AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ಬೆಟ್ಟಿಂಗ್ ಪ್ರಮೋಷನ್ ಮಾಡಿದ 40 ಇನ್​ಫ್ಲುಯೆನ್ಸ್​ರ್ಸ್​​; ಬಿಸಿ ಮುಟ್ಟಿಸಿದ ಸೈಬರ್ ಪೊಲೀಸರು

ಐಪಿಎಲ್ ಸೀಸನ್‌ನಲ್ಲಿ ಬೆಟ್ಟಿಂಗ್ ಪ್ರಚಾರ ಮಾಡುತ್ತಿದ್ದ 40ಕ್ಕೂ ಹೆಚ್ಚು ಸೋಶಿಯಲ್ ಮೀಡಿಯಾ ಇನ್​​ಫ್ಲುಯೆನ್ಸರ್‌ಗಳಿಗೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇನ್‌ಸ್ಟಾಗ್ರಾಂ ಸ್ಟೋರಿಗಳ ಮೂಲಕ ಬೆಟ್ಟಿಂಗ್ ಲಿಂಕ್‌ಗಳನ್ನು ಹಂಚಿಕೊಳ್ಳುತ್ತಿದ್ದ ಇವರಿಗೆ ನೋಟೀಸ್ ಜಾರಿ ಮಾಡಲಾಗಿದೆ. ಇದು ಮರುಕಳಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.

ಐಪಿಎಲ್ ಬೆಟ್ಟಿಂಗ್ ಪ್ರಮೋಷನ್ ಮಾಡಿದ 40 ಇನ್​ಫ್ಲುಯೆನ್ಸ್​ರ್ಸ್​​; ಬಿಸಿ ಮುಟ್ಟಿಸಿದ ಸೈಬರ್ ಪೊಲೀಸರು
ಐಪಿಎಲ್ ಬೆಟ್ಟಿಂಗ್
Follow us
Prajwal Kumar NY
| Updated By: ರಾಜೇಶ್ ದುಗ್ಗುಮನೆ

Updated on:Apr 08, 2025 | 7:56 AM

ಇದು ಐಪಿಎಲ್ (IPL) ಸಮಯ. ಬೆಟ್ಟಿಂಗಳು ಈ ಸಂದರ್ಭದಲ್ಲಿ ಜೋರಾಗಿ ನಡೆಯುತ್ತವೆ. ಕೇವಲ ಮ್ಯಾಚ್ ಯಾರು ವಿನ್ ಆಗುತ್ತಾರೆ ಎಂಬುದರ ಮೇಲೆ ಮಾತ್ರ ಬೆಟ್ಟಿಂಗ್ ನಡೆಯೋದಿಲ್ಲ. ಯಾರು ಟಾಸ್​ ಗೆಲ್ಲುತ್ತಾರೆ, ಯಾವ ಓವರ್​ನಲ್ಲಿ ಎಷ್ಟು ರನ್ ಬರುತ್ತದೆ ಈ ರೀತಿ ಹಲವು ರೀತಿಗಳಲ್ಲಿ ಬೆಟ್ಟಿಂಗ್ ಮಾಡಲಾಗುತ್ತದೆ. ಈಗ ಈ ರೀತಿಯ ಬೆಟ್ಟಿಂಗ್​ಗಳನ್ನು ಪ್ರಮೋಷನ್ ಮಾಡುವ ಸೋಶಿಯಲ್ ಮೀಡಿಯಾ ಇನ್​ಫ್ಲುಯೆನ್ಸರ್​ಗಳಿಗೆ ಸೈಬರ್ ಕ್ರೈಮ್ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ನೋಟಿಸ್ ಕೊಟ್ಟು ಎಚ್ಚರಿಕೆ ನೀಡಿದ್ದಾರೆ. ಇದು ಮರುಕಳಿಸಿದರೆ ಕ್ರಮ ಎದುರಿಸಬೇಕಾಗುತ್ತದೆ ಎಂದು ಪೊಲೀಸರು ವಾರ್ನಿಂಗ್ ನೀಡಿದ್ದಾರೆ.

ಸೋಶಿಯಲ್ ಮೀಡಿಯಾ ಇನ್​ಫ್ಲುಯೆನ್ಸರ್​ಗಳು ಎನಿಸಿಕೊಂಡಿರೋ ವರುಣ್ ಆರಾಧ್ಯ, ಸೋನುಗೌಡ, ಶಿಲ್ಪಾಗೌಡ, ದೀಪಕ್ ಗೌಡ ಸೇರಿ 40ಕ್ಕೂ ಹೆಚ್ಚು ಸೋಶಿಯಲ್ ಮೀಡಿಯಾ ಇನ್​ಫ್ಲುಯೆನ್ಸರ್​ಗಳಿಗೆ ಸೈಬರ್ ಕ್ರೈಂ ಪೊಲೀಸರಿಂದ ವಾರ್ನಿಂಗ್ ಸಿಕ್ಕಿದೆ. ಇವರ ಇನ್​​ಸ್ಟಾಗ್ರಾಂ ಚಟುವಟಿಕೆಗಳನ್ನು ನೋಡಿ ಈ ವಾರ್ನಿಂಗ್ ನೀಡಲಾಗಿದೆ.

ಸ್ಟೋರಿಯಲ್ಲಿ ಬೆಟ್ಟಿಂಗ್ ಪ್ರಮೋಷನ್

ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಇವರುಗಳು ಬೆಟ್ಟಿಂಗ್ ಪ್ರಮೋಷನ್ ಮಾಡುತ್ತಿದ್ದರು. ಯಾವ ಟೀಂ ಗೆಲ್ಲುತ್ತದೆ, ಯಾವ ಟೀಮ್ ಟಾಸ್ ಗೆಲ್ಲುತ್ತದೆ, ಯಾವ ಟೀಂ ಸೋಲುತ್ತದೆ ಎಂದು ಮಾಹಿತಿ ತಿಳಿಸೋ ವಾಟ್ಸಾಪ್ ಗ್ರೂಪ್​ಗಳ ಲಿಂಕ್ ಹಾಕಿ ಅದಕ್ಕೆ ಜಾಯಿನ್ ಆಗುವಂತೆ ಹಿಂಬಾಲಕರ ಬಳಿ ಕೋರುತ್ತಿದ್ದರು. ಬೆಟ್ಟಿಂಗ್ ಬುಕ್ಕಿಗಳು ನೀಡೋ ಡೀಟೆಲ್ಸ್ ಮೇರೆಗೆ ಸ್ಟೋರಿ ಹಾಕಲಾಗುತ್ತಿತ್ತು ಎನ್ನಲಾಗಿದೆ.

ಇದನ್ನೂ ಓದಿ
Image
‘ಕೊಳಕು ಅಂಟದ ಬಿಳಿ ಹಾಳೆ’; ಧನುಗೆ ಪತ್ರ ಬರೆದು ವಿಶ್ ತಿಳಿಸಿದ ತ್ರಿವಿಕ್ರಂ
Image
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ
Image
‘ಬುದ್ಧಿವಂತರು ಪ್ರೀತಿಸುತ್ತಾರೆ, ಮೂರ್ಖರು ಮದುವೆಯಾಗುತ್ತಾರೆ’; RGV
Image
ರಿಯಾಲಿಟಿ ಶೋಗಳಲ್ಲಿ ಡಬಲ್ ಮೀನಿಂಗ್ ಡೈಲಾಗ್; ರವಿಚಂದ್ರನ್ ಬೇಸರ

ಹಣ ಪಡೆಯುತ್ತಿದ್ದರು..

ಸಾಮಾನ್ಯವಾಗಿ ಸೆಲೆಬ್ರಿಟಿಗಳು ಯಾವುದೇ ಬ್ರ್ಯಾಂಡ್ ಪ್ರಮೋಟ್ ಮಾಡಿದರೂ ಸಾಕಷ್ಟು ಹಣ ಪಡೆಯುತ್ತಾರೆ. ಅದೇ ರೀತಿ ಇವರುಗಳು ಕೂಡ ಪ್ರತಿ ಇನ್​ಸ್ಟಾಗ್ರಾಮ್ ಸ್ಟೋರಿಗೆ ಸಾವಿರದಿಂದ ಐದು ಸಾವಿರ ರೂಪಾಯಿ ತನಕ ಹಣ ಪಡೆದಿದ್ದರು. ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಸೈಬರ್  ಪೊಲೀಸರು ಗಮನಿಸಿದ್ದರು.

ಇದನ್ನೂ ಓದಿ: ಡಿ ಬಾಸ್ ಸಿನಿಮಾದ ಹಾಡಿಗೆ ಸೋನು ಗೌಡ ಬಿಂದಾಸ್ ಡ್ಯಾನ್ಸ್

ವಿಚಾರಣೆಗೆ ಆಹ್ವಾನ

ಇನ್​​ಸ್ಟಾಗ್ರಾಮ್​ ಚಟುವಟಿಕೆ ಗಮನಿಸಿರುವ ಪೊಲೀಸರು ಕರೆ ಮಾಡಿ ಇವರುಗಳನ್ನು ವಿಚಾರಣೆಗೆ ಪೊಲೀಸರು ಕರೆದಿದ್ದಾರೆ. ಈಗಾಗಲೇ 20ಕ್ಕೂ ಹೆಚ್ಚು ಜನ ರೀಲ್ಸ್ ಇನ್​ಫ್ಲುಯೆನ್ಸರ್​ಗಳ ವಿಚಾರಣೆ ನಡೆದಿದೆ ಎನ್ನಲಾಗಿದೆ. ಇಲ್ಲಿ ಕೇವಲ ಬೆಂಗಳೂರಿನವರು ಮಾತ್ರ ಇಲ್ಲ. ಮಂಗಳೂರು, ಮಂಡ್ಯ, ಹುಬ್ಬಳ್ಳಿ ಎಲ್ಲಾ ಜಿಲ್ಲೆಗಳ ಇನ್​ಫ್ಲುಯೆನ್ಸರ್​ಗಳ ಕರೆಸಿ ವಿಚಾರಣೆ ಮಾಡಿದ್ದಾರೆ. ಇನ್ಮುಂದೆ ಬೆಟ್ಟಿಂಗ್ ಪ್ರಮೋಷನ್ ಮಾಡದಂತೆ ಖಡಕ್ ವಾರ್ನ್ ಮಾಡಿ ಕಳುಹಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:44 am, Tue, 8 April 25

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ