವ ವಾಹನಗಳಿಗೆ ಅಡ್ಡಿ ಇಲ್ಲ. ಕೂಲಿ ಕಾರ್ಮಿಕರು ಬೆಂಗಳೂರು ಬಿಟ್ಟು ಹೋಗಬಾರದು. ಸ್ಥಳೀಯ ಕಾರ್ಮಿಕರನ್ನು ಬಳಸಿಕೊಂಡು ಕಾಮಗಾರಿಗಳು ನಡೆಯಬಹುದು. ತಳ್ಳುವ ಗಾಡಿ, ತರಕಾರಿ ಮಾರಲು ಅವಕಾಶ ನೀಡಲಾಗಿದೆ. ಜಿಲ್ಲೆಯಿಂದ ಜಿಲ್ಲೆಗೆ ಓಡಾಟಕ್ಕೆ ಅವಕಾಶ ಇಲ್ಲ.

ಇದನ್ನೂ ಓದಿ: Karnataka Lockdown: ಕರ್ನಾಟಕ ಲಾಕ್​ಡೌನ್​; ಕೊರೊನಾ ತಡೆಗೆ ಮೇ 10ರಿಂದ 24ರ ವರೆಗೆ ಸಂಪೂರ್ಣ ರಾಜ್ಯ ಸ್ತಬ್ಧ

Karnataka Lockdown: ಕರ್ನಾಟಕ ಲಾಕ್​ಡೌನ್​ ಅವಧಿಯಲ್ಲಿ ಯಾವೆಲ್ಲಾ ಸೇವೆ ಲಭ್ಯವಿರಲಿದೆ, ಯಾವುದು ಇಲ್ಲ? ಇಲ್ಲಿದೆ ಮಾಹಿತಿ

ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ