AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್ ಹಾಗೂ ಆಲಿಯಾ ಭಟ್​ನ ಅನ್​ಫಾಲೋ ಮಾಡಿದ ಇನ್​ಸ್ಟಾಗ್ರಾಮ್

ಏಕಾಏಕಿ ಇನ್​ಸ್ಟಾಗ್ರಾಮ್ ಅಲ್ಲು ಅರ್ಜುನ್ ಅವರನ್ನು ಅನ್​ಫಾಲೋ ಮಾಡಿದೆ. ಇದರ ಒಳಾರ್ಥ ಏನು ಎಂಬುದು ಫ್ಯಾನ್ಸ್​ಗೆ ತಿಳಿಯುತ್ತಿಲ್ಲ.

ಅಲ್ಲು ಅರ್ಜುನ್ ಹಾಗೂ ಆಲಿಯಾ ಭಟ್​ನ ಅನ್​ಫಾಲೋ ಮಾಡಿದ ಇನ್​ಸ್ಟಾಗ್ರಾಮ್
ಆಲಿಯಾ- ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Dec 26, 2023 | 11:44 AM

Share

ಅಲ್ಲು ಅರ್ಜುನ್ (Allu Arjun) ಅವರು ಇತ್ತೀಚೆಗೆ ಸಖತ್ ಸುದ್ದಿ ಆಗಿದ್ದರು. ಬರೋಬ್ಬರಿ 66.5 ಕೋಟಿ ಹಿಂಬಾಲಕರು ಇರುವ ಇನ್​ಸ್ಟಾಗ್ರಾಮ್​ ಅಧಿಕೃತ ಖಾತೆಯು ಅಲ್ಲು ಅರ್ಜುನ್ ಅವರ ಕೊಲಾಬರೇಟ್ ಮಾಡಿಕೊಂಡಿತ್ತು. ಮುಂಜಾನೆಯಿಂದ ಸಂಜೆಯವರೆಗೆ ತಮ್ಮ ದಿನಚರಿ ಹೇಗೆ ಇರುತ್ತದೆ ಎಂಬುದನ್ನು ಅಲ್ಲು ಅರ್ಜುನ್ ವಿಡಿಯೋದಲ್ಲಿ ವಿವರಿಸಿದ್ದರು. ಈ ವಿಡಿಯೋನ ಇನ್​ಸ್ಟಾಗ್ರಾಮ್ ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿತ್ತು. ಆ ಸಂದರ್ಭದಲ್ಲಿ ಅಲ್ಲು ಅರ್ಜುನ್ ಅವರನ್ನು ಇನ್​ಸ್ಟಾಗ್ರಾಮ್ ಫಾಲೋ ಮಾಡಲು ಆರಂಭಿಸಿತ್ತು. ಜೊತೆಗೆ ಆಲಿಯಾ ಭಟ್ ಅವರನ್ನೂ ಇನ್​ಸ್ಟಾಗ್ರಾಮ್ ಫಾಲೋ ಮಾಡುತ್ತಿತ್ತು. ಈಗ ಅವರನ್ನು ಅನ್​ಫಾಲೋ ಮಾಡಿದೆ.

ಅಲ್ಲು ಅರ್ಜುನ್ ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ಅವರು ‘ಪುಷ್ಪ’ ಸಿನಿಮಾದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಈಗ ಅವರು ‘ಪುಷ್ಪ 2’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅಲ್ಲು ಅರ್ಜುನ್ ಜೊತೆ ಇನ್​ಸ್ಟಾಗ್ರಾಮ್ ಕೊಲಾಬರೇಟ್ ಮಾಡಿಕೊಂಡಿದ್ದು ಸಾಕಷ್ಟು ಚರ್ಚೆ ಆಗಿತ್ತು. ಈಗ ಏಕಾಏಕಿ ಇನ್​ಸ್ಟಾಗ್ರಾಮ್ ಅಲ್ಲು ಅರ್ಜುನ್ ಅವರನ್ನು ಅನ್​ಫಾಲೋ ಮಾಡಿದೆ. ಇದರ ಒಳಾರ್ಥ ಏನು ಎಂಬುದು ಫ್ಯಾನ್ಸ್​ಗೆ ತಿಳಿಯುತ್ತಿಲ್ಲ. ಕೆಲವು ವರದಿಗಳ ಪ್ರಕಾರ ಇನ್​ಸ್ಟಾಗ್ರಾಮ್ ಸುದ್ದಿಯಲ್ಲಿರುವ ಸೆಲೆಬ್ರಿಟಿಗಳನ್ನು ಫಾಲೋ ಮಾಡುತ್ತದೆ. ಆ ಬಳಿಕ ಅವರನ್ನು ಅನ್​ಫಾಲೋ ಮಾಡುತ್ತದೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ಧತಿ ಎನ್ನಲಾಗಿದೆ.

ಅಲ್ಲು ಅರ್ಜುನ್ ಅವರನ್ನು ಬರೋಬ್ಬರಿ 2.4 ಕೋಟಿ ಜನರು ಹಿಂಬಾಲಿಸುತ್ತಿದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಅಲ್ಲು ಅರ್ಜುನ್ ಅವರು ಅಭಿಮಾನಿಗಳಿಗೋಸ್ಕರ ಕುಟುಂಬದ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಮಗಳ ಜೊತೆಗಿನ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

ಇದನ್ನೂ ಓದಿ: ಅಲ್ಲು ಅರ್ಜುನ್​ ಜೊತೆ ಸಿನಿಮಾ ಮಾಡ್ತಾರಾ ಅಟ್ಲಿ? ‘ಜವಾನ್​’ ನಿರ್ದೇಶಕನಿಗೆ ಡಿಮ್ಯಾಂಡ್​

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಇನ್ನೂ ಎರಡು ಸಿನಿಮಾಗಳನ್ನು ಅವರು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆಯೂ ಆಗಿದೆ. ತಮಿಳು ನಿರ್ದೇಶಕ ಅಟ್ಲಿ ಜೊತೆಗೂ ಅಲ್ಲು ಅರ್ಜುನ್ ಅವರು ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಇನ್ನಷ್ಟೇ ಮಾಹಿತಿ ಅಧಿಕೃತವಾಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ