AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ವಿಶ್ವ ದಾದಿಯರ ದಿನ; ನರ್ಸ್​ಗಳ ನಿಸ್ವಾರ್ಥ ಸೇವೆ ನೆನೆದ ಅಕ್ಷಯ್​ ಕುಮಾರ್​  

ಅಕ್ಷಯ್​ ಕುಮಾರ್​ ಟ್ವೀಟ್​ಗೆ ಸಾಕಷ್ಟು ಜನರು ಕಮೆಂಟ್​ ಮಾಡಿದ್ದಾರೆ. ಕೆಲ ನರ್ಸ್​ಗಳು ಕೂಡ ಇದಕ್ಕೆ ಉತ್ತರಿಸಿದ್ದು, ಅಕ್ಷಯ್​ ಕುಮಾರ್​ ವಿಷ್​ಗೆ ಧನ್ಯವಾದ ಹೇಳಿದ್ದಾರೆ.

Akshay Kumar: ವಿಶ್ವ ದಾದಿಯರ ದಿನ; ನರ್ಸ್​ಗಳ ನಿಸ್ವಾರ್ಥ ಸೇವೆ ನೆನೆದ ಅಕ್ಷಯ್​ ಕುಮಾರ್​  
ಅಕ್ಷಯ್​ ಕುಮಾರ್​
ರಾಜೇಶ್ ದುಗ್ಗುಮನೆ
|

Updated on: May 12, 2021 | 7:23 PM

Share

ಮೇ 12 ವಿಶ್ವ ದಾದಿಯರ ದಿನ. ಕೊರೊನಾ ಸಂದರ್ಭದಲ್ಲಿ ನರ್ಸ್​ಗಳು ತುಂಬಾನೇ ಕಷ್ಟಪಡುತ್ತಿದ್ದಾರೆ. ಕುಟುಂಬದವರನ್ನು ಬಿಟ್ಟು ಹಗಲು ರಾತ್ರಿ ಎನ್ನದೇ ಕೊವಿಡ್​ ರೋಗಿಗಳ ಸೇವೆಯಲ್ಲಿ ತೊಡಗಿದ್ದಾರೆ. ಈ ವಿಶೇಷ ದಿನದಂದು ನಟ ಅಕ್ಷಯ್​ ಕುಮಾರ್​ ಕೊರೊನಾದಿಂದ ಆಸ್ಪತ್ರೆಗೆ ದಾಖಲಾದಾಗ ನರ್ಸ್​ಗಳು ತಮಗೆ ನೀಡಿದ ಸೇವೆಯನ್ನು ನೆನಪಿಸಿಕೊಂಡಿದ್ದಾರೆ. ಈ ಮೂಲಕ ವಿಶ್ವ ದಾದಿಯರ ದಿನಕ್ಕೆ ಶುಭ ಹಾರೈಸಿದ್ದಾರೆ.

ಬುಧವಾರ ಈ ಬಗ್ಗೆ ಟ್ವೀಟ್​ ಮಾಡಿರುವ ಅಕ್ಷಯ್​ ಕುಮಾರ್​, ನಾನು ಇತ್ತೀಚೆಗೆ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದೆ. ಈ ವೇಳೆ ಬಿಡುವಿಲ್ಲದ ಅವರ ಕೆಲಸ ನನ್ನನ್ನು ಚಕಿತಗೊಳಿಸಿತು. ಅವರ ಕೆಲಸ ನಿಸ್ವಾರ್ಥ ಹಾಗೂ ನಿರಂತರವಾದುದು. ನಿಜವಾದ ಹೀರೋಗಳಿಗೆ ಧನ್ಯವಾದಗಳು #InternationalNursesDay ಎಂದಿದ್ದಾರೆ.

ಅಕ್ಷಯ್​ ಕುಮಾರ್​ ಟ್ವೀಟ್​ಗೆ ಸಾಕಷ್ಟು ಜನರು ಕಮೆಂಟ್​ ಮಾಡಿದ್ದಾರೆ. ಕೆಲ ನರ್ಸ್​ಗಳು ಕೂಡ ಇದಕ್ಕೆ ಉತ್ತರಿಸಿದ್ದು, ಅಕ್ಷಯ್​ ಕುಮಾರ್​ ವಿಷ್​ಗೆ ಧನ್ಯವಾದ ಹೇಳಿದ್ದಾರೆ. ಇನ್ನೂ ಕೆಲವರು ತಾವು ಆಸ್ಪತ್ರೆಗೆ ದಾಖಲಾದಾಗ ನರ್ಸ್​ಗಳು ಯಾವ ರೀತಿಯಲ್ಲಿ ಸೇವೆ ನೀಡಿದರು ಎಂಬುದನ್ನು ವಿವರಿಸಿದ್ದಾರೆ.

ಬಾಲಿವುಡ್​ನ ಖ್ಯಾತ ನಟ ಅಕ್ಷಯ್​ ಕುಮಾರ್ ಅವರಿಗೆ ಏಪ್ರಿಲ್​ನಲ್ಲಿ ಕೊವಿಡ್​ ಪಾಸಿಟಿವ್​ ಆಗಿರತ್ತು. ಇದನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದರು.  ‘ಇಂದು ಬೆಳಿಗ್ಗೆ ನನಗೆ ಕೋವಿಡ್​-19 ಪಾಸಿಟಿವ್​ ಆಗಿದೆ. ಎಲ್ಲ ನಿಯಮಗಳನ್ನು ಪಾಲಿಸಿ ನಾನು ತಕ್ಷಣ ಐಸೊಲೇಟ್​ ಆಗಿದ್ದೇನೆ. ಸದ್ಯ ಹೋಮ್​ ಕ್ವಾರಂಟೈನ್​ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ನೀವಾಗಿಯೇ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಎಚ್ಚರಿಕೆ ವಹಿಸಿ ಎಂದು ವಿನಂತಿಸಿಕೊಳ್ಳುತ್ತೇನೆ. ಶೀಘ್ರದಲ್ಲೇ ನಾನು ಗುಣಮುಖನಾಗಿ ಬರುತ್ತೇನೆ’ ಎಂದು ಅಕ್ಷಯ್​ ಕುಮಾರ್​ ಟ್ವೀಟ್​ ಮಾಡಿದ್ದರು. ನಂತರ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಇದನ್ನೂ ಓದಿ: Akshay Kumar: ನಟ ಅಕ್ಷಯ್​ ಕುಮಾರ್​ಗೆ ಕೊರೊನಾ ಪಾಸಿಟಿವ್​! ಹೋಮ್​ ಕ್ವಾರಂಟೈನ್​ನಲ್ಲಿ ಕಿಲಾಡಿ

ಕೊರೊನಾ ಸಮಯದಲ್ಲಿ 1 ಕೋಟಿ ದೇಣಿಗೆ ನೀಡಿದ್ದಾರೆ ನಟ ಅಕ್ಷಯ್ ಕುಮಾರ್

Follow Us
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!