AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ವಿಶ್ವ ದಾದಿಯರ ದಿನ; ನರ್ಸ್​ಗಳ ನಿಸ್ವಾರ್ಥ ಸೇವೆ ನೆನೆದ ಅಕ್ಷಯ್​ ಕುಮಾರ್​  

ಅಕ್ಷಯ್​ ಕುಮಾರ್​ ಟ್ವೀಟ್​ಗೆ ಸಾಕಷ್ಟು ಜನರು ಕಮೆಂಟ್​ ಮಾಡಿದ್ದಾರೆ. ಕೆಲ ನರ್ಸ್​ಗಳು ಕೂಡ ಇದಕ್ಕೆ ಉತ್ತರಿಸಿದ್ದು, ಅಕ್ಷಯ್​ ಕುಮಾರ್​ ವಿಷ್​ಗೆ ಧನ್ಯವಾದ ಹೇಳಿದ್ದಾರೆ.

Akshay Kumar: ವಿಶ್ವ ದಾದಿಯರ ದಿನ; ನರ್ಸ್​ಗಳ ನಿಸ್ವಾರ್ಥ ಸೇವೆ ನೆನೆದ ಅಕ್ಷಯ್​ ಕುಮಾರ್​  
ಅಕ್ಷಯ್​ ಕುಮಾರ್​
Follow us
ರಾಜೇಶ್ ದುಗ್ಗುಮನೆ
|

Updated on: May 12, 2021 | 7:23 PM

ಮೇ 12 ವಿಶ್ವ ದಾದಿಯರ ದಿನ. ಕೊರೊನಾ ಸಂದರ್ಭದಲ್ಲಿ ನರ್ಸ್​ಗಳು ತುಂಬಾನೇ ಕಷ್ಟಪಡುತ್ತಿದ್ದಾರೆ. ಕುಟುಂಬದವರನ್ನು ಬಿಟ್ಟು ಹಗಲು ರಾತ್ರಿ ಎನ್ನದೇ ಕೊವಿಡ್​ ರೋಗಿಗಳ ಸೇವೆಯಲ್ಲಿ ತೊಡಗಿದ್ದಾರೆ. ಈ ವಿಶೇಷ ದಿನದಂದು ನಟ ಅಕ್ಷಯ್​ ಕುಮಾರ್​ ಕೊರೊನಾದಿಂದ ಆಸ್ಪತ್ರೆಗೆ ದಾಖಲಾದಾಗ ನರ್ಸ್​ಗಳು ತಮಗೆ ನೀಡಿದ ಸೇವೆಯನ್ನು ನೆನಪಿಸಿಕೊಂಡಿದ್ದಾರೆ. ಈ ಮೂಲಕ ವಿಶ್ವ ದಾದಿಯರ ದಿನಕ್ಕೆ ಶುಭ ಹಾರೈಸಿದ್ದಾರೆ.

ಬುಧವಾರ ಈ ಬಗ್ಗೆ ಟ್ವೀಟ್​ ಮಾಡಿರುವ ಅಕ್ಷಯ್​ ಕುಮಾರ್​, ನಾನು ಇತ್ತೀಚೆಗೆ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದೆ. ಈ ವೇಳೆ ಬಿಡುವಿಲ್ಲದ ಅವರ ಕೆಲಸ ನನ್ನನ್ನು ಚಕಿತಗೊಳಿಸಿತು. ಅವರ ಕೆಲಸ ನಿಸ್ವಾರ್ಥ ಹಾಗೂ ನಿರಂತರವಾದುದು. ನಿಜವಾದ ಹೀರೋಗಳಿಗೆ ಧನ್ಯವಾದಗಳು #InternationalNursesDay ಎಂದಿದ್ದಾರೆ.

ಅಕ್ಷಯ್​ ಕುಮಾರ್​ ಟ್ವೀಟ್​ಗೆ ಸಾಕಷ್ಟು ಜನರು ಕಮೆಂಟ್​ ಮಾಡಿದ್ದಾರೆ. ಕೆಲ ನರ್ಸ್​ಗಳು ಕೂಡ ಇದಕ್ಕೆ ಉತ್ತರಿಸಿದ್ದು, ಅಕ್ಷಯ್​ ಕುಮಾರ್​ ವಿಷ್​ಗೆ ಧನ್ಯವಾದ ಹೇಳಿದ್ದಾರೆ. ಇನ್ನೂ ಕೆಲವರು ತಾವು ಆಸ್ಪತ್ರೆಗೆ ದಾಖಲಾದಾಗ ನರ್ಸ್​ಗಳು ಯಾವ ರೀತಿಯಲ್ಲಿ ಸೇವೆ ನೀಡಿದರು ಎಂಬುದನ್ನು ವಿವರಿಸಿದ್ದಾರೆ.

ಬಾಲಿವುಡ್​ನ ಖ್ಯಾತ ನಟ ಅಕ್ಷಯ್​ ಕುಮಾರ್ ಅವರಿಗೆ ಏಪ್ರಿಲ್​ನಲ್ಲಿ ಕೊವಿಡ್​ ಪಾಸಿಟಿವ್​ ಆಗಿರತ್ತು. ಇದನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದರು.  ‘ಇಂದು ಬೆಳಿಗ್ಗೆ ನನಗೆ ಕೋವಿಡ್​-19 ಪಾಸಿಟಿವ್​ ಆಗಿದೆ. ಎಲ್ಲ ನಿಯಮಗಳನ್ನು ಪಾಲಿಸಿ ನಾನು ತಕ್ಷಣ ಐಸೊಲೇಟ್​ ಆಗಿದ್ದೇನೆ. ಸದ್ಯ ಹೋಮ್​ ಕ್ವಾರಂಟೈನ್​ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ನೀವಾಗಿಯೇ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಎಚ್ಚರಿಕೆ ವಹಿಸಿ ಎಂದು ವಿನಂತಿಸಿಕೊಳ್ಳುತ್ತೇನೆ. ಶೀಘ್ರದಲ್ಲೇ ನಾನು ಗುಣಮುಖನಾಗಿ ಬರುತ್ತೇನೆ’ ಎಂದು ಅಕ್ಷಯ್​ ಕುಮಾರ್​ ಟ್ವೀಟ್​ ಮಾಡಿದ್ದರು. ನಂತರ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಇದನ್ನೂ ಓದಿ: Akshay Kumar: ನಟ ಅಕ್ಷಯ್​ ಕುಮಾರ್​ಗೆ ಕೊರೊನಾ ಪಾಸಿಟಿವ್​! ಹೋಮ್​ ಕ್ವಾರಂಟೈನ್​ನಲ್ಲಿ ಕಿಲಾಡಿ

ಕೊರೊನಾ ಸಮಯದಲ್ಲಿ 1 ಕೋಟಿ ದೇಣಿಗೆ ನೀಡಿದ್ದಾರೆ ನಟ ಅಕ್ಷಯ್ ಕುಮಾರ್

ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್