AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಶ್ರುತಿ ಹಾಸನ್ ಜೊತೆ ಸಖತ್ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡ ನಿರ್ದೇಶಕ

ಲೋಕೇಶ್ ಕನಗರಾಜ್ ಅವರು ನಿರ್ದೇಶನದಲ್ಲಿ ಪಳಗಿದ್ದಾರೆ. ಹಲವು ಕಲಾವಿದರಿಗೆ ಅವರು ನಟನೆ ಹೇಳಿಕೊಟ್ಟಿದ್ದಾರೆ. ಈಗ ಅವರಿಗೆ ತಾವೂ ಆ್ಯಕ್ಟ್ ಮಾಡಬಹುದು ಎಂದು ಅನಿಸಿದೆ. ಈ ಕಾರಣಕ್ಕೆ ಅವರು ‘ಇನಿಮೇಲ್’ ಹಾಡಿನಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ನಟಿ ಶ್ರುತಿ ಹಾಸನ್ ಜೊತೆ ಸಖತ್ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡ ನಿರ್ದೇಶಕ
ಶ್ರುತಿ-ಲೋಕೇಶ್
ರಾಜೇಶ್ ದುಗ್ಗುಮನೆ
|

Updated on: Mar 22, 2024 | 6:59 AM

Share

ಲೋಕೇಶ್ ಕನಗರಾಜ್ (Lokesh Kanagaraj) ಅವರು ಸಾಕಷ್ಟು ಹಿಟ್ ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ‘ಕೈದಿ’, ‘ಲಿಯೋ’ ಸಿನಿಮಾಗಳು ಯಶಸ್ಸು ಕಂಡಿವೆ. ಅವರನ್ನು ನಂಬಿ ದೊಡ್ಡ ದೊಡ್ಡ ನಿರ್ಮಾಕರು ಹಣ ಹೂಡುತ್ತಿದ್ದಾರೆ. ಸ್ಟಾರ್ ಹೀರೋಗಳು ಮರು ಯೋಚಿಸದೇ ಕಾಲ್​ಶೀಟ್ ನೀಡುತ್ತಿದ್ದಾರೆ. ಈ ಮಧ್ಯೆ ಅವರು ಹೀರೋ ಆಗಿ ಬದಲಾಗಿದ್ದಾರೆ. ಕಮಲ್ ಹಾಸನ್ ಮಗಳು ಶ್ರುತಿ ಹಾಸನ್ ಜೊತೆ ಸಖತ್ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ. ಇದರ ಪ್ರೋಮೋ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

‘ಇನಿಮೇಲ್’ ಹೆಸರಿನ ವಿಡಿಯೋ ಸಾಂಗ್​ನ ತರಲಾಗುತ್ತಿದೆ. ಇದಕ್ಕಾಗಿ ಲೋಕೇಶ್ ಕನರಾಜ್ ಅವರು ನಟನಾಗಿದ್ದಾರೆ. ಕಮಲ್ ಹಾಸನ್ ಅವರು ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಮತ್ತೊಂದು ವಿಶೇಷ ಏನೆಂದರೆ ಶ್ರುತಿ ಹಾಸನ್ ಅವರು ಈ ಹಾಡಿಗೆ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಈ ಹಾಡಿನ ಪ್ರೋಮೋ ರಿಲೀಸ್ ಆಗಿದ್ದು, ಸಂಪೂರ್ಣ ವಿಡಿಯೋ ಮಾರ್ಚ್ 25ರಂದು ರಿಲೀಸ್ ಆಗಲಿದೆ.

ಇದನ್ನೂ ಓದಿ: ಲೋಕೇಶ್ ಕನಗರಾಜ್ ಸಿನಿಮಾಗೆ ಕನ್ನಡಿಗನ ಬಂಡವಾಳ; ಯಾವುದು ಈ ಚಿತ್ರ? 

ಲೋಕೇಶ್ ಕನಗರಾಜ್ ಅವರು ನಿರ್ದೇಶನದಲ್ಲಿ ಪಳಗಿದ್ದಾರೆ. ಹಲವು ಕಲಾವಿದರಿಗೆ ಅವರು ನಟನೆ ಹೇಳಿಕೊಟ್ಟಿದ್ದಾರೆ. ಈಗ ಅವರಿಗೆ ತಾವೂ ಆ್ಯಕ್ಟ್ ಮಾಡಬಹುದು ಎಂದು ಅನಿಸಿದೆ. ಈ ಕಾರಣಕ್ಕೆ ಅವರು ‘ಇನಿಮೇಲ್’ ಹಾಡಿನಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪ್ರೋಮೋ ಗಮನ ಸೆಳೆಯುತ್ತಿದೆ. ಲೋಕೇಶ್ ಹಾಗೂ ಶ್ರುತಿ ಹಾಸನ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಇವರ ಕೊಲಾಬರೇಷನ್ ಬಗ್ಗೆ ಘೋಷಣೆ ಮಾಡಲಾಗಿತ್ತು. ಇವರು ಒಟ್ಟಾಗಿ ಸಿನಿಮಾ ಮಾಡುತ್ತಾರೆ ಎಂದು ಅನೇಕರು ಭಾವಿಸಿದ್ದರು.

ಶ್ರುತಿ ಹಾಸನ್ ಅವರು ಸದ್ಯ ‘ಸಲಾರ್’ ಸಿನಿಮಾ ಗೆಲುವಿನ ಖುಷಿಯಲ್ಲಿ ಇದ್ದಾರೆ. ಈ ಸಿನಿಮಾ ಕಳೆದ ವರ್ಷಾಂತ್ಯಕ್ಕೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಲೋಕೇಶ್ ಕನರಾಜ್ ನಿರ್ದೇಶನದ ‘ಲಿಯೋ’ ಸಿನಿಮಾ ಕಳೆದ ವರ್ಷ ರಿಲೀಸ್ ಆಯಿತು. ಈ ಸಿನಿಮಾ ವಿಮರ್ಶೆ ವಿಚಾರದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡದೇ ಇದ್ದರೂ ಬಾಕ್ಸ್ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ