AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ವಿಶ್ವ ದಾದಿಯರ ದಿನ; ನರ್ಸ್​ಗಳ ನಿಸ್ವಾರ್ಥ ಸೇವೆ ನೆನೆದ ಅಕ್ಷಯ್​ ಕುಮಾರ್​  

ಅಕ್ಷಯ್​ ಕುಮಾರ್​ ಟ್ವೀಟ್​ಗೆ ಸಾಕಷ್ಟು ಜನರು ಕಮೆಂಟ್​ ಮಾಡಿದ್ದಾರೆ. ಕೆಲ ನರ್ಸ್​ಗಳು ಕೂಡ ಇದಕ್ಕೆ ಉತ್ತರಿಸಿದ್ದು, ಅಕ್ಷಯ್​ ಕುಮಾರ್​ ವಿಷ್​ಗೆ ಧನ್ಯವಾದ ಹೇಳಿದ್ದಾರೆ.

Akshay Kumar: ವಿಶ್ವ ದಾದಿಯರ ದಿನ; ನರ್ಸ್​ಗಳ ನಿಸ್ವಾರ್ಥ ಸೇವೆ ನೆನೆದ ಅಕ್ಷಯ್​ ಕುಮಾರ್​  
ಅಕ್ಷಯ್​ ಕುಮಾರ್​
ರಾಜೇಶ್ ದುಗ್ಗುಮನೆ
|

Updated on: May 12, 2021 | 7:23 PM

Share

ಮೇ 12 ವಿಶ್ವ ದಾದಿಯರ ದಿನ. ಕೊರೊನಾ ಸಂದರ್ಭದಲ್ಲಿ ನರ್ಸ್​ಗಳು ತುಂಬಾನೇ ಕಷ್ಟಪಡುತ್ತಿದ್ದಾರೆ. ಕುಟುಂಬದವರನ್ನು ಬಿಟ್ಟು ಹಗಲು ರಾತ್ರಿ ಎನ್ನದೇ ಕೊವಿಡ್​ ರೋಗಿಗಳ ಸೇವೆಯಲ್ಲಿ ತೊಡಗಿದ್ದಾರೆ. ಈ ವಿಶೇಷ ದಿನದಂದು ನಟ ಅಕ್ಷಯ್​ ಕುಮಾರ್​ ಕೊರೊನಾದಿಂದ ಆಸ್ಪತ್ರೆಗೆ ದಾಖಲಾದಾಗ ನರ್ಸ್​ಗಳು ತಮಗೆ ನೀಡಿದ ಸೇವೆಯನ್ನು ನೆನಪಿಸಿಕೊಂಡಿದ್ದಾರೆ. ಈ ಮೂಲಕ ವಿಶ್ವ ದಾದಿಯರ ದಿನಕ್ಕೆ ಶುಭ ಹಾರೈಸಿದ್ದಾರೆ.

ಬುಧವಾರ ಈ ಬಗ್ಗೆ ಟ್ವೀಟ್​ ಮಾಡಿರುವ ಅಕ್ಷಯ್​ ಕುಮಾರ್​, ನಾನು ಇತ್ತೀಚೆಗೆ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದೆ. ಈ ವೇಳೆ ಬಿಡುವಿಲ್ಲದ ಅವರ ಕೆಲಸ ನನ್ನನ್ನು ಚಕಿತಗೊಳಿಸಿತು. ಅವರ ಕೆಲಸ ನಿಸ್ವಾರ್ಥ ಹಾಗೂ ನಿರಂತರವಾದುದು. ನಿಜವಾದ ಹೀರೋಗಳಿಗೆ ಧನ್ಯವಾದಗಳು #InternationalNursesDay ಎಂದಿದ್ದಾರೆ.

ಅಕ್ಷಯ್​ ಕುಮಾರ್​ ಟ್ವೀಟ್​ಗೆ ಸಾಕಷ್ಟು ಜನರು ಕಮೆಂಟ್​ ಮಾಡಿದ್ದಾರೆ. ಕೆಲ ನರ್ಸ್​ಗಳು ಕೂಡ ಇದಕ್ಕೆ ಉತ್ತರಿಸಿದ್ದು, ಅಕ್ಷಯ್​ ಕುಮಾರ್​ ವಿಷ್​ಗೆ ಧನ್ಯವಾದ ಹೇಳಿದ್ದಾರೆ. ಇನ್ನೂ ಕೆಲವರು ತಾವು ಆಸ್ಪತ್ರೆಗೆ ದಾಖಲಾದಾಗ ನರ್ಸ್​ಗಳು ಯಾವ ರೀತಿಯಲ್ಲಿ ಸೇವೆ ನೀಡಿದರು ಎಂಬುದನ್ನು ವಿವರಿಸಿದ್ದಾರೆ.

ಬಾಲಿವುಡ್​ನ ಖ್ಯಾತ ನಟ ಅಕ್ಷಯ್​ ಕುಮಾರ್ ಅವರಿಗೆ ಏಪ್ರಿಲ್​ನಲ್ಲಿ ಕೊವಿಡ್​ ಪಾಸಿಟಿವ್​ ಆಗಿರತ್ತು. ಇದನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದರು.  ‘ಇಂದು ಬೆಳಿಗ್ಗೆ ನನಗೆ ಕೋವಿಡ್​-19 ಪಾಸಿಟಿವ್​ ಆಗಿದೆ. ಎಲ್ಲ ನಿಯಮಗಳನ್ನು ಪಾಲಿಸಿ ನಾನು ತಕ್ಷಣ ಐಸೊಲೇಟ್​ ಆಗಿದ್ದೇನೆ. ಸದ್ಯ ಹೋಮ್​ ಕ್ವಾರಂಟೈನ್​ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ನೀವಾಗಿಯೇ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಎಚ್ಚರಿಕೆ ವಹಿಸಿ ಎಂದು ವಿನಂತಿಸಿಕೊಳ್ಳುತ್ತೇನೆ. ಶೀಘ್ರದಲ್ಲೇ ನಾನು ಗುಣಮುಖನಾಗಿ ಬರುತ್ತೇನೆ’ ಎಂದು ಅಕ್ಷಯ್​ ಕುಮಾರ್​ ಟ್ವೀಟ್​ ಮಾಡಿದ್ದರು. ನಂತರ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಇದನ್ನೂ ಓದಿ: Akshay Kumar: ನಟ ಅಕ್ಷಯ್​ ಕುಮಾರ್​ಗೆ ಕೊರೊನಾ ಪಾಸಿಟಿವ್​! ಹೋಮ್​ ಕ್ವಾರಂಟೈನ್​ನಲ್ಲಿ ಕಿಲಾಡಿ

ಕೊರೊನಾ ಸಮಯದಲ್ಲಿ 1 ಕೋಟಿ ದೇಣಿಗೆ ನೀಡಿದ್ದಾರೆ ನಟ ಅಕ್ಷಯ್ ಕುಮಾರ್

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು